AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಮಾಜಿ ಪೊಲೀಸ್​ ಪರಮ್​ ಬೀರ್​ ಸಿಂಗ್ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿ; ಮಾಜಿ ಅಧಿಕಾರಿ ನಾಪತ್ತೆ

ಸುಲಿಗೆ ಪ್ರಕರಣದಲ್ಲಿ ಪರಮ್​ ಬೀರ್ ಸಿಂಗ್​ ಜತೆಗೆ ಸಹ ಆರೋಪಿಗಳೆಂದು ಗುರುತಿಸಲಾಗಿರುವ, ಕ್ರೈಂ ಬ್ರ್ಯಾಂಚ್​​ನ ಅಧಿಕಾರಿಗಳಾಗಿದ್ದ ನಂದಕುಮಾರ್​ ಗೋಪಾಲೆ ಮತ್ತು ಶಾಶಾ ಕೊರ್ಕೆ ಅವರನ್ನು ಸಿಐಡಿ ಸೋಮವಾರ ಬಂಧಿಸಿದೆ. 

ಮುಂಬೈ ಮಾಜಿ ಪೊಲೀಸ್​ ಪರಮ್​ ಬೀರ್​ ಸಿಂಗ್ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿ; ಮಾಜಿ ಅಧಿಕಾರಿ ನಾಪತ್ತೆ
ಪರಮ್​ ಬೀರ್ ಸಿಂಗ್​
TV9 Web
| Edited By: |

Updated on:Nov 10, 2021 | 4:40 PM

Share

ಸುಲಿಗೆ ಪ್ರಕರಣದಲ್ಲಿ ಆರೋಪಿಯಾಗಿರುವ ಮುಂಬೈ ಮಾಜಿ  ಪೊಲೀಸ್​ ಆಯುಕ್ತ ಪರಮ್​ ಬೀರ್​ ಸಿಂಗ್​ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿಯಾಗಿದೆ. ಪರಮ್​ ಬೀರ್ ಸಿಂಗ್​ ವಿರುದ್ಧ ಜಾರಿಯಾಗುತ್ತಿರುವ ಮೂರನೇ ಜಾಮೀನು ರಹಿತ ವಾರೆಂಟ್​ ಇದಾಗಿದೆ.  ಪರಮ್​ ಬೀರ್​ ಸಿಂಗ್​ ವಿರುದ್ಧ ಸುಮಾರು 15 ಕೋಟಿ ರೂಪಾಯಿಗಳಷ್ಟು ಸುಲಿಗೆ ಮಾಡಿದ ಆರೋಪವಿದ್ದು, ಅವರೀಗ ನಾಪತ್ತೆಯಾಗಿದ್ದಾರೆ. ಅಂದಹಾಗೆ ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶ್​ಮುಖ್​​ರನ್ನು ಇಡಿ ಬಂಧಿಸಿದೆ. ಸಿಬಿಐ ಕೂಡ ತನಿಖೆಗೆ ಮುಂದಾಗಿದೆ.  

ಸುಲಿಗೆ ಪ್ರಕರಣದಲ್ಲಿ ಪರಮ್​ ಬೀರ್ ಸಿಂಗ್​ ಜತೆಗೆ ಸಹ ಆರೋಪಿಗಳೆಂದು ಗುರುತಿಸಲಾಗಿರುವ, ಕ್ರೈಂ ಬ್ರ್ಯಾಂಚ್​​ನ ನಂದಕುಮಾರ್​ ಗೋಪಾಲೆ ಮತ್ತು ಶಾಶಾ ಕೊರ್ಕೆ ಅವರನ್ನು ಸಿಐಡಿ ಸೋಮವಾರ ಬಂಧಿಸಿದೆ.  ಭಾಯಂದರ್ ಮೂಲದ ಡೆವಲಪರ್ ಶ್ಯಾಮಸುಂದರ್ ಅಗರವಾಲ್ ಅವರ ದೂರಿನ ಮೇರೆಗೆ ಎಫ್​ಐಆರ್​ ದಾಖಲಾಗಿತ್ತು. ಇದೀಗ ಮುಂಬೈ ಮ್ಯಾಜಿಸ್ಟ್ರೇಟ್​ ಕೋರ್ಟ್​ ವಾರೆಂಟ್​ ಜಾರಿ ಮಾಡಿದೆ. ಕಳೆದ 217ದಿನಗಳಿಂದಲೂ ಅವರು ನಾಪತ್ತೆಯಾಗಿದ್ದು, ಹುಡುಕಾಟವೂ ನಡೆದಿದೆ.

ಇದನ್ನೂ ಓದಿ: ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಎತ್ತಿನ ಬಂಡಿ ಓಡಿಸಿ ಬಂಡಿ ಓಟದ ಸ್ಪರ್ಧೆ ಉದ್ಘಾಟಿಸಿದರು!

Published On - 4:37 pm, Wed, 10 November 21

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್