AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲೆಂದರಲ್ಲಿ ರಾಮಮಂದಿರದಂತಹ ವಿವಾದಗಳನ್ನು ಹುಟ್ಟುಹಾಕಬೇಡಿ : ಮೋಹನ್ ಭಾಗವತ್

ರಾಷ್ಟ್ರೀಯ ಸ್ವಯಂಸೇವಕ ಸಂಘ ಸರಸಂಘ ಚಾಲಕ ಮೋಹನ್ ಭಾಗವತ್ ಅವರು ಗುರುವಾರ ದೇಶದಲ್ಲಿ ಹಲವಾರು ಮಂದಿರ-ಮಸೀದಿ ವಿವಾದಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಪುಣೆಯಲ್ಲಿ ಭಾರತ- ವಿಶ್ವಗುರು ಕುರಿತು ಉಪನ್ಯಾಸ ನೀಡಿದ ಭಾಗವತ್, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ನಂತರ ಕೆಲವು ವ್ಯಕ್ತಿಗಳು ಇಂತಹ ವಿವಾದಗಳನ್ನು ಹುಟ್ಟುಹಾಕುವ ಮೂಲಕ ಹಿಂದೂಗಳ ನಾಯಕರು ಆಗಬಹುದು ಎಂಬ ಭಾವನೆಯಲ್ಲಿದ್ದಾರೆ ಎಂದರು.

ಎಲ್ಲೆಂದರಲ್ಲಿ ರಾಮಮಂದಿರದಂತಹ ವಿವಾದಗಳನ್ನು ಹುಟ್ಟುಹಾಕಬೇಡಿ : ಮೋಹನ್ ಭಾಗವತ್
ಮೋಹನ್ ಭಾಗವತ್ Image Credit source: Moneycontrol
ನಯನಾ ರಾಜೀವ್
|

Updated on: Dec 20, 2024 | 11:18 AM

Share

ಎಲ್ಲೆಂದರಲ್ಲಿ ರಾಮ ಮಂದಿರದಂತಹ ವಿವಾದಗಳನ್ನು ಹುಟ್ಟುಹಾಕಬೇಡಿ ಎಂದು ಎಂದು ಆರ್‌ಎಸ್‌ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್  ಹೇಳಿದ್ದಾರೆ.  ಪುಣೆಯಲ್ಲಿ ವಿಶ್ವಗುರು ಭಾರತ ಕುರಿತ ಉಪನ್ಯಾಸದಲ್ಲಿ ಪಾಲ್ಗೊಂಡ ಅವರು, ಭಾರತವು ಎಲ್ಲಾ ಧರ್ಮಗಳು ಮತ್ತು ಸಿದ್ಧಾಂತಗಳ ಸಾಮರಸ್ಯದ ಸಹಬಾಳ್ವೆಗೆ ಮಾದರಿಯಾಗಬೇಕು ಎಂದು ಹೇಳಿದರು.

ಉತ್ತರ ಪ್ರದೇಶದ ಸಂಭಾಲ್‌ನ ಶಾಹಿ ಜಾಮಾ ಮಸೀದಿ ಮತ್ತು ರಾಜಸ್ಥಾನದ ಅಜ್ಮೀರ್ ಷರೀಫ್‌ನಂತಹ ಧಾರ್ಮಿಕ ಸ್ಥಳಗಳ ಮೂಲದ ಬಗ್ಗೆ ಇತ್ತೀಚಿನ ವಿವಾದಗಳ ಹಿನ್ನೆಲೆಯಲ್ಲಿ ಅವರು ಈ ರೀತಿ ಹೇಳಿದ್ದಾರೆ. ಭಾರತದಲ್ಲಿ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಎಂಬುದಿಲ್ಲ, ಎಲ್ಲರೂ ಒಂದೇ ಎಂದು ಹೇಳಿದರು.

ತಮ್ಮ ತಪ್ಪುಗಳಿಂದ ಭಾರತೀಯರು ಪಾಠ ಕಲಿಯಬೇಕು, ವಿವಾದಾತ್ಮಕ ವಿಷಯಗಳನ್ನು ತಪ್ಪಿಸುವ ಮೂಲಕ ಒಳ್ಳೆಯತನಕ್ಕೆ ಮಾದರಿಯಾಗಬೇಕು. ಉಗ್ರವಾದ, ಆಕ್ರಮಣಶೀಲತೆ, ಬಲಪ್ರಯೋಗ ಮತ್ತು ಇತರರ ದೇವರನ್ನು ಅವಮಾನಿಸುವುದು ನಮ್ಮ ಸಂಸ್ಕೃತಿಯಲ್ಲ ಎಂದು ಒತ್ತಿ ಹೇಳಿದರು.

ಮತ್ತಷ್ಟು ಓದಿ: ಬೇರೆ ದೇಶದ ಅಲ್ಪಸಂಖ್ಯಾತರ ಮೇಲಿನ ದಾಳಿಯ ಬಗ್ಗೆಯೂ ಜಗತ್ತು ಗಮನಹರಿಸಬೇಕು; ಮೋಹನ್ ಭಾಗವತ್

ಈ ದೇಶದಲ್ಲಿ ಪ್ರತಿಯೊಬ್ಬರೂ ತಮ್ಮದೇ ಆದ ಪೂಜಾ ವಿಧಾನವನ್ನು ಅನುಸರಿಸುತ್ತಾರೆ. ಭಾರತ ವಿಶ್ವಕ್ಕೆ ಮಾದರಿಯಾಗಬೇಕು, ವಿಭಿನ್ನ ಧರ್ಮಗಳು ಮತ್ತು ಸಿದ್ಧಾಂತಗಳು ವಿವಾದಗಳಿಲ್ಲದೆ ಹೇಗೆ ಒಟ್ಟಿಗೆ ಬದುಕುತ್ತವೆ ಎಂಬುದನ್ನು ನಾವು ತೋರಿಸಬೇಕು ಎಂದು ಭರವಸೆಯ ಮಾತುಗಳನ್ನಾಡಿದರು.

ಪ್ರಾಬಲ್ಯದ ದಿನಗಳು ಕಳೆದುಹೋಗಿವೆ. ಮೊಘಲ್ ಚಕ್ರವರ್ತಿ ಔರಂಗಜೇಬನ ಆಳ್ವಿಕೆಯು ಇದೇ ರೀತಿಯ ಮತಾಂಧತೆಯಿಂದ ಗುರುತಿಸಲ್ಪಟ್ಟಿದೆ ಎಂದು ಅವರು ಹೇಳಿದರು, ಆದಾಗ್ಯೂ ಅವರ ವಂಶಸ್ಥ ಬಹದ್ದೂರ್ ಶಾ ಜಾಫರ್ 1857 ರಲ್ಲಿ ಗೋಹತ್ಯೆಯನ್ನು ನಿಷೇಧಿಸಿದರು.

ಅಯೋಧ್ಯೆಯಲ್ಲಿನ ರಾಮಮಂದಿರವನ್ನು ಹಿಂದೂಗಳಿಗೆ ನೀಡಬೇಕು ಎಂದು ತೀರ್ಮಾನಿಸಲಾಯಿತು, ಆದರೆ ಬ್ರಿಟಿಷರು ಇದನ್ನು ಗಾಳಿಗೆ ತೂರಿ ಎರಡು ಸಮುದಾಯಗಳ ನಡುವೆ ಬಿರುಕು ಮೂಡಿಸಿದರು. ಅಂದಿನಿಂದ, ಪ್ರತ್ಯೇಕತಾ ಭಾವನೆ ಅಸ್ತಿತ್ವಕ್ಕೆ ಬಂದಿತು. ಅದರ ಪರಿಣಾಮವಾಗಿ ಪಾಕಿಸ್ತಾನ ಅಸ್ತಿತ್ವಕ್ಕೆ ಬಂತು ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು