AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಸೋಂಕು ಹಳ್ಳಿ ಪ್ರವೇಶಿಸದಂತೆ ಗಡಿಯಲ್ಲೇ ಕಾವಲು ಕಾಯುತ್ತಿರುವ ಮಹಿಳೆಯರು; ಶ್ರಮಕ್ಕೆ ಸಿಕ್ಕಿದೆ ಸಾರ್ಥಕತೆ

ಗ್ರಾಮದ ಎಲ್ಲ ಭಾಗಗಳ ಗಡಿಗಳನ್ನೂ ಬಾಂಬೂ ಬ್ಯಾರಿಕೇಡ್​ಗಳಿಂದ ಮುಚ್ಚಿ, ಅಲ್ಲೆಲ್ಲ ಕಾವಲು ನಿಂತಿದ್ದಾರೆ. ಮಾತ್ರವಲ್ಲ, ಪ್ರವೇಶವಿಲ್ಲ ಎಂಬ ಬೋರ್ಡ್​ನ್ನೂ ಕೂಡ ಹಾಕಿದ್ದಾರೆ.

ಕೊವಿಡ್​ ಸೋಂಕು ಹಳ್ಳಿ ಪ್ರವೇಶಿಸದಂತೆ ಗಡಿಯಲ್ಲೇ ಕಾವಲು ಕಾಯುತ್ತಿರುವ ಮಹಿಳೆಯರು; ಶ್ರಮಕ್ಕೆ ಸಿಕ್ಕಿದೆ ಸಾರ್ಥಕತೆ
ರಾಜ್ಯ ಹೆದ್ದಾರಿ ಬಳಿ ಕಾವಲು ಕಾಯುತ್ತಿರುವ ಮಹಿಳೆಯರು
Lakshmi Hegde
|

Updated on: Apr 27, 2021 | 6:13 PM

Share

ಬೇತುಲ್​: ಇಡೀ ದೇಶ ಕೊರೊನಾ ಎರಡನೇ ಅಲೆ ಅಬ್ಬರಕ್ಕೆ ತತ್ತರಿಸಿದೆ. ಬಹುತೇಕ ಹಳ್ಳಿಗಳಿಗೂ ವೈರಸ್ ವ್ಯಾಪಿಸುತ್ತಿದೆ. ಹೀಗಿರುವಾಗ ಮಧ್ಯಪ್ರದೇಶದ ಈ ಗ್ರಾಮದಲ್ಲಿ ಇದುವರೆಗೂ ಒಬ್ಬರೇ ಒಬ್ಬರಿಗೂ ಸೋಂಕು ತಗುಲಿಲ್ಲ. ಇದು ಕಾರಣವಾಗಿದ್ದು ಅಲ್ಲಿನ ಮಹಿಳೆಯರಿಂದ.. ಇಲ್ಲಿ ಕೊವಿಡ್ ಕಾಲಿಡದಂತೆ ಮಹಿಳೆಯರೇ ಸರ್ಪಗಾವಲು ಹಾಕಿದ್ದಾರೆ !

ಇದು ಆಂದ್ರಪ್ರದೇಶದ ಚಿಖಾಲರ್ ಎಂಬ ಗ್ರಾಮ. ಕಚ್ಚಾ ಲಿಕ್ಕರ್​ ಮಾರಾಟಕ್ಕೆ ಹೆಸರು ಮಾಡಿದೆ. ಇದು ಈ ಗ್ರಾಮಕ್ಕೆ ಅಂಟಿದ ಕಪ್ಪು ಚುಕ್ಕೆ ಎಂದರೂ ತಪ್ಪಾಗಲಾರದು. ಆದರೆ ಇದೀಗ ಚಿಖಾಲರ್ ಹಳ್ಳಿ ಒಂದು ಸಕಾರಾತ್ಮಕ ವಿಚಾರಕ್ಕೆ ಹೆಸರುವಾಸಿಯಾಗಿದೆ. ಅದು ಮತ್ತೇನಲ್ಲ, ಸಾಂಕ್ರಾಮಿಕ ರೋಗಕ್ಕೆ ಸೆಡ್ಡು ಹೊಡೆದು ನಿಂತ ಮಹಿಳೆಯರಿಂದ.. ಸೀರೆಯುಟ್ಟು, ಕೈಯಲ್ಲಿ ಉದ್ದನೆಯ ಕೋಲು ಹಿಡಿದ ಮಹಿಳೆಯರು ಗ್ರಾಮಕ್ಕೆ ಅಕ್ಷರಶಃ ಕಾವಲಾಗಿದ್ದಾರೆ. ಹೊರಗಿನಿಂದ ಯಾರನ್ನೂ ಬರಲು ಬಿಡುತ್ತಿಲ್ಲ. ಗ್ರಾಮದ ಎಲ್ಲ ಭಾಗಗಳ ಗಡಿಗಳನ್ನೂ ಬಾಂಬೂ ಬ್ಯಾರಿಕೇಡ್​ಗಳಿಂದ ಮುಚ್ಚಿ, ಅಲ್ಲೆಲ್ಲ ಕಾವಲು ನಿಂತಿದ್ದಾರೆ. ಮಾತ್ರವಲ್ಲ, ಪ್ರವೇಶವಿಲ್ಲ ಎಂಬ ಬೋರ್ಡ್​ನ್ನೂ ಕೂಡ ಹಾಕಿದ್ದಾರೆ. ಬರೀ ಇಷ್ಟೇ ಅಲ್ಲ, ಈ ಗ್ರಾಮದ ಬಳಿ ಹಾದು ಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ಹೋಗುವವರ ಬಗ್ಗೆಯೂ ನಿಗಾ ಇಡುತ್ತಿದ್ದಾರೆ. ಒಟ್ಟಿನಲ್ಲಿ ತಮ್ಮ ಗ್ರಾಮಕ್ಕೆ ಹೊರಗಿನವರನ್ನು ಯಾರನ್ನೂ ಬಿಟ್ಟುಕೊಳ್ಳುತ್ತಿಲ್ಲ.

ಇನ್ನು ಅವರ ಶ್ರಮಕ್ಕೆ ಸಾರ್ಥಕತೆ ಸಿಕ್ಕಿದೆ ಎಂಬಂತೆ ಇದುವರೆಗೂ ಒಂದೇ ಒಂದು ಕೊರೊನಾ ಸೋಂಕಿನ ಪ್ರಕರಣ ದಾಖಲಾಗಿಲ್ಲ. ಇವರು ಹೊರಗಿನವರಿಗೆ ನಿರ್ಬಂಧ ವಿಧಿಸಿದ್ದಲ್ಲದೆ, ಹಳ್ಳಿಯವರು ಕೂಡ ಹೊರಹೋಗದಂತೆ ತಡೆಯುತ್ತಿದ್ದಾರೆ. ಅಷ್ಟೇ ಅಲ್ಲ, ಇಡೀ ಗ್ರಾಮದ ಜನರು ತಮಗೆ ತಾವೇ ನಿರ್ಬಂಧ ವಹಿಸಿಕೊಂಡಿದ್ದಾರೆ.

ಜನರು ಹಳ್ಳಿಯೊಳಗೆ ಪ್ರವೇಶಿಸದಂತೆ ತಡೆಯಲು ಹಾಕಿರುವ ಬೋರ್ಡ್​ಗಳು

ಇದನ್ನೂ ಓದಿ:ಸರಿಯಾಗಿ ಕೆಲಸ ಮಾಡದಿದ್ದರೆ ಅಧಿಕಾರ ವಹಿಸಿಕೊಳ್ಳಲು ಕೇಂದ್ರಕ್ಕೆ ಸೂಚಿಸಬೇಕಾಗುತ್ತೆ: ದೆಹಲಿ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಕಂದಾಯ, ಗೃಹ, ಒಳಾಡಳಿತ, ಆರೋಗ್ಯ ಮತ್ತು ವೈದ್ಯಕೀಯ ಇಲಾಖೆ ಸಿಬ್ಬಂದಿಗೆ ಶೇ 100 ಹಾಜರಾತಿ ಕಡ್ಡಾಯ

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್