AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲಾ ಬ್ಯಾಂಕ್​ಗಳ ಖಾಸಗೀಕರಣ ಮಾಡಲ್ಲ; ಸ್ಪಷ್ಟನೆ ನೀಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Bank Privatisation: ಯಾವುದೇ ಬ್ಯಾಂಕ್ ಆಗಲಿ, ಖಾಸಗೀಕರಣ ಆದಲ್ಲಿ ಅಲ್ಲಿಯ ಉದ್ಯೋಗಿಗಳು ಚಿಂತೆಗೊಳಗಾಗುವುದು ಬೇಡ. ಅಂತಹ ಬ್ಯಾಂಕ್​ಗಳ ಉದ್ಯೋಗಿಗಳ ಹಿತಾಸಕ್ತಿಗೆ ಧಕ್ಕೆ ಬಾರದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದರು.

ಎಲ್ಲಾ ಬ್ಯಾಂಕ್​ಗಳ ಖಾಸಗೀಕರಣ ಮಾಡಲ್ಲ; ಸ್ಪಷ್ಟನೆ ನೀಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ (ಸಂಗ್ರಹ ಚಿತ್ರ)
Follow us
guruganesh bhat
| Updated By: ganapathi bhat

Updated on: Mar 16, 2021 | 5:17 PM

ದೆಹಲಿ: ಚಿಕ್ಕ ಬ್ಯಾಂಕ್​ಗಳ ವಿಲೀನದಿಂದ ದೊಡ್ಡ ಬ್ಯಾಂಕ್​ಗಳು ಸೃಷ್ಟಿಯಾಗಲಿವೆ. ಹಾಗೆಂದು ಎಲ್ಲ ಬ್ಯಾಂಕ್​ಗಳನ್ನು ಖಾಸಗೀಕರಣ ಮಾಡುವುದಿಲ್ಲ. ದೇಶದ ಜನರ ಆಕಾಂಕ್ಷೆ ಈಡೇರಿಸುವ ದೃಷ್ಟಿಯಿಂದ ಬ್ಯಾಂಕ್ ವಿಲೀನ ಪ್ರಕ್ರಿಯೆ ಕೈಗೊಂಡಿದ್ದೇವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ತಿಳಿಸಿದರು. ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಕೈಗೊಂಡ  ಬ್ಯಾಂಕ್ ವಿಲೀನದ ತೀರ್ಮಾನ ದಿಢೀರ್ ನಿರ್ಧಾರವಲ್ಲ. ಹಲವು ವರ್ಷಗಳ ಚಿಂತನೆಯ ನಂತರವೇ ಈ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ಬ್ಯಾಂಕ್​ಗಳನ್ನು ಖಾಸಗೀಕರಣ ಮಾಡದಿದ್ದರೂ ಬ್ಯಾಂಕ್​ಗಳ ಖಾಸಗೀಕರಣ ಪೂರ್ಣಗೊಂಡ ನಂತರ ಅಲ್ಲಿಯ ಉದ್ಯೋಗಿಗಳ ಹಿತರಕ್ಷಣೆಗೆ ಬದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಯಾವುದೇ ಬ್ಯಾಂಕ್ ಆಗಲಿ, ಖಾಸಗೀಕರಣ ಪ್ರಕ್ರಿಯೆ ನಂತರ ಅಲ್ಲಿಯ ಉದ್ಯೋಗಿಗಳು ಚಿಂತೆಗೊಳಗಾಗುವುದು ಬೇಡ. ಅಂತಹ ಬ್ಯಾಂಕ್​ಗಳ ಉದ್ಯೋಗಿಗಳ ಹಿತಾಸಕ್ತಿಗೆ ಧಕ್ಕೆ ಬಾರದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು. ಕೇಂದ್ರ ಸರ್ಕಾರ ಖಾಸಗೀಕರಣದ ಮೂಲಕ ಎಲ್ಲ ಬ್ಯಾಂಕ್​ಗಳ ಮಾರಾಟ ಮಾಡುತ್ತಿದೆ ಎಂದು ವಿಪಕ್ಷಗಳು ದೂರುತ್ತಿವೆ. ಹಿಗೆ ದೂರುವುದು ಸರಿಯಲ್ಲ ಎಂದು ವಿಪಕ್ಷಗಳ ವಿರುದ್ಧ ಟೀಕಿಸಿದ ಅವರು, ಯುಪಿಎ ಸರ್ಕಾರದ ಕಾಲದಲ್ಲಿ ಬ್ಯಾಂಕ್​ಗಳ ನಷ್ಟದಲ್ಲಿದ್ದವು ಎಂಬುದನ್ನು ರಾಹುಲ್ ಗಾಂಧಿ ನೆನಪಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ನಾಯಕ ಟೀಕೆಗೆ ಪ್ರತ್ಯುತ್ತರ ನೀಡಿದರು.

ಮೂಲಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಸಂಸ್ಥೆ ಸ್ಥಾಪನೆ: ದೇಶದಲ್ಲಿ ಮೂಲಸೌಕರ್ಯಗಳ ಯೋಜನೆಗಳಿಗೆ ಹಣಕಾಸಿನ ನೆರವು ಒದಗಿಸಲು ಅಭಿವೃದ್ಧಿ ಆರ್ಥಿಕ ಸಂಸ್ಥೆ (ಡೆವಲಪ್‌ಮೆಂಟ್ ಫೈನಾನ್ಷಿಯಲ್  ಇನ್ಸ್​ಟಿಟ್ಯೂಷನ್ ಅಥವಾ DFI ) ಸ್ಥಾಪಿಸಲು ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಅವರು ಘೋಷಿಸಿದರು. ಈ ಸಂಸ್ಥೆ ಆರಂಭಿಕವಾಗಿ ₹5 ಸಾವಿರ ಕೋಟಿ ಹಣವನ್ನು ಮೂಲಸೌಕರ್ಯ ಯೋಜನೆಗಳಿಗೆ ಒದಗಿಸಲಿದ್ದು, ದೇಶದ ಅಭಿವೃದ್ಧಿಗೆ ಒತ್ತು ನೀಡಲಿದೆ ಎಂದು ಅವರು ತಿಳಿಸಿದರು.

ಬ್ಯಾಂಕ್ ನೌಕರರು ಮುಷ್ಕರ ನಡೆಸಲು ಕಾರಣವೇನು? ಕಳೆದ ಫೆಬ್ರವರಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದರು. ದೇಶದಲ್ಲಿ 1.75 ಲಕ್ಷ ಕೋಟಿ ರೂ. ಗಳಿಸುವ ಸರ್ಕಾರದ ಹೂಡಿಕೆಯ ಭಾಗವಾಗಿ ಸಾರ್ವಜನಿಕ ವಲಯದ ಬ್ಯಾಂಕ್ಗಳನ್ನು ಖಾಸಗೀಕರಣಗೊಳಿಸುವುದಾಗಿ ಘೋಷಿಸಿದ್ದರು. ಕೇಂದ್ರವು ಕಳೆದ ವರ್ಷ 10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ನಾಲ್ಕು ಬ್ಯಾಂಕ್ ಗಳೊಂದಿಗೆ ವಿಲೀನಗೊಳಿಸಿತ್ತು. 2017ರಲ್ಲಿ 27 ಇದ್ದ ಸಾರ್ವಜನಿಕರ ಬ್ಯಾಂಕ್​ಗಳ ಸಂಖ್ಯೆಯು ಮಾರ್ಚ್ ವೇಳೆಗೆ 12 ಕ್ಕೆ ಇಳಿಸಿತು.

ಕೇಂದ್ರ ಸರ್ಕಾರ ಈ ಬಾರಿ ಬಜೆಟ್​ನಲ್ಲಿ 2 ಬ್ಯಾಂಕ್​ಗಳ ಖಾಸಗೀಕರಣ ಮಾಡುವುದಾಗಿ ಹೇಳಿತ್ತು. ಬಳಿಕ 4 ಬ್ಯಾಂಕ್ ಖಾಸಗೀಕರಣಕ್ಕೆ ಕೇಂದ್ರ ಯತ್ನಿಸುತ್ತಿದೆ. ಇದರಿಂದ ಸಾರ್ವಜನಿಕರ ಹಣ ಖಾಸಗಿಯವರ ಕೈಸೇರಲಿದೆ. ಜನರ ಹಣಕ್ಕೆ (ಠೇವಣಿಗೆ) ಯಾವುದೇ ಭದ್ರತೆ ಇರುವುದಿಲ್ಲ. ಈಗಾಗಲೇ ಹಲವು ಖಾಸಗಿ ಬ್ಯಾಂಕ್​ಗಳು ಅಕ್ರಮ ಎಸಗಿವೆ. ಬ್ಯಾಂಕ್ ಖಾಸಗೀಕರಣದಿಂದ ವಿದೇಶೀ ಬಂಡವಾಳದಾರರು ಹಾಗೂ ಉದ್ಯಮಪತಿಗಳ ಕೈಗೆ ಬ್ಯಾಂಕ್ ಹೋಗಲಿದೆ. ಇದು ದೇಶದ ಭವಿಷ್ಯದ ಆರ್ಥಿಕತೆಗೆ ಮುಳುವಾಗಲಿದೆ. ದೇಶದ ಆರ್ಥಿಕತೆ ಖಾಸಗಿ ಕ್ಷೇತ್ರದ ಹಿಡಿತಕ್ಕೆ ಸಿಲುಕಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಬ್ಯಾಂಕ್ ಖಾಸಗೀಕರಣದ ತೀರ್ಮಾನ ನಿಲ್ಲಿಸಬೇಕೆಂದು ಆಗ್ರಹಿಸಿ ಎರಡು ದಿನದ ಮುಷ್ಕರಕ್ಕೆ ಬ್ಯಾಂಕ್‌ ಒಕ್ಕೂಟ​ಗಳ ಸಂಯುಕ್ತ ವೇದಿಕೆ ಕರೆ ಕೊಟ್ಟಿದ್ದವು.

ಇದನ್ನೂ ಓದಿ: ಈ 8 ಬ್ಯಾಂಕ್​ಗಳ ಚೆಕ್​ಬುಕ್, ಪಾಸ್​ಬುಕ್ ಏಪ್ರಿಲ್ 1ರಿಂದ ಚಾಲ್ತಿಯಲ್ಲಿ ಇರಲ್ಲ

Bank Strike: ಇಂದೇ ಮುಗಿಸಿಕೊಳ್ಳಿ ಬ್ಯಾಂಕ್ ಕೆಲಸ, 4 ದಿನ ಸಾಲು ಸಾಲು ರಜೆ.. ಮಾರ್ಚ್ 15 ಮತ್ತು 16 ಬ್ಯಾಂಕ್ ನೌಕರರ ಮುಷ್ಕರ

ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಯುದ್ಧಸನ್ನದ್ಧ ಭಾರತೀಯ ಸೇನೆಯಿಂದ ಪ್ರತ್ಯುತ್ತರ, ಪ್ರತಿದಾಳಿ
ಯುದ್ಧಸನ್ನದ್ಧ ಭಾರತೀಯ ಸೇನೆಯಿಂದ ಪ್ರತ್ಯುತ್ತರ, ಪ್ರತಿದಾಳಿ
‘ನಟಿ ಗ್ಲಾಮರಸ್ ಆಗಿದ್ರೆ ಮಾತ್ರ ನನ್ನ ಕಣ್ಣು ಬೀಳುತ್ತೆ’; ರವಿಚಂದ್ರನ್
‘ನಟಿ ಗ್ಲಾಮರಸ್ ಆಗಿದ್ರೆ ಮಾತ್ರ ನನ್ನ ಕಣ್ಣು ಬೀಳುತ್ತೆ’; ರವಿಚಂದ್ರನ್
ಅಪಘಾತದಲ್ಲಿ ಕಾರಿನ ಮುಂಭಾಗ, ಅಂಗಡಿ ಮುಂದೆ ನಿಂತಿದ್ದ ಸ್ಕೂಟರ್ ಜಖಂ
ಅಪಘಾತದಲ್ಲಿ ಕಾರಿನ ಮುಂಭಾಗ, ಅಂಗಡಿ ಮುಂದೆ ನಿಂತಿದ್ದ ಸ್ಕೂಟರ್ ಜಖಂ
ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಚಿಕ್ಕಮಗಳೂರು ಬಂದ್
ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಚಿಕ್ಕಮಗಳೂರು ಬಂದ್
ಫೈನ್ ಬಿದ್ದರೂ ನಿಲ್ಲದ ದಿಗ್ವೇಶ್ ನೋಟ್​ಬುಕ್ ಸೆಲೆಬ್ರೇಷನ್
ಫೈನ್ ಬಿದ್ದರೂ ನಿಲ್ಲದ ದಿಗ್ವೇಶ್ ನೋಟ್​ಬುಕ್ ಸೆಲೆಬ್ರೇಷನ್
ಮಹಾರಾಷ್ಟ್ರ: ರಾಯಗಢದಲ್ಲಿ ಬಸ್ ಪಲ್ಟಿಯಾಗಿ 35 ಪ್ರಯಾಣಿಕರಿಗೆ ಗಾಯ
ಮಹಾರಾಷ್ಟ್ರ: ರಾಯಗಢದಲ್ಲಿ ಬಸ್ ಪಲ್ಟಿಯಾಗಿ 35 ಪ್ರಯಾಣಿಕರಿಗೆ ಗಾಯ