AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್​ ಮುಂದೆ ಹಾಜರಾಗದ ಹಿನ್ನೆಲೆ ಪಂಜಾಬ್​ನ ಸ್ಪೀಕರ್, ಇಬ್ಬರು ಸಚಿವರ ವಿರುದ್ಧ ಜಾಮೀನುರಹಿತ ವಾರೆಂಟ್ ಜಾರಿ

2020ರ ಆಗಸ್ಟ್‌ನಲ್ಲಿ ಗಡಿ ಜಿಲ್ಲೆಗಳಾದ ಅಮೃತಸರ ಮತ್ತು ತರ್ನ್ ತರಣ್‌ನಲ್ಲಿ ನಡೆದ ಕಳ್ಳಭಟ್ಟಿ ದುರಂತದ ಸಾವುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಧರಣಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕರನ್ನು ನ್ಯಾಯಾಲಯಕ್ಕೆ ಹಾಜರಾಗಲು ಸೂಚಿಸಲಾಗಿತ್ತು.

ಕೋರ್ಟ್​ ಮುಂದೆ ಹಾಜರಾಗದ ಹಿನ್ನೆಲೆ ಪಂಜಾಬ್​ನ ಸ್ಪೀಕರ್, ಇಬ್ಬರು ಸಚಿವರ ವಿರುದ್ಧ ಜಾಮೀನುರಹಿತ ವಾರೆಂಟ್ ಜಾರಿ
ಪಂಜಾಬ್ ಸ್ಪೀಕರ್ ಕುಲ್ತಾರ್ ಸಿಂಗ್ ಸಂಧ್ವಾನ್
TV9 Web
| Edited By: |

Updated on: Aug 31, 2022 | 9:54 AM

Share

ನವದೆಹಲಿ: ಪಂಜಾಬ್ ಸ್ಪೀಕರ್ ಕುಲ್ತಾರ್ ಸಿಂಗ್ ಸಂಧ್ವಾನ್ (Punjab Speaker Kultar Singh Sandhwan) ಮತ್ತು ಇಬ್ಬರು ಕ್ಯಾಬಿನೆಟ್ ಮಂತ್ರಿಗಳಾದ ಗುರ್ಮೀತ್ ಸಿಂಗ್ ಮೀತ್ ಹಯರ್ ಮತ್ತು ಲಾಲ್ಜಿತ್ ಸಿಂಗ್ ಭುಲ್ಲಾರ್ ಸೇರಿದಂತೆ 9 ಜನರ ವಿರುದ್ಧ ಪಂಜಾಬ್ ನ್ಯಾಯಾಲಯವು ಮಂಗಳವಾರ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ. ಆಮ್ ಆದ್ಮಿ ಪಕ್ಷದ ಕೆಲವು ಶಾಸಕರು ಮತ್ತು ಪಕ್ಷದ ಕಾರ್ಯಕರ್ತರ ವಿರುದ್ಧವೂ ವಾರೆಂಟ್ ಹೊರಡಿಸಲಾಗಿದೆ.

2020ರ ಆಗಸ್ಟ್‌ನಲ್ಲಿ ಗಡಿ ಜಿಲ್ಲೆಗಳಾದ ಅಮೃತಸರ ಮತ್ತು ತರ್ನ್ ತರಣ್‌ನಲ್ಲಿ ನಡೆದ ಕಳ್ಳಭಟ್ಟಿ ದುರಂತದ ಸಾವುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಧರಣಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕರು ಮತ್ತು ಕಾರ್ಯಕರ್ತರನ್ನು ನ್ಯಾಯಾಲಯಕ್ಕೆ ಹಾಜರಾಗಲು ಸೂಚಿಸಲಾಗಿತ್ತು. ಆದರೆ, ಅವರು ನ್ಯಾಯಾಯಲದ ಮುಂದೆ ಹಾಜರಾಗಿರಲಿಲ್ಲ.

ಇದನ್ನೂ ಓದಿ: ಮದ್ಯ ಹಗರಣ: ಎಫ್ಐಆರ್ ದಾಖಲಿಸಿದ ಸಿಬಿಐ; ಮನೀಶ್ ಸಿಸೋಡಿಯಾ ಆರೋಪಿ ನಂಬರ್ 1

ಇದರ ಮಧ್ಯೆ ಮದ್ಯದ (ಇಎನ್​ಎ) ಅಕ್ರಮ ವ್ಯಾಪಾರವನ್ನು ತಡೆಯುವ ಪ್ರಯತ್ನದಲ್ಲಿ ಪಂಜಾಬ್ ಅಬಕಾರಿ ಮತ್ತು ತೆರಿಗೆ ಸಚಿವ ಹರ್ಪಾಲ್ ಸಿಂಗ್ ಚೀಮಾ ಮಂಗಳವಾರ ಪಂಜಾಬ್ ರಾಜ್ಯಾದ್ಯಂತ ಅಭಿಯಾನ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಎನ್ಎ ಎಂಬುದು ಮದ್ಯವನ್ನು ತಯಾರಿಸುವ ಕಚ್ಚಾ ವಸ್ತುವಾಗಿದೆ.

ಪಂಜಾಬ್​ನಲ್ಲಿ ಜುಲೈನಲ್ಲಿ 15,131 ಬಾಟಲಿ ಪಂಜಾಬ್ ಮಧ್ಯಮ ಮದ್ಯ (ಪಿಎಂಎಲ್), 7,917 ಭಾರತೀಯ ನಿರ್ಮಿತ ವಿದೇಶಿ ಮದ್ಯ (ಐಎಂಎಫ್‌ಎಲ್), 2,596 ಬಾಟಲಿ ಬಿಯರ್, 5,895 ಲೀಟರ್ ಅಕ್ರಮ ಮದ್ಯ, 3,795 ಬಾಟಲ್ ರೆಡಿ ಟು ಡ್ರಿಂಕ್ (ಆರ್‌ಟಿಡಿ) ಮದ್ಯವನ್ನು ಇಲಾಖೆ ವಶಪಡಿಸಿಕೊಂಡಿದೆ ಎಂದು ಸಚಿವರಿಗೆ ಸಭೆಯಲ್ಲಿ ತಿಳಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ