AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಯ್ಡಾ: ಲಿವ್​-ಇನ್ ಸಂಗಾತಿಯ ಕೊಂಕು ಮಾತಿನಿಂದ ಬೇಸತ್ತು ಟೆಕ್ಕಿ ಆತ್ಮಹತ್ಯೆ

ಇತ್ತೀಚೆಗಷ್ಟೇ ಹೆಂಡತಿಯ ಕಾಟದಿಂದ ಬೇಸತ್ತು ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದರು ಇದರ ಬೆನ್ನಲ್ಲೇ ಮತ್ತೊಂದು ಘಟನೆ ನೋಯ್ಡಾದಲ್ಲಿ ನಡೆದಿದೆ. ಲಿವ್​-ಇನ್ ಸಂಗಾತಿಯ ಕೊಂಕು ಮಾತಿನಿಂದ ಬೇಸತ್ತು ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ಸಮಯದಿಂದ ಟೆಕ್ಕಿಗೆ ಕೆಲಸವಿಲ್ಲದೆ ನಿರುದ್ಯೋಗಿಯಾಗಿದ್ದರು. ಇದೇ ವಿಚಾರವಾಗಿ ಪದೇ ಪದೇ ಗೆಳತಿ ಕೊಂಕು ಮಾತನಾಡುತ್ತಿದ್ದಳು, ಅದನ್ನು ಕೇಳಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನೋಯ್ಡಾ: ಲಿವ್​-ಇನ್ ಸಂಗಾತಿಯ ಕೊಂಕು ಮಾತಿನಿಂದ ಬೇಸತ್ತು ಟೆಕ್ಕಿ ಆತ್ಮಹತ್ಯೆ
Follow us
ನಯನಾ ರಾಜೀವ್
|

Updated on: Dec 15, 2024 | 9:50 AM

ಇತ್ತೀಚೆಗಷ್ಟೇ ಹೆಂಡತಿಯ ಕಾಟದಿಂದ ಬೇಸತ್ತು ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದರು ಇದರ ಬೆನ್ನಲ್ಲೇ ಮತ್ತೊಂದು ಘಟನೆ ನೋಯ್ಡಾದಲ್ಲಿ ನಡೆದಿದೆ. ಲಿವ್​-ಇನ್ ಸಂಗಾತಿಯ ಕೊಂಕು ಮಾತಿನಿಂದ ಬೇಸತ್ತು ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ಸಮಯದಿಂದ ಟೆಕ್ಕಿಗೆ ಕೆಲಸವಿಲ್ಲದೆ ನಿರುದ್ಯೋಗಿಯಾಗಿದ್ದರು. ಇದೇ ವಿಚಾರವಾಗಿ ಪದೇ ಪದೇ ಗೆಳತಿ ಕೊಂಕು ಮಾತನಾಡುತ್ತಿದ್ದಳು, ಅದನ್ನು ಕೇಳಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಯಾಂಕ್ ಚಂದೇಲ್ ಎಂದು ಗುರುತಿಸಲಾದ ಮೃತ ಇಂಜಿನಿಯರ್​ಗೆ ಕೆಲಸವಿಲ್ಲದ ಕಾರಣ ಮಾನಸಿಕ ಒತ್ತಡದಲ್ಲಿದ್ದರು, ಜತೆಗೆ ತನ್ನ ಸಂಗಾತಿಯ ಕುಹಕ ಮಾತುಗಳನ್ನು ಕೇಳಿ ಮತ್ತಷ್ಟು ಡಿಪ್ರೆಶನ್​ಗೆ ಹೋಗಿದ್ದರು. ಉತ್ತರ ಪ್ರದೇಶದ ಜಲಾಲಾಬಾದ್‌ನವರಾದ ಚಂದೇಲ್, ಬಂಡಾ ಮೂಲದ ಮಹಿಳೆಯೊಂದಿಗೆ ಸುಮಾರು ಏಳು ವರ್ಷಗಳಿಂದ ಸಂಬಂಧ ಹೊಂದಿದ್ದರು. ನೋಯ್ಡಾದ ಸೆಕ್ಟರ್ 73 ರಲ್ಲಿ ನಾಲ್ಕು ವರ್ಷಗಳಿಂದ ಲಿವ್ ಇನ್ ರಿಲೇಷನ್​ಶಿಪ್​ನಲ್ಲಿದ್ದರು.

ಡೆತ್​ನೋಟ್​ನಲ್ಲಿ ಏನೂ ಕೆಲಸವಿಲ್ಲ, ಇಡೀ ದಿನ ಮನೆಯಲ್ಲಿ ಕೂತು ತಿನ್ನೋದೊಂದೇ ಕೆಲಸ ಎನ್ನುವ ಮಾತು ತೀರಾ ಮನಸ್ಸು ಹಾಳುಮಾಡಿತ್ತು. ಈ ಎಲ್ಲಾ ಕಾರಣಗಳಿಂದಾಗಿ ತಾನು ಸಾಯುವ ನಿರ್ಧಾರ ಮಾಡಿದ್ದೇನೆ ಎಂದು ಬರೆದಿದ್ದರು. ಶುಕ್ರವಾರ ಸಂಜೆ ಕೆಲಸ ಮುಗಿಸಿ ಬಂದ ಬಳಿಕ ಆಕೆಗೆ ಮಯಾಂಕ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.

ಮತ್ತಷ್ಟು ಓದಿ:  ಹೆಂಡತಿ ಕಾಟದಿಂದ ಬೆಂಗಳೂರಿನ ಇಂಜಿನಿಯರ್ ಅತುಲ್ ಸುಭಾಷ್ ಆತ್ಮಹತ್ಯೆ; ಟ್ವಿಟ್ಟರ್​ನಲ್ಲಿ ಟ್ರೆಂಡ್ ಆಯ್ತು ಮೆನ್​ಟೂ ಹ್ಯಾಶ್​ಟ್ಯಾಗ್

ಪೊಲೀಸ್ ತಂಡ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ತನಿಖೆ ನಡೆಸುತ್ತಿದೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಇಂಜಿನಿಯರ್ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ರಾಷ್ಟ್ರವ್ಯಾಪಿ ಆಕ್ರೋಶ ವ್ಯಕ್ತವಾಗುತ್ತಿರುವ ನಡುವೆಯೇ ಈ ಘಟನೆ ನಡೆದಿದೆ.

ವಿಚ್ಛೇದನಕ್ಕೆ ಸಂಬಂಧಿಸಿ ಪತ್ನಿ ನಿಕಿತಾ ಸಿಂಘಾನಿಯಾ ತನಗೆ 3 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದಾಗಿ ಡೆತ್​ನೋಟ್​ನಲ್ಲಿ ಬರೆದಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ