AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್​ ಮುಂದೆ ಹಾಜರಾಗದ ಹಿನ್ನೆಲೆ ಪಂಜಾಬ್​ನ ಸ್ಪೀಕರ್, ಇಬ್ಬರು ಸಚಿವರ ವಿರುದ್ಧ ಜಾಮೀನುರಹಿತ ವಾರೆಂಟ್ ಜಾರಿ

2020ರ ಆಗಸ್ಟ್‌ನಲ್ಲಿ ಗಡಿ ಜಿಲ್ಲೆಗಳಾದ ಅಮೃತಸರ ಮತ್ತು ತರ್ನ್ ತರಣ್‌ನಲ್ಲಿ ನಡೆದ ಕಳ್ಳಭಟ್ಟಿ ದುರಂತದ ಸಾವುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಧರಣಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕರನ್ನು ನ್ಯಾಯಾಲಯಕ್ಕೆ ಹಾಜರಾಗಲು ಸೂಚಿಸಲಾಗಿತ್ತು.

ಕೋರ್ಟ್​ ಮುಂದೆ ಹಾಜರಾಗದ ಹಿನ್ನೆಲೆ ಪಂಜಾಬ್​ನ ಸ್ಪೀಕರ್, ಇಬ್ಬರು ಸಚಿವರ ವಿರುದ್ಧ ಜಾಮೀನುರಹಿತ ವಾರೆಂಟ್ ಜಾರಿ
ಪಂಜಾಬ್ ಸ್ಪೀಕರ್ ಕುಲ್ತಾರ್ ಸಿಂಗ್ ಸಂಧ್ವಾನ್
TV9 Web
| Edited By: |

Updated on: Aug 31, 2022 | 9:54 AM

Share

ನವದೆಹಲಿ: ಪಂಜಾಬ್ ಸ್ಪೀಕರ್ ಕುಲ್ತಾರ್ ಸಿಂಗ್ ಸಂಧ್ವಾನ್ (Punjab Speaker Kultar Singh Sandhwan) ಮತ್ತು ಇಬ್ಬರು ಕ್ಯಾಬಿನೆಟ್ ಮಂತ್ರಿಗಳಾದ ಗುರ್ಮೀತ್ ಸಿಂಗ್ ಮೀತ್ ಹಯರ್ ಮತ್ತು ಲಾಲ್ಜಿತ್ ಸಿಂಗ್ ಭುಲ್ಲಾರ್ ಸೇರಿದಂತೆ 9 ಜನರ ವಿರುದ್ಧ ಪಂಜಾಬ್ ನ್ಯಾಯಾಲಯವು ಮಂಗಳವಾರ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ. ಆಮ್ ಆದ್ಮಿ ಪಕ್ಷದ ಕೆಲವು ಶಾಸಕರು ಮತ್ತು ಪಕ್ಷದ ಕಾರ್ಯಕರ್ತರ ವಿರುದ್ಧವೂ ವಾರೆಂಟ್ ಹೊರಡಿಸಲಾಗಿದೆ.

2020ರ ಆಗಸ್ಟ್‌ನಲ್ಲಿ ಗಡಿ ಜಿಲ್ಲೆಗಳಾದ ಅಮೃತಸರ ಮತ್ತು ತರ್ನ್ ತರಣ್‌ನಲ್ಲಿ ನಡೆದ ಕಳ್ಳಭಟ್ಟಿ ದುರಂತದ ಸಾವುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಧರಣಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕರು ಮತ್ತು ಕಾರ್ಯಕರ್ತರನ್ನು ನ್ಯಾಯಾಲಯಕ್ಕೆ ಹಾಜರಾಗಲು ಸೂಚಿಸಲಾಗಿತ್ತು. ಆದರೆ, ಅವರು ನ್ಯಾಯಾಯಲದ ಮುಂದೆ ಹಾಜರಾಗಿರಲಿಲ್ಲ.

ಇದನ್ನೂ ಓದಿ: ಮದ್ಯ ಹಗರಣ: ಎಫ್ಐಆರ್ ದಾಖಲಿಸಿದ ಸಿಬಿಐ; ಮನೀಶ್ ಸಿಸೋಡಿಯಾ ಆರೋಪಿ ನಂಬರ್ 1

ಇದರ ಮಧ್ಯೆ ಮದ್ಯದ (ಇಎನ್​ಎ) ಅಕ್ರಮ ವ್ಯಾಪಾರವನ್ನು ತಡೆಯುವ ಪ್ರಯತ್ನದಲ್ಲಿ ಪಂಜಾಬ್ ಅಬಕಾರಿ ಮತ್ತು ತೆರಿಗೆ ಸಚಿವ ಹರ್ಪಾಲ್ ಸಿಂಗ್ ಚೀಮಾ ಮಂಗಳವಾರ ಪಂಜಾಬ್ ರಾಜ್ಯಾದ್ಯಂತ ಅಭಿಯಾನ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಎನ್ಎ ಎಂಬುದು ಮದ್ಯವನ್ನು ತಯಾರಿಸುವ ಕಚ್ಚಾ ವಸ್ತುವಾಗಿದೆ.

ಪಂಜಾಬ್​ನಲ್ಲಿ ಜುಲೈನಲ್ಲಿ 15,131 ಬಾಟಲಿ ಪಂಜಾಬ್ ಮಧ್ಯಮ ಮದ್ಯ (ಪಿಎಂಎಲ್), 7,917 ಭಾರತೀಯ ನಿರ್ಮಿತ ವಿದೇಶಿ ಮದ್ಯ (ಐಎಂಎಫ್‌ಎಲ್), 2,596 ಬಾಟಲಿ ಬಿಯರ್, 5,895 ಲೀಟರ್ ಅಕ್ರಮ ಮದ್ಯ, 3,795 ಬಾಟಲ್ ರೆಡಿ ಟು ಡ್ರಿಂಕ್ (ಆರ್‌ಟಿಡಿ) ಮದ್ಯವನ್ನು ಇಲಾಖೆ ವಶಪಡಿಸಿಕೊಂಡಿದೆ ಎಂದು ಸಚಿವರಿಗೆ ಸಭೆಯಲ್ಲಿ ತಿಳಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ