AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಶಾನ್ಯ ದೆಹಲಿ ಗಲಭೆ: ಯುಎಪಿಎ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಕೌನ್ಸಿಲರ್ ಇಶ್ರತ್ ಜಹಾನ್​​ಗೆ ಜಾಮೀನು

Ishrat Jahan ಈಶಾನ್ಯ ದೆಹಲಿಯ ಖುರೇಜಿ ಖಾಸ್ ಪ್ರದೇಶದಲ್ಲಿ ಪೌರತ್ವ ವಿರೋಧಿ (ತಿದ್ದುಪಡಿ) ಕಾಯಿದೆ, 2019, (CAA) ಪ್ರತಿಭಟನಾ ಸ್ಥಳದಲ್ಲಿ ಜನಸಮೂಹವನ್ನು ಪ್ರಚೋದಿಸಿದ ಆರೋಪವೂ ಇಶ್ರತ್ ಮೇಲಿದೆ.

ಈಶಾನ್ಯ ದೆಹಲಿ ಗಲಭೆ: ಯುಎಪಿಎ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಕೌನ್ಸಿಲರ್ ಇಶ್ರತ್ ಜಹಾನ್​​ಗೆ ಜಾಮೀನು
ಇಶ್ರತ್ ಜಹಾನ್
TV9 Web
| Edited By: |

Updated on: Mar 14, 2022 | 10:16 PM

Share

ದೆಹಲಿ: 2020ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಗೆ (Northeast Delhi riots) ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ( UAPA) ಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್ ಮಾಜಿ ಕೌನ್ಸಿಲರ್ ಇಶ್ರತ್ ಜಹಾನ್‌ಗೆ (Ishrat Jahan) ದೆಹಲಿ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಮಿತಾಭ್ ರಾವತ್ ಫೆಬ್ರವರಿ 2020 ರಿಂದ ಬಂಧನದಲ್ಲಿರುವ ಜಹಾನ್‌ಗೆ ಜಾಮೀನು ಮಂಜೂರು ಮಾಡಿದರು. ಈಶಾನ್ಯ ದೆಹಲಿಯ ಖುರೇಜಿ ಖಾಸ್ ಪ್ರದೇಶದಲ್ಲಿ ಪೌರತ್ವ ವಿರೋಧಿ (ತಿದ್ದುಪಡಿ) ಕಾಯಿದೆ, 2019, (CAA) ಪ್ರತಿಭಟನಾ ಸ್ಥಳದಲ್ಲಿ ಜನಸಮೂಹವನ್ನು ಪ್ರಚೋದಿಸಿದ ಆರೋಪವೂ ಇಶ್ರತ್ ಮೇಲಿದೆ. ಈ ಪ್ರಕರಣದಲ್ಲಿ ಜಹಾನ್‌ಗೆ ಜಾಮೀನು ಸಿಕ್ಕಿತ್ತು. ಆಕೆಯ ವಕೀಲ ಪ್ರದೀಪ್ ತಿಯೋಟಿಯಾ ಅವರು ನ್ಯಾಯಾಂಗ ಬಂಧನದಿಂದ ಬಿಡುಗಡೆಗೆ ದಾರಿಯನ್ನು ತೆರವುಗೊಳಿಸುವುದರ ವಿರುದ್ಧ ಯಾವುದೇ ಬಾಕಿ ಪ್ರಕರಣಗಳಿಲ್ಲ ಎಂದು ಹೇಳಿದರು. ಪೊಲೀಸರು ಆಕೆಯನ್ನು ಹಾರ್ಡ್​​ಲೈನರ್ ಎಂದು ಬಿಂಬಿಸಿದ್ದಾರೆ. ಆದರೆ ವಾಸ್ತವವಾಗಿ ಅವರು ತಮ್ಮ ಜಾತ್ಯತೀತ ನಿಲುವುಗಳಿಂದ ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂದು ಜಾಮೀನು ವಾದದ ಸಂದರ್ಭದಲ್ಲಿ ಟಿಯೋಟಿಯಾ ನ್ಯಾಯಾಲಯಕ್ಕೆ ಹೇಳಿದರು.

ಟಿಯೋಟಿಯಾ ಅವರು 2019 ರಲ್ಲಿ ಜಹಾನ್ ಮಾಡಿದ ಹಣಕಾಸಿನ ವಹಿವಾಟಿನ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಿದರು.  ಅವರ “ಹಣ ಹಿಂಪಡೆಯುವಿಕೆ ಮತ್ತು ಠೇವಣಿಯ ಮಾದರಿಯು ಒಂದೇ ಆಗಿರುತ್ತದೆ” ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಪೊಲೀಸರು ಆಕೆಯ  ವಿರುದ್ಧ ಯಾವುದೇ ಸಾಕ್ಷ್ಯವನ್ನು ಹೊಂದಿಲ್ಲ.” ಪ್ರಾಸಿಕ್ಯೂಷನ್ ಸಾಕ್ಷ್ಯವನ್ನು ಬಿಡಿಬಿಡಿಯಾಗಿ ತೋರಿಸಿದೆಯೇ ಹೊರತು ಒಟ್ಟಾರೆಯಾಗಿಲ್ಲ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದರು.

“ಅವಳನ್ನು ತಪ್ಪಾಗಿ ವಿಚಾರಣೆಗೆ ಒಳಪಡಿಸುವ ತಪ್ಪು ಉದ್ದೇಶವಿದೆ” ಎಂದು ಜಹಾನ್ ಅವರ ವಕೀಲರು ನ್ಯಾಯಾಲಯಕ್ಕೆ ಹೇಳಿದರು. ಆಕೆಯ ವಿರುದ್ಧ ಯುಎಪಿಎಯ ಸೆಕ್ಷನ್‌ಗಳನ್ನು ಅನ್ವಯಿಸುವುದು ಸರಿ ಎಂದು ಸಾಬೀತುಪಡಿಸಲು ಸಾಕ್ಷ್ಯವನ್ನು ತೋರಿಸುವಂತೆ ಪ್ರಾಸಿಕ್ಯೂಷನ್‌ಗೆ ಕೇಳಿದರು.

ಪಿತೂರಿಯಲ್ಲಿ ಇತರರ ಕೃತ್ಯಗಳಿಗೆ ಆರೋಪಿ ಜವಾಬ್ದಾರನಾಗಿರುತ್ತಾನೆ ಎಂದು ಹೇಳುವ ಮೂಲಕ ಮಾಜಿ ಕಾಂಗ್ರೆಸ್ ಕೌನ್ಸಿಲರ್ ಜಾಮೀನು ಅರ್ಜಿಯನ್ನು ಪ್ರಾಸಿಕ್ಯೂಷನ್ ವಿರೋಧಿಸಿತ್ತು,

ಕಳೆದ ವರ್ಷ ಅಕ್ಟೋಬರ್‌ನಲ್ಲಿ ನ್ಯಾಯಾಲಯದಲ್ಲಿ ವಾದಿಸಿದ ಪಬ್ಲಿಕ್ ಪ್ರಾಸಿಕ್ಯೂಟರ್ ಅಮಿತ್ ಪ್ರಸಾದ್ ಅವರು, ಪಿತೂರಿ ಇತ್ತು ಮತ್ತು ಗಲಭೆಗಳು ನಡೆದವು ಎಂಬುದು ಪ್ರಾಸಿಕ್ಯೂಷನ್ ಪ್ರಕರಣ. ಯಾರು ಮಾಡಿದರೂ ಮತ್ತೊಬ್ಬರ ಕೃತ್ಯಕ್ಕೆ ಜವಾಬ್ದಾರರಾಗುತ್ತಾರೆ ಎಂದಿದ್ದರು.

ದೆಹಲಿ ಹೈಕೋರ್ಟ್ ಯುಎಪಿಎ ಪ್ರಕರಣದಲ್ಲಿ ಈವರೆಗೆ ಐವರಿಗೆ ಜಾಮೀನು ನೀಡಿದೆ. ಅವರು ನತಾಶಾ ನರ್ವಾಲ್, ದೇವಾಂಗನಾ ಕಲಿತಾ, ಜಾಮಿಯಾ ಆಸಿಫ್ ಇಕ್ಬಾಲ್ ತನ್ಹಾ, ಸಫೂರ ಜರ್ಗರ್ ಮತ್ತು ಫೈಜಾನ್ ಖಾನ್. ಇವರು ಸಿಮ್ ಕಾರ್ಡ್ ಒದಗಿಸಿದ ಆರೋಪ ಎದುರಿಸುತ್ತಿದ್ದಾರೆ.

ಇದನ್ನೂ ಓದಿ: ನೀವು ತಮಾಷೆ ಮಾಡುತ್ತಿದ್ದೀರಾ?: ಅಂಬಿಕಾ ಸೋನಿ, ಚರಣ್‌ಜಿತ್ ಸಿಂಗ್​​ ಚನ್ನಿ ವಿರುದ್ಧ ಸುನೀಲ್ ಜಾಖರ್​​ ಗರಂ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ