AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಯ್ಡಾ: ಲಿವ್​-ಇನ್ ಸಂಗಾತಿಯ ಕೊಂಕು ಮಾತಿನಿಂದ ಬೇಸತ್ತು ಟೆಕ್ಕಿ ಆತ್ಮಹತ್ಯೆ

ಇತ್ತೀಚೆಗಷ್ಟೇ ಹೆಂಡತಿಯ ಕಾಟದಿಂದ ಬೇಸತ್ತು ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದರು ಇದರ ಬೆನ್ನಲ್ಲೇ ಮತ್ತೊಂದು ಘಟನೆ ನೋಯ್ಡಾದಲ್ಲಿ ನಡೆದಿದೆ. ಲಿವ್​-ಇನ್ ಸಂಗಾತಿಯ ಕೊಂಕು ಮಾತಿನಿಂದ ಬೇಸತ್ತು ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ಸಮಯದಿಂದ ಟೆಕ್ಕಿಗೆ ಕೆಲಸವಿಲ್ಲದೆ ನಿರುದ್ಯೋಗಿಯಾಗಿದ್ದರು. ಇದೇ ವಿಚಾರವಾಗಿ ಪದೇ ಪದೇ ಗೆಳತಿ ಕೊಂಕು ಮಾತನಾಡುತ್ತಿದ್ದಳು, ಅದನ್ನು ಕೇಳಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನೋಯ್ಡಾ: ಲಿವ್​-ಇನ್ ಸಂಗಾತಿಯ ಕೊಂಕು ಮಾತಿನಿಂದ ಬೇಸತ್ತು ಟೆಕ್ಕಿ ಆತ್ಮಹತ್ಯೆ
ನಯನಾ ರಾಜೀವ್
|

Updated on: Dec 15, 2024 | 9:50 AM

Share

ಇತ್ತೀಚೆಗಷ್ಟೇ ಹೆಂಡತಿಯ ಕಾಟದಿಂದ ಬೇಸತ್ತು ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದರು ಇದರ ಬೆನ್ನಲ್ಲೇ ಮತ್ತೊಂದು ಘಟನೆ ನೋಯ್ಡಾದಲ್ಲಿ ನಡೆದಿದೆ. ಲಿವ್​-ಇನ್ ಸಂಗಾತಿಯ ಕೊಂಕು ಮಾತಿನಿಂದ ಬೇಸತ್ತು ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ಸಮಯದಿಂದ ಟೆಕ್ಕಿಗೆ ಕೆಲಸವಿಲ್ಲದೆ ನಿರುದ್ಯೋಗಿಯಾಗಿದ್ದರು. ಇದೇ ವಿಚಾರವಾಗಿ ಪದೇ ಪದೇ ಗೆಳತಿ ಕೊಂಕು ಮಾತನಾಡುತ್ತಿದ್ದಳು, ಅದನ್ನು ಕೇಳಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಯಾಂಕ್ ಚಂದೇಲ್ ಎಂದು ಗುರುತಿಸಲಾದ ಮೃತ ಇಂಜಿನಿಯರ್​ಗೆ ಕೆಲಸವಿಲ್ಲದ ಕಾರಣ ಮಾನಸಿಕ ಒತ್ತಡದಲ್ಲಿದ್ದರು, ಜತೆಗೆ ತನ್ನ ಸಂಗಾತಿಯ ಕುಹಕ ಮಾತುಗಳನ್ನು ಕೇಳಿ ಮತ್ತಷ್ಟು ಡಿಪ್ರೆಶನ್​ಗೆ ಹೋಗಿದ್ದರು. ಉತ್ತರ ಪ್ರದೇಶದ ಜಲಾಲಾಬಾದ್‌ನವರಾದ ಚಂದೇಲ್, ಬಂಡಾ ಮೂಲದ ಮಹಿಳೆಯೊಂದಿಗೆ ಸುಮಾರು ಏಳು ವರ್ಷಗಳಿಂದ ಸಂಬಂಧ ಹೊಂದಿದ್ದರು. ನೋಯ್ಡಾದ ಸೆಕ್ಟರ್ 73 ರಲ್ಲಿ ನಾಲ್ಕು ವರ್ಷಗಳಿಂದ ಲಿವ್ ಇನ್ ರಿಲೇಷನ್​ಶಿಪ್​ನಲ್ಲಿದ್ದರು.

ಡೆತ್​ನೋಟ್​ನಲ್ಲಿ ಏನೂ ಕೆಲಸವಿಲ್ಲ, ಇಡೀ ದಿನ ಮನೆಯಲ್ಲಿ ಕೂತು ತಿನ್ನೋದೊಂದೇ ಕೆಲಸ ಎನ್ನುವ ಮಾತು ತೀರಾ ಮನಸ್ಸು ಹಾಳುಮಾಡಿತ್ತು. ಈ ಎಲ್ಲಾ ಕಾರಣಗಳಿಂದಾಗಿ ತಾನು ಸಾಯುವ ನಿರ್ಧಾರ ಮಾಡಿದ್ದೇನೆ ಎಂದು ಬರೆದಿದ್ದರು. ಶುಕ್ರವಾರ ಸಂಜೆ ಕೆಲಸ ಮುಗಿಸಿ ಬಂದ ಬಳಿಕ ಆಕೆಗೆ ಮಯಾಂಕ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.

ಮತ್ತಷ್ಟು ಓದಿ:  ಹೆಂಡತಿ ಕಾಟದಿಂದ ಬೆಂಗಳೂರಿನ ಇಂಜಿನಿಯರ್ ಅತುಲ್ ಸುಭಾಷ್ ಆತ್ಮಹತ್ಯೆ; ಟ್ವಿಟ್ಟರ್​ನಲ್ಲಿ ಟ್ರೆಂಡ್ ಆಯ್ತು ಮೆನ್​ಟೂ ಹ್ಯಾಶ್​ಟ್ಯಾಗ್

ಪೊಲೀಸ್ ತಂಡ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ತನಿಖೆ ನಡೆಸುತ್ತಿದೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಇಂಜಿನಿಯರ್ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ರಾಷ್ಟ್ರವ್ಯಾಪಿ ಆಕ್ರೋಶ ವ್ಯಕ್ತವಾಗುತ್ತಿರುವ ನಡುವೆಯೇ ಈ ಘಟನೆ ನಡೆದಿದೆ.

ವಿಚ್ಛೇದನಕ್ಕೆ ಸಂಬಂಧಿಸಿ ಪತ್ನಿ ನಿಕಿತಾ ಸಿಂಘಾನಿಯಾ ತನಗೆ 3 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದಾಗಿ ಡೆತ್​ನೋಟ್​ನಲ್ಲಿ ಬರೆದಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್