Norovirus ಕೇರಳದ ವಯನಾಡಿನಲ್ಲಿ ನೊರೊವೈರಸ್ ಪತ್ತೆ: ಏನಿದರ ರೋಗಲಕ್ಷಣ, ತಡೆಗಟ್ಟುವ ಕ್ರಮಗಳೇನು?

Norovirus Symptoms ನೊರೊವೈರಸ್‌ನ ಲಕ್ಷಣಗಳು- ಅತಿಸಾರ, ಹೊಟ್ಟೆ ನೋವು, ವಾಂತಿ, ವಾಕರಿಕೆ, ಜ್ವರ, ತಲೆನೋವು ಮತ್ತು ದೇಹದ ನೋವು. ತೀವ್ರವಾದ ವಾಂತಿ ಮತ್ತು ಅತಿಸಾರವು ನಿರ್ಜಲೀಕರಣ ಮತ್ತು ಮತ್ತಷ್ಟು ತೊಡಕುಗಳಿಗೆ ಕಾರಣವಾಗಬಹುದು.

Norovirus ಕೇರಳದ ವಯನಾಡಿನಲ್ಲಿ ನೊರೊವೈರಸ್ ಪತ್ತೆ: ಏನಿದರ ರೋಗಲಕ್ಷಣ, ತಡೆಗಟ್ಟುವ ಕ್ರಮಗಳೇನು?
ಪ್ರಾತಿನಿಧಿಕ ಚಿತ್ರ
Follow us
| Updated By: ರಶ್ಮಿ ಕಲ್ಲಕಟ್ಟ

Updated on: Nov 12, 2021 | 7:19 PM

ತಿರುವನಂತಪುರಂ: ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ (Veena George) ಶುಕ್ರವಾರ ವಯನಾಡು (Wayanad) ಜಿಲ್ಲೆಯಲ್ಲಿ ನೊರೊವೈರಸ್ (Norovirus) ದೃಢಪಟ್ಟಿರುವ ಹಿನ್ನೆಲೆಯಲ್ಲಿ ಜನರು ಜಾಗರೂಕರಾಗಿರಲು ಸೂಚಿಸಿದ್ದಾರೆ. ಸೋಂಕಿನ ಹರಡುವಿಕೆಯನ್ನು ತಡೆಯಲು ಅವರು ಮಾರ್ಗಸೂಚಿಗಳನ್ನು ನೀಡಿದರು. ತಡೆಗಟ್ಟುವ ಚಟುವಟಿಕೆಗಳನ್ನು ತೀವ್ರಗೊಳಿಸಲು ಮತ್ತು ರೋಗದ ಬಗ್ಗೆ ಜಾಗೃತಿ ಮೂಡಿಸಲು ಅವರು ನಿರ್ದೇಶನ ನೀಡಿದ್ದಾರೆ. ಜನರು ಜಾಗರೂಕರಾಗಿರಲು ಸಚಿವರು ಜಿಲ್ಲೆಯಲ್ಲಿ ಆದೇಶ ಹೊರಡಿಸಿದ್ದಾರೆ. ವೀಣಾ ಜಾರ್ಜ್ ನೇತೃತ್ವದ ಕೇರಳ ಆರೋಗ್ಯ ಇಲಾಖೆಯು (Kerala health department) ಇಂದು ವಯನಾಡಿನಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿದೆ.  ಪ್ರಸ್ತುತ ಆತಂಕಕ್ಕೆ ಕಾರಣವಿಲ್ಲ ಆದರೆ ಎಲ್ಲರೂ ಜಾಗರೂಕರಾಗಿರಬೇಕು. ಸೂಪರ್ ಕ್ಲೋರಿನೇಷನ್ ಸೇರಿದಂತೆ ಚಟುವಟಿಕೆಗಳು ನಡೆಯುತ್ತಿವೆ. ಕುಡಿಯುವ ನೀರಿನ ಮೂಲಗಳು ನೈರ್ಮಲ್ಯವಾಗಿರುವಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು. “ಸರಿಯಾದ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಯಿಂದ ರೋಗವನ್ನು ತ್ವರಿತವಾಗಿ ಗುಣಪಡಿಸಬಹುದು.ಆದ್ದರಿಂದ, ಪ್ರತಿಯೊಬ್ಬರೂ ರೋಗ ಮತ್ತು ಅದರ ತಡೆಗಟ್ಟುವ ವಿಧಾನಗಳ ಬಗ್ಗೆ ತಿಳಿದಿರಬೇಕು ಎಂದು ಅವರು ಹೇಳಿದರು. ನೊರೊವೈರಸ್ ಜಠರಗರುಳಿನ ಕಾಯಿಲೆಗೆ (gastrointestinal illness.) ಕಾರಣವಾಗುವ ವೈರಸ್‌ಗಳ ಗುಂಪಾಗಿದೆ. ವೈರಸ್ ಹೊಟ್ಟೆ ಮತ್ತು ಕರುಳಿನ ಒಳಪದರದ ಉರಿಯೂತವನ್ನು ಉಂಟುಮಾಡುತ್ತದೆ. ಜೊತೆಗೆ ತೀವ್ರವಾದ ವಾಂತಿ ಮತ್ತು ಅತಿಸಾರವನ್ನು ಉಂಟುಮಾಡುತ್ತದೆ.

ನೊರೊವೈರಸ್ ಎಂದರೇನು? ನೊರೊವೈರಸ್ ಪ್ರಾಣಿಗಳಿಂದ ಹರಡುವ ರೋಗವಾಗಿದ್ದು, ಕಲುಷಿತ ನೀರು ಮತ್ತು ಆಹಾರದ ಮೂಲಕ ಹರಡುತ್ತದೆ. ಸೋಂಕಿತ ವ್ಯಕ್ತಿಯ ಮಲವಿಸರ್ಜನೆ ಮತ್ತು ವಾಂತಿ ಮೂಲಕ ವೈರಸ್ ಹರಡುತ್ತದೆ. ಆದ್ದರಿಂದ, ರೋಗವು ಬಹಳ ಬೇಗನೆ ಹರಡುವುದರಿಂದ ಎಚ್ಚರಿಕೆ ವಹಿಸುವುದು ಅತ್ಯಗತ್ಯ. ನೊರೊವೈರಸ್ ಆರೋಗ್ಯವಂತ ಜನರ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುವುದಿಲ್ಲ, ಆದರೆ ಚಿಕ್ಕ ಮಕ್ಕಳು, ವಯಸ್ಸಾದವರು ಮತ್ತು ಇತರ ರೋಗಗಳಿರುವವರಲ್ಲಿ ಇದು ಗಂಭೀರವಾಗಿರಬಹುದು. ಈ ಪ್ರಾಣಿಯಿಂದ ಹರಡುವ ರೋಗವು ಸೋಂಕಿತ ವ್ಯಕ್ತಿಗಳ ನೇರ ಸಂಪರ್ಕದ ಮೂಲಕವೂ ಹರಡುತ್ತದೆ. ಆದಾಗ್ಯೂ, ರೋಗವು ಪ್ರಾರಂಭವಾದ ಎರಡು ದಿನಗಳವರೆಗೆ ವೈರಸ್ ಹರಡಬಹುದು.

ಸಾಮಾನ್ಯ ರೋಗಲಕ್ಷಣಗಳು ಯಾವುವು? ನೊರೊವೈರಸ್‌ನ ಲಕ್ಷಣಗಳು- ಅತಿಸಾರ, ಹೊಟ್ಟೆ ನೋವು, ವಾಂತಿ, ವಾಕರಿಕೆ, ಜ್ವರ, ತಲೆನೋವು ಮತ್ತು ದೇಹದ ನೋವು. ತೀವ್ರವಾದ ವಾಂತಿ ಮತ್ತು ಅತಿಸಾರವು ನಿರ್ಜಲೀಕರಣ ಮತ್ತು ಮತ್ತಷ್ಟು ತೊಡಕುಗಳಿಗೆ ಕಾರಣವಾಗಬಹುದು. ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ, ಸೋಂಕಿತರು ವೈದ್ಯರ ನಿರ್ದೇಶನದಂತೆ ಮನೆಯಲ್ಲಿ ವಿಶ್ರಾಂತಿ ಪಡೆಯಬೇಕು. ORS ದ್ರಾವಣ ಮತ್ತು ಕುದಿಸಿದ ನೀರನ್ನು ಕುಡಿಯಬೇಕು.

ತಡೆಗಟ್ಟುವ ಕ್ರಮಗಳು ಆರೋಗ್ಯ ಸಚಿವರು ಸೋಂಕಿನ ವಿರುದ್ಧ ಕೆಲವು ತಡೆಗಟ್ಟುವ ಕ್ರಮಗಳ ಕುರಿತು ಮಾತನಾಡಿದ್ದಾರೆ. ಅವು

ಒಬ್ಬರು ತಮ್ಮ ತಕ್ಷಣದ ಪರಿಸರ ನೈರ್ಮಲ್ಯ ಮತ್ತು ವೈಯಕ್ತಿಕ ನೈರ್ಮಲ್ಯದ ಬಗ್ಗೆ ಸರಿಯಾದ ಕಾಳಜಿಯನ್ನು ತೆಗೆದುಕೊಳ್ಳಬೇಕು. ತಿನ್ನುವ ಮೊದಲು ಮತ್ತು ಶೌಚಾಲಯವನ್ನು ಬಳಸಿದ ನಂತರ ನಿಮ್ಮ ಕೈಗಳನ್ನು ಸಾಬೂನು ಮತ್ತು ನೀರಿನಿಂದ ಚೆನ್ನಾಗಿ ತೊಳೆಯಿರಿ. ಪ್ರಾಣಿಗಳೊಂದಿಗೆ ಸಂವಹನ ನಡೆಸುವವರಿಗೆ ವಿಶೇಷ ಗಮನ ನೀಡಬೇಕು. ಕುಡಿಯುವ ನೀರಿನ ಮೂಲಗಳು, ಬಾವಿಗಳು ಮತ್ತು ಶೇಖರಣಾ ತೊಟ್ಟಿಗಳನ್ನು ಬ್ಲೀಚಿಂಗ್ ಪೌಡರ್ ಬಳಸಿ ಕ್ಲೋರಿನೇಟ್ ಮಾಡಿ. ಮನೆಯ ಬಳಕೆಗೆ ಕ್ಲೋರಿನೇಟೆಡ್ ನೀರನ್ನು ಬಳಸಿ. ಕುಡಿಯಲು ಕುದಿಸಿ ತಣಿಸಿದ ನೀರನ್ನು ಮಾತ್ರ ಬಳಸಿ. ಹಣ್ಣುಗಳು ಮತ್ತು ತರಕಾರಿಗಳನ್ನು ಚೆನ್ನಾಗಿ ತೊಳೆದ ನಂತರವೇ ಬಳಸಬೇಕು ಎಂದು ಸಚಿವಾಲಯ ಹೇಳಿದೆ. ಸಮುದ್ರ ಮೀನು, ಏಡಿ ಮತ್ತು ಮರ್ವಾಯಿ (ಚಿಪ್ಪು ಮೀನು) ಅನ್ನು ಚೆನ್ನಾಗಿ ಬೇಯಿಸಿದ ನಂತರ ಮಾತ್ರ ಸೇವಿಸಬೇಕು.

ಇದನ್ನೂ ಓದಿ: ಗುರ್​​ಗಾಂವ್​​​ನಲ್ಲಿ ಮತ್ತೆ ನಮಾಜ್​​ಗೆ ತಕರಾರು; ಅದೇ ಜಾಗದಲ್ಲಿ ವಾಲಿಬಾಲ್ ಕೋರ್ಟ್ ನಿರ್ಮಿಸುತ್ತೇವೆ ಎಂದ ಪ್ರತಿಭಟನಾಕಾರರು

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ