AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಯ್ಡಾ: ಲಿವ್​-ಇನ್ ಸಂಗಾತಿಯ ಕೊಂಕು ಮಾತಿನಿಂದ ಬೇಸತ್ತು ಟೆಕ್ಕಿ ಆತ್ಮಹತ್ಯೆ

ಇತ್ತೀಚೆಗಷ್ಟೇ ಹೆಂಡತಿಯ ಕಾಟದಿಂದ ಬೇಸತ್ತು ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದರು ಇದರ ಬೆನ್ನಲ್ಲೇ ಮತ್ತೊಂದು ಘಟನೆ ನೋಯ್ಡಾದಲ್ಲಿ ನಡೆದಿದೆ. ಲಿವ್​-ಇನ್ ಸಂಗಾತಿಯ ಕೊಂಕು ಮಾತಿನಿಂದ ಬೇಸತ್ತು ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ಸಮಯದಿಂದ ಟೆಕ್ಕಿಗೆ ಕೆಲಸವಿಲ್ಲದೆ ನಿರುದ್ಯೋಗಿಯಾಗಿದ್ದರು. ಇದೇ ವಿಚಾರವಾಗಿ ಪದೇ ಪದೇ ಗೆಳತಿ ಕೊಂಕು ಮಾತನಾಡುತ್ತಿದ್ದಳು, ಅದನ್ನು ಕೇಳಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನೋಯ್ಡಾ: ಲಿವ್​-ಇನ್ ಸಂಗಾತಿಯ ಕೊಂಕು ಮಾತಿನಿಂದ ಬೇಸತ್ತು ಟೆಕ್ಕಿ ಆತ್ಮಹತ್ಯೆ
ನಯನಾ ರಾಜೀವ್
|

Updated on: Dec 15, 2024 | 9:50 AM

Share

ಇತ್ತೀಚೆಗಷ್ಟೇ ಹೆಂಡತಿಯ ಕಾಟದಿಂದ ಬೇಸತ್ತು ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದರು ಇದರ ಬೆನ್ನಲ್ಲೇ ಮತ್ತೊಂದು ಘಟನೆ ನೋಯ್ಡಾದಲ್ಲಿ ನಡೆದಿದೆ. ಲಿವ್​-ಇನ್ ಸಂಗಾತಿಯ ಕೊಂಕು ಮಾತಿನಿಂದ ಬೇಸತ್ತು ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ಸಮಯದಿಂದ ಟೆಕ್ಕಿಗೆ ಕೆಲಸವಿಲ್ಲದೆ ನಿರುದ್ಯೋಗಿಯಾಗಿದ್ದರು. ಇದೇ ವಿಚಾರವಾಗಿ ಪದೇ ಪದೇ ಗೆಳತಿ ಕೊಂಕು ಮಾತನಾಡುತ್ತಿದ್ದಳು, ಅದನ್ನು ಕೇಳಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಯಾಂಕ್ ಚಂದೇಲ್ ಎಂದು ಗುರುತಿಸಲಾದ ಮೃತ ಇಂಜಿನಿಯರ್​ಗೆ ಕೆಲಸವಿಲ್ಲದ ಕಾರಣ ಮಾನಸಿಕ ಒತ್ತಡದಲ್ಲಿದ್ದರು, ಜತೆಗೆ ತನ್ನ ಸಂಗಾತಿಯ ಕುಹಕ ಮಾತುಗಳನ್ನು ಕೇಳಿ ಮತ್ತಷ್ಟು ಡಿಪ್ರೆಶನ್​ಗೆ ಹೋಗಿದ್ದರು. ಉತ್ತರ ಪ್ರದೇಶದ ಜಲಾಲಾಬಾದ್‌ನವರಾದ ಚಂದೇಲ್, ಬಂಡಾ ಮೂಲದ ಮಹಿಳೆಯೊಂದಿಗೆ ಸುಮಾರು ಏಳು ವರ್ಷಗಳಿಂದ ಸಂಬಂಧ ಹೊಂದಿದ್ದರು. ನೋಯ್ಡಾದ ಸೆಕ್ಟರ್ 73 ರಲ್ಲಿ ನಾಲ್ಕು ವರ್ಷಗಳಿಂದ ಲಿವ್ ಇನ್ ರಿಲೇಷನ್​ಶಿಪ್​ನಲ್ಲಿದ್ದರು.

ಡೆತ್​ನೋಟ್​ನಲ್ಲಿ ಏನೂ ಕೆಲಸವಿಲ್ಲ, ಇಡೀ ದಿನ ಮನೆಯಲ್ಲಿ ಕೂತು ತಿನ್ನೋದೊಂದೇ ಕೆಲಸ ಎನ್ನುವ ಮಾತು ತೀರಾ ಮನಸ್ಸು ಹಾಳುಮಾಡಿತ್ತು. ಈ ಎಲ್ಲಾ ಕಾರಣಗಳಿಂದಾಗಿ ತಾನು ಸಾಯುವ ನಿರ್ಧಾರ ಮಾಡಿದ್ದೇನೆ ಎಂದು ಬರೆದಿದ್ದರು. ಶುಕ್ರವಾರ ಸಂಜೆ ಕೆಲಸ ಮುಗಿಸಿ ಬಂದ ಬಳಿಕ ಆಕೆಗೆ ಮಯಾಂಕ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.

ಮತ್ತಷ್ಟು ಓದಿ:  ಹೆಂಡತಿ ಕಾಟದಿಂದ ಬೆಂಗಳೂರಿನ ಇಂಜಿನಿಯರ್ ಅತುಲ್ ಸುಭಾಷ್ ಆತ್ಮಹತ್ಯೆ; ಟ್ವಿಟ್ಟರ್​ನಲ್ಲಿ ಟ್ರೆಂಡ್ ಆಯ್ತು ಮೆನ್​ಟೂ ಹ್ಯಾಶ್​ಟ್ಯಾಗ್

ಪೊಲೀಸ್ ತಂಡ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ತನಿಖೆ ನಡೆಸುತ್ತಿದೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಇಂಜಿನಿಯರ್ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ರಾಷ್ಟ್ರವ್ಯಾಪಿ ಆಕ್ರೋಶ ವ್ಯಕ್ತವಾಗುತ್ತಿರುವ ನಡುವೆಯೇ ಈ ಘಟನೆ ನಡೆದಿದೆ.

ವಿಚ್ಛೇದನಕ್ಕೆ ಸಂಬಂಧಿಸಿ ಪತ್ನಿ ನಿಕಿತಾ ಸಿಂಘಾನಿಯಾ ತನಗೆ 3 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದಾಗಿ ಡೆತ್​ನೋಟ್​ನಲ್ಲಿ ಬರೆದಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್