ತಮಿಳುನಾಡು: ಸರಿಸುಮಾರು ₹16 ಲಕ್ಷ ತೆರಿಗೆ ಪಾವತಿಸದ್ದಕ್ಕೆ ಬಿಎಸ್​​ಎನ್ಎಲ್ ಕಚೇರಿಯಿಂದ ಪೀಠೋಪಕರಣ ವಶ

ತಿಂಡಿವನಂ ಪುರಸಭೆಯ ಅಧಿಕೃತ ಮೂಲಗಳ ಪ್ರಕಾರ ಪಟ್ಟಣದ ರೈಲ್ವೆ ನಿಲ್ದಾಣದ ಬಳಿ ಕಾರ್ಯನಿರ್ವಹಿಸುತ್ತಿರುವ ಬಿಎಸ್‌ಎನ್‌ಎಲ್ ಕಚೇರಿಯು ಪುರಸಭೆಗೆ ₹8,70,090 ತೆರಿಗೆ ಮತ್ತು ಚೆನ್ನೈ ರಸ್ತೆಯಲ್ಲಿ ನಿಗದಿಪಡಿಸಲಾದ ಮೊಬೈಲ್ ಫೋನ್ ಸಿಗ್ನಲ್ ಟವರ್‌ಗೆ ₹7,24,446 ತೆರಿಗೆ ಪಾವತಿಸಬೇಕು.

ತಮಿಳುನಾಡು: ಸರಿಸುಮಾರು ₹16 ಲಕ್ಷ ತೆರಿಗೆ ಪಾವತಿಸದ್ದಕ್ಕೆ ಬಿಎಸ್​​ಎನ್ಎಲ್ ಕಚೇರಿಯಿಂದ ಪೀಠೋಪಕರಣ ವಶ
ಬಿಎಸ್‌ಎನ್‌ಎಲ್
Follow us
| Updated By: ರಶ್ಮಿ ಕಲ್ಲಕಟ್ಟ

Updated on: Mar 21, 2022 | 3:47 PM

ವಿಲ್ಲುಪುರಂ: ತಿಂಡಿವನಂ (Tindivanam) ಪುರಸಭೆ ಅಧಿಕಾರಿಗಳು ಶನಿವಾರ ಸಂಜೆ ಬಿಎಸ್‌ಎನ್‌ಎಲ್ (BSNL) ಕಚೇರಿಯಲ್ಲಿ ಪೀಠೋಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ. ಹಲವಾರು ಸೂಚನೆಗಳ ನಂತರವೂ ಬಾಕಿ ಇರುವ ತೆರಿಗೆಗಳನ್ನು ಪಾವತಿಸಲು ಆಡಳಿತ ಮಂಡಳಿ ವಿಫಲವಾದ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್​​​ಪ್ರೆಸ್ ವರದಿ ಮಾಡಿದೆ. ತಿಂಡಿವನಂ ಪುರಸಭೆಯ ಅಧಿಕೃತ ಮೂಲಗಳ ಪ್ರಕಾರ ಪಟ್ಟಣದ ರೈಲ್ವೆ ನಿಲ್ದಾಣದ ಬಳಿ ಕಾರ್ಯನಿರ್ವಹಿಸುತ್ತಿರುವ ಬಿಎಸ್‌ಎನ್‌ಎಲ್ ಕಚೇರಿಯು ಪುರಸಭೆಗೆ ₹8,70,090 ತೆರಿಗೆ ಮತ್ತು ಚೆನ್ನೈ ರಸ್ತೆಯಲ್ಲಿ ನಿಗದಿಪಡಿಸಲಾದ ಮೊಬೈಲ್ ಫೋನ್ ಸಿಗ್ನಲ್ ಟವರ್‌ಗೆ ₹7,24,446 ತೆರಿಗೆ ಪಾವತಿಸಬೇಕು. ಹಲವು ಬಾರಿ ನೋಟಿಸ್ ನೀಡಿದರೂ ಬಿಎಸ್‌ಎನ್‌ಎಲ್ ಆಡಳಿತ ಮಂಡಳಿ ಬಾಕಿ ಪಾವತಿ ಮಾಡದಿರುವುದು ಪೀಠೋಪಕರಣಗಳನ್ನು ವಶಪಡಿಸಿಕೊಳ್ಳಲು ಕಾರಣವಾಗಿದೆ. ಶನಿವಾರ ಸಂಜೆ ಆಯುಕ್ತ ಸೌಂದರರಾಜನ್ ನೇತೃತ್ವದಲ್ಲಿ ಪಾಲಿಕೆಯ ಅಧಿಕಾರಿಗಳು ಮತ್ತು ಕಾರ್ಮಿಕರ ತಂಡ ಬಿಎಸ್‌ಎನ್‌ಎಲ್ ಕಚೇರಿಗೆ ಆಗಮಿಸಿ ಡೋಲು ಬಾರಿಸುವ ಮೂಲಕ ಬಾಕಿ ತೆರಿಗೆಗೆ ಬದಲಾಗಿ ಜಪ್ತಿ ಮಾಡುವುದಾಗಿ ಘೋಷಣೆ ಮಾಡಿದರು. ಸಿಬ್ಬಂದಿ ಇದನ್ನು ವಿರೋಧಿಸಿ ವಾದಿಸಿದರೂ ಪೊಲೀಸರು ಪಾಲಿಕೆ ಅಧಿಕಾರಿಗಳಿಗೆ ರಕ್ಷಣೆ ನೀಡಿ ವಶಪಡಿಸಿಕೊಳ್ಳಲು ಸಹಕರಿಸಿದರು. ಬಾಕಿ ಇರುವ ತೆರಿಗೆ ಮೊತ್ತವನ್ನು ಪಾವತಿಸದಿದ್ದರೆ ಒಂದು ದಿನ ಅಥವಾ ಎರಡು ದಿನಗಳಲ್ಲಿ ಬಿಎಸ್‌ಎನ್‌ಎಲ್ ಕಚೇರಿಯನ್ನು ಸೀಲ್ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ಮತ್ತೊಂದು ಘಟನೆಯಲ್ಲಿ, ಉದ್ಯಮಿಯೊಬ್ಬರಿಗೆ ಡೋಲು ಬಾರಿಸಿ ಘೋಷಣೆ ಮಾಡಲಾಗಿದ್ದು, ಅವರು ₹12 ಲಕ್ಷ ಬಾಕಿ ತೆರಿಗೆ ಪಾವತಿಸಬೇಕಿದೆ.

ಮಾಧ್ಯಮದವರೊಂದಿಗೆ ಮಾತನಾಡಿದ ತಿಂಡಿವನಂ ನಗರಸಭೆ ಆಯುಕ್ತ ಸೌಂದರರಾಜನ್, ‘ಬಹುಶಃ ಬಾಕಿ ಇರುವ ತೆರಿಗೆ ಪಾವತಿಸದೇ ಇರುವುದರಿಂದ ಪಾಲಿಕೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿ ಆಮೆ ಗತಿಯಲ್ಲಿ ಸಾಗಿದೆ. ವಶಪಡಿಸಿಕೊಳ್ಳುವುದನ್ನು ತಪ್ಪಿಸಲು ಸಾರ್ವಜನಿಕರು ಸಕಾಲದಲ್ಲಿ ತೆರಿಗೆ ಪಾವತಿಸಬೇಕು. ದೀರ್ಘಾವಧಿ ಮತ್ತು ಅತ್ಯಧಿಕ ತೆರಿಗೆ ಬಾಕಿ ಇರಿಸುವ ಜನರು ಮತ್ತು ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: Ind-Aus Bilateral Summit ನಮ್ಮ ಸಹಯೋಗವು ಉಚಿತ, ಮುಕ್ತ, ಅಂತರ್ಗತ ಇಂಡೋ-ಪೆಸಿಫಿಕ್‌ಗೆ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ: ಮೋದಿ

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ