AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಮಾಜಿ ಪೊಲೀಸ್​ ಪರಮ್​ ಬೀರ್​ ಸಿಂಗ್ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿ; ಮಾಜಿ ಅಧಿಕಾರಿ ನಾಪತ್ತೆ

ಸುಲಿಗೆ ಪ್ರಕರಣದಲ್ಲಿ ಪರಮ್​ ಬೀರ್ ಸಿಂಗ್​ ಜತೆಗೆ ಸಹ ಆರೋಪಿಗಳೆಂದು ಗುರುತಿಸಲಾಗಿರುವ, ಕ್ರೈಂ ಬ್ರ್ಯಾಂಚ್​​ನ ಅಧಿಕಾರಿಗಳಾಗಿದ್ದ ನಂದಕುಮಾರ್​ ಗೋಪಾಲೆ ಮತ್ತು ಶಾಶಾ ಕೊರ್ಕೆ ಅವರನ್ನು ಸಿಐಡಿ ಸೋಮವಾರ ಬಂಧಿಸಿದೆ. 

ಮುಂಬೈ ಮಾಜಿ ಪೊಲೀಸ್​ ಪರಮ್​ ಬೀರ್​ ಸಿಂಗ್ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿ; ಮಾಜಿ ಅಧಿಕಾರಿ ನಾಪತ್ತೆ
ಪರಮ್​ ಬೀರ್ ಸಿಂಗ್​
TV9 Web
| Edited By: |

Updated on:Nov 10, 2021 | 4:40 PM

Share

ಸುಲಿಗೆ ಪ್ರಕರಣದಲ್ಲಿ ಆರೋಪಿಯಾಗಿರುವ ಮುಂಬೈ ಮಾಜಿ  ಪೊಲೀಸ್​ ಆಯುಕ್ತ ಪರಮ್​ ಬೀರ್​ ಸಿಂಗ್​ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿಯಾಗಿದೆ. ಪರಮ್​ ಬೀರ್ ಸಿಂಗ್​ ವಿರುದ್ಧ ಜಾರಿಯಾಗುತ್ತಿರುವ ಮೂರನೇ ಜಾಮೀನು ರಹಿತ ವಾರೆಂಟ್​ ಇದಾಗಿದೆ.  ಪರಮ್​ ಬೀರ್​ ಸಿಂಗ್​ ವಿರುದ್ಧ ಸುಮಾರು 15 ಕೋಟಿ ರೂಪಾಯಿಗಳಷ್ಟು ಸುಲಿಗೆ ಮಾಡಿದ ಆರೋಪವಿದ್ದು, ಅವರೀಗ ನಾಪತ್ತೆಯಾಗಿದ್ದಾರೆ. ಅಂದಹಾಗೆ ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶ್​ಮುಖ್​​ರನ್ನು ಇಡಿ ಬಂಧಿಸಿದೆ. ಸಿಬಿಐ ಕೂಡ ತನಿಖೆಗೆ ಮುಂದಾಗಿದೆ.  

ಸುಲಿಗೆ ಪ್ರಕರಣದಲ್ಲಿ ಪರಮ್​ ಬೀರ್ ಸಿಂಗ್​ ಜತೆಗೆ ಸಹ ಆರೋಪಿಗಳೆಂದು ಗುರುತಿಸಲಾಗಿರುವ, ಕ್ರೈಂ ಬ್ರ್ಯಾಂಚ್​​ನ ನಂದಕುಮಾರ್​ ಗೋಪಾಲೆ ಮತ್ತು ಶಾಶಾ ಕೊರ್ಕೆ ಅವರನ್ನು ಸಿಐಡಿ ಸೋಮವಾರ ಬಂಧಿಸಿದೆ.  ಭಾಯಂದರ್ ಮೂಲದ ಡೆವಲಪರ್ ಶ್ಯಾಮಸುಂದರ್ ಅಗರವಾಲ್ ಅವರ ದೂರಿನ ಮೇರೆಗೆ ಎಫ್​ಐಆರ್​ ದಾಖಲಾಗಿತ್ತು. ಇದೀಗ ಮುಂಬೈ ಮ್ಯಾಜಿಸ್ಟ್ರೇಟ್​ ಕೋರ್ಟ್​ ವಾರೆಂಟ್​ ಜಾರಿ ಮಾಡಿದೆ. ಕಳೆದ 217ದಿನಗಳಿಂದಲೂ ಅವರು ನಾಪತ್ತೆಯಾಗಿದ್ದು, ಹುಡುಕಾಟವೂ ನಡೆದಿದೆ.

ಇದನ್ನೂ ಓದಿ: ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಎತ್ತಿನ ಬಂಡಿ ಓಡಿಸಿ ಬಂಡಿ ಓಟದ ಸ್ಪರ್ಧೆ ಉದ್ಘಾಟಿಸಿದರು!

Published On - 4:37 pm, Wed, 10 November 21

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ