AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಸೋಂಕು ಹಳ್ಳಿ ಪ್ರವೇಶಿಸದಂತೆ ಗಡಿಯಲ್ಲೇ ಕಾವಲು ಕಾಯುತ್ತಿರುವ ಮಹಿಳೆಯರು; ಶ್ರಮಕ್ಕೆ ಸಿಕ್ಕಿದೆ ಸಾರ್ಥಕತೆ

ಗ್ರಾಮದ ಎಲ್ಲ ಭಾಗಗಳ ಗಡಿಗಳನ್ನೂ ಬಾಂಬೂ ಬ್ಯಾರಿಕೇಡ್​ಗಳಿಂದ ಮುಚ್ಚಿ, ಅಲ್ಲೆಲ್ಲ ಕಾವಲು ನಿಂತಿದ್ದಾರೆ. ಮಾತ್ರವಲ್ಲ, ಪ್ರವೇಶವಿಲ್ಲ ಎಂಬ ಬೋರ್ಡ್​ನ್ನೂ ಕೂಡ ಹಾಕಿದ್ದಾರೆ.

ಕೊವಿಡ್​ ಸೋಂಕು ಹಳ್ಳಿ ಪ್ರವೇಶಿಸದಂತೆ ಗಡಿಯಲ್ಲೇ ಕಾವಲು ಕಾಯುತ್ತಿರುವ ಮಹಿಳೆಯರು; ಶ್ರಮಕ್ಕೆ ಸಿಕ್ಕಿದೆ ಸಾರ್ಥಕತೆ
ರಾಜ್ಯ ಹೆದ್ದಾರಿ ಬಳಿ ಕಾವಲು ಕಾಯುತ್ತಿರುವ ಮಹಿಳೆಯರು
Lakshmi Hegde
|

Updated on: Apr 27, 2021 | 6:13 PM

Share

ಬೇತುಲ್​: ಇಡೀ ದೇಶ ಕೊರೊನಾ ಎರಡನೇ ಅಲೆ ಅಬ್ಬರಕ್ಕೆ ತತ್ತರಿಸಿದೆ. ಬಹುತೇಕ ಹಳ್ಳಿಗಳಿಗೂ ವೈರಸ್ ವ್ಯಾಪಿಸುತ್ತಿದೆ. ಹೀಗಿರುವಾಗ ಮಧ್ಯಪ್ರದೇಶದ ಈ ಗ್ರಾಮದಲ್ಲಿ ಇದುವರೆಗೂ ಒಬ್ಬರೇ ಒಬ್ಬರಿಗೂ ಸೋಂಕು ತಗುಲಿಲ್ಲ. ಇದು ಕಾರಣವಾಗಿದ್ದು ಅಲ್ಲಿನ ಮಹಿಳೆಯರಿಂದ.. ಇಲ್ಲಿ ಕೊವಿಡ್ ಕಾಲಿಡದಂತೆ ಮಹಿಳೆಯರೇ ಸರ್ಪಗಾವಲು ಹಾಕಿದ್ದಾರೆ !

ಇದು ಆಂದ್ರಪ್ರದೇಶದ ಚಿಖಾಲರ್ ಎಂಬ ಗ್ರಾಮ. ಕಚ್ಚಾ ಲಿಕ್ಕರ್​ ಮಾರಾಟಕ್ಕೆ ಹೆಸರು ಮಾಡಿದೆ. ಇದು ಈ ಗ್ರಾಮಕ್ಕೆ ಅಂಟಿದ ಕಪ್ಪು ಚುಕ್ಕೆ ಎಂದರೂ ತಪ್ಪಾಗಲಾರದು. ಆದರೆ ಇದೀಗ ಚಿಖಾಲರ್ ಹಳ್ಳಿ ಒಂದು ಸಕಾರಾತ್ಮಕ ವಿಚಾರಕ್ಕೆ ಹೆಸರುವಾಸಿಯಾಗಿದೆ. ಅದು ಮತ್ತೇನಲ್ಲ, ಸಾಂಕ್ರಾಮಿಕ ರೋಗಕ್ಕೆ ಸೆಡ್ಡು ಹೊಡೆದು ನಿಂತ ಮಹಿಳೆಯರಿಂದ.. ಸೀರೆಯುಟ್ಟು, ಕೈಯಲ್ಲಿ ಉದ್ದನೆಯ ಕೋಲು ಹಿಡಿದ ಮಹಿಳೆಯರು ಗ್ರಾಮಕ್ಕೆ ಅಕ್ಷರಶಃ ಕಾವಲಾಗಿದ್ದಾರೆ. ಹೊರಗಿನಿಂದ ಯಾರನ್ನೂ ಬರಲು ಬಿಡುತ್ತಿಲ್ಲ. ಗ್ರಾಮದ ಎಲ್ಲ ಭಾಗಗಳ ಗಡಿಗಳನ್ನೂ ಬಾಂಬೂ ಬ್ಯಾರಿಕೇಡ್​ಗಳಿಂದ ಮುಚ್ಚಿ, ಅಲ್ಲೆಲ್ಲ ಕಾವಲು ನಿಂತಿದ್ದಾರೆ. ಮಾತ್ರವಲ್ಲ, ಪ್ರವೇಶವಿಲ್ಲ ಎಂಬ ಬೋರ್ಡ್​ನ್ನೂ ಕೂಡ ಹಾಕಿದ್ದಾರೆ. ಬರೀ ಇಷ್ಟೇ ಅಲ್ಲ, ಈ ಗ್ರಾಮದ ಬಳಿ ಹಾದು ಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ಹೋಗುವವರ ಬಗ್ಗೆಯೂ ನಿಗಾ ಇಡುತ್ತಿದ್ದಾರೆ. ಒಟ್ಟಿನಲ್ಲಿ ತಮ್ಮ ಗ್ರಾಮಕ್ಕೆ ಹೊರಗಿನವರನ್ನು ಯಾರನ್ನೂ ಬಿಟ್ಟುಕೊಳ್ಳುತ್ತಿಲ್ಲ.

ಇನ್ನು ಅವರ ಶ್ರಮಕ್ಕೆ ಸಾರ್ಥಕತೆ ಸಿಕ್ಕಿದೆ ಎಂಬಂತೆ ಇದುವರೆಗೂ ಒಂದೇ ಒಂದು ಕೊರೊನಾ ಸೋಂಕಿನ ಪ್ರಕರಣ ದಾಖಲಾಗಿಲ್ಲ. ಇವರು ಹೊರಗಿನವರಿಗೆ ನಿರ್ಬಂಧ ವಿಧಿಸಿದ್ದಲ್ಲದೆ, ಹಳ್ಳಿಯವರು ಕೂಡ ಹೊರಹೋಗದಂತೆ ತಡೆಯುತ್ತಿದ್ದಾರೆ. ಅಷ್ಟೇ ಅಲ್ಲ, ಇಡೀ ಗ್ರಾಮದ ಜನರು ತಮಗೆ ತಾವೇ ನಿರ್ಬಂಧ ವಹಿಸಿಕೊಂಡಿದ್ದಾರೆ.

ಜನರು ಹಳ್ಳಿಯೊಳಗೆ ಪ್ರವೇಶಿಸದಂತೆ ತಡೆಯಲು ಹಾಕಿರುವ ಬೋರ್ಡ್​ಗಳು

ಇದನ್ನೂ ಓದಿ:ಸರಿಯಾಗಿ ಕೆಲಸ ಮಾಡದಿದ್ದರೆ ಅಧಿಕಾರ ವಹಿಸಿಕೊಳ್ಳಲು ಕೇಂದ್ರಕ್ಕೆ ಸೂಚಿಸಬೇಕಾಗುತ್ತೆ: ದೆಹಲಿ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಕಂದಾಯ, ಗೃಹ, ಒಳಾಡಳಿತ, ಆರೋಗ್ಯ ಮತ್ತು ವೈದ್ಯಕೀಯ ಇಲಾಖೆ ಸಿಬ್ಬಂದಿಗೆ ಶೇ 100 ಹಾಜರಾತಿ ಕಡ್ಡಾಯ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ