AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲಾ ಬ್ಯಾಂಕ್​ಗಳ ಖಾಸಗೀಕರಣ ಮಾಡಲ್ಲ; ಸ್ಪಷ್ಟನೆ ನೀಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Bank Privatisation: ಯಾವುದೇ ಬ್ಯಾಂಕ್ ಆಗಲಿ, ಖಾಸಗೀಕರಣ ಆದಲ್ಲಿ ಅಲ್ಲಿಯ ಉದ್ಯೋಗಿಗಳು ಚಿಂತೆಗೊಳಗಾಗುವುದು ಬೇಡ. ಅಂತಹ ಬ್ಯಾಂಕ್​ಗಳ ಉದ್ಯೋಗಿಗಳ ಹಿತಾಸಕ್ತಿಗೆ ಧಕ್ಕೆ ಬಾರದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದರು.

ಎಲ್ಲಾ ಬ್ಯಾಂಕ್​ಗಳ ಖಾಸಗೀಕರಣ ಮಾಡಲ್ಲ; ಸ್ಪಷ್ಟನೆ ನೀಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ (ಸಂಗ್ರಹ ಚಿತ್ರ)
guruganesh bhat
| Edited By: |

Updated on: Mar 16, 2021 | 5:17 PM

Share

ದೆಹಲಿ: ಚಿಕ್ಕ ಬ್ಯಾಂಕ್​ಗಳ ವಿಲೀನದಿಂದ ದೊಡ್ಡ ಬ್ಯಾಂಕ್​ಗಳು ಸೃಷ್ಟಿಯಾಗಲಿವೆ. ಹಾಗೆಂದು ಎಲ್ಲ ಬ್ಯಾಂಕ್​ಗಳನ್ನು ಖಾಸಗೀಕರಣ ಮಾಡುವುದಿಲ್ಲ. ದೇಶದ ಜನರ ಆಕಾಂಕ್ಷೆ ಈಡೇರಿಸುವ ದೃಷ್ಟಿಯಿಂದ ಬ್ಯಾಂಕ್ ವಿಲೀನ ಪ್ರಕ್ರಿಯೆ ಕೈಗೊಂಡಿದ್ದೇವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ತಿಳಿಸಿದರು. ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಕೈಗೊಂಡ  ಬ್ಯಾಂಕ್ ವಿಲೀನದ ತೀರ್ಮಾನ ದಿಢೀರ್ ನಿರ್ಧಾರವಲ್ಲ. ಹಲವು ವರ್ಷಗಳ ಚಿಂತನೆಯ ನಂತರವೇ ಈ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ಬ್ಯಾಂಕ್​ಗಳನ್ನು ಖಾಸಗೀಕರಣ ಮಾಡದಿದ್ದರೂ ಬ್ಯಾಂಕ್​ಗಳ ಖಾಸಗೀಕರಣ ಪೂರ್ಣಗೊಂಡ ನಂತರ ಅಲ್ಲಿಯ ಉದ್ಯೋಗಿಗಳ ಹಿತರಕ್ಷಣೆಗೆ ಬದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಯಾವುದೇ ಬ್ಯಾಂಕ್ ಆಗಲಿ, ಖಾಸಗೀಕರಣ ಪ್ರಕ್ರಿಯೆ ನಂತರ ಅಲ್ಲಿಯ ಉದ್ಯೋಗಿಗಳು ಚಿಂತೆಗೊಳಗಾಗುವುದು ಬೇಡ. ಅಂತಹ ಬ್ಯಾಂಕ್​ಗಳ ಉದ್ಯೋಗಿಗಳ ಹಿತಾಸಕ್ತಿಗೆ ಧಕ್ಕೆ ಬಾರದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು. ಕೇಂದ್ರ ಸರ್ಕಾರ ಖಾಸಗೀಕರಣದ ಮೂಲಕ ಎಲ್ಲ ಬ್ಯಾಂಕ್​ಗಳ ಮಾರಾಟ ಮಾಡುತ್ತಿದೆ ಎಂದು ವಿಪಕ್ಷಗಳು ದೂರುತ್ತಿವೆ. ಹಿಗೆ ದೂರುವುದು ಸರಿಯಲ್ಲ ಎಂದು ವಿಪಕ್ಷಗಳ ವಿರುದ್ಧ ಟೀಕಿಸಿದ ಅವರು, ಯುಪಿಎ ಸರ್ಕಾರದ ಕಾಲದಲ್ಲಿ ಬ್ಯಾಂಕ್​ಗಳ ನಷ್ಟದಲ್ಲಿದ್ದವು ಎಂಬುದನ್ನು ರಾಹುಲ್ ಗಾಂಧಿ ನೆನಪಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ನಾಯಕ ಟೀಕೆಗೆ ಪ್ರತ್ಯುತ್ತರ ನೀಡಿದರು.

ಮೂಲಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಸಂಸ್ಥೆ ಸ್ಥಾಪನೆ: ದೇಶದಲ್ಲಿ ಮೂಲಸೌಕರ್ಯಗಳ ಯೋಜನೆಗಳಿಗೆ ಹಣಕಾಸಿನ ನೆರವು ಒದಗಿಸಲು ಅಭಿವೃದ್ಧಿ ಆರ್ಥಿಕ ಸಂಸ್ಥೆ (ಡೆವಲಪ್‌ಮೆಂಟ್ ಫೈನಾನ್ಷಿಯಲ್  ಇನ್ಸ್​ಟಿಟ್ಯೂಷನ್ ಅಥವಾ DFI ) ಸ್ಥಾಪಿಸಲು ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಅವರು ಘೋಷಿಸಿದರು. ಈ ಸಂಸ್ಥೆ ಆರಂಭಿಕವಾಗಿ ₹5 ಸಾವಿರ ಕೋಟಿ ಹಣವನ್ನು ಮೂಲಸೌಕರ್ಯ ಯೋಜನೆಗಳಿಗೆ ಒದಗಿಸಲಿದ್ದು, ದೇಶದ ಅಭಿವೃದ್ಧಿಗೆ ಒತ್ತು ನೀಡಲಿದೆ ಎಂದು ಅವರು ತಿಳಿಸಿದರು.

ಬ್ಯಾಂಕ್ ನೌಕರರು ಮುಷ್ಕರ ನಡೆಸಲು ಕಾರಣವೇನು? ಕಳೆದ ಫೆಬ್ರವರಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದರು. ದೇಶದಲ್ಲಿ 1.75 ಲಕ್ಷ ಕೋಟಿ ರೂ. ಗಳಿಸುವ ಸರ್ಕಾರದ ಹೂಡಿಕೆಯ ಭಾಗವಾಗಿ ಸಾರ್ವಜನಿಕ ವಲಯದ ಬ್ಯಾಂಕ್ಗಳನ್ನು ಖಾಸಗೀಕರಣಗೊಳಿಸುವುದಾಗಿ ಘೋಷಿಸಿದ್ದರು. ಕೇಂದ್ರವು ಕಳೆದ ವರ್ಷ 10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ನಾಲ್ಕು ಬ್ಯಾಂಕ್ ಗಳೊಂದಿಗೆ ವಿಲೀನಗೊಳಿಸಿತ್ತು. 2017ರಲ್ಲಿ 27 ಇದ್ದ ಸಾರ್ವಜನಿಕರ ಬ್ಯಾಂಕ್​ಗಳ ಸಂಖ್ಯೆಯು ಮಾರ್ಚ್ ವೇಳೆಗೆ 12 ಕ್ಕೆ ಇಳಿಸಿತು.

ಕೇಂದ್ರ ಸರ್ಕಾರ ಈ ಬಾರಿ ಬಜೆಟ್​ನಲ್ಲಿ 2 ಬ್ಯಾಂಕ್​ಗಳ ಖಾಸಗೀಕರಣ ಮಾಡುವುದಾಗಿ ಹೇಳಿತ್ತು. ಬಳಿಕ 4 ಬ್ಯಾಂಕ್ ಖಾಸಗೀಕರಣಕ್ಕೆ ಕೇಂದ್ರ ಯತ್ನಿಸುತ್ತಿದೆ. ಇದರಿಂದ ಸಾರ್ವಜನಿಕರ ಹಣ ಖಾಸಗಿಯವರ ಕೈಸೇರಲಿದೆ. ಜನರ ಹಣಕ್ಕೆ (ಠೇವಣಿಗೆ) ಯಾವುದೇ ಭದ್ರತೆ ಇರುವುದಿಲ್ಲ. ಈಗಾಗಲೇ ಹಲವು ಖಾಸಗಿ ಬ್ಯಾಂಕ್​ಗಳು ಅಕ್ರಮ ಎಸಗಿವೆ. ಬ್ಯಾಂಕ್ ಖಾಸಗೀಕರಣದಿಂದ ವಿದೇಶೀ ಬಂಡವಾಳದಾರರು ಹಾಗೂ ಉದ್ಯಮಪತಿಗಳ ಕೈಗೆ ಬ್ಯಾಂಕ್ ಹೋಗಲಿದೆ. ಇದು ದೇಶದ ಭವಿಷ್ಯದ ಆರ್ಥಿಕತೆಗೆ ಮುಳುವಾಗಲಿದೆ. ದೇಶದ ಆರ್ಥಿಕತೆ ಖಾಸಗಿ ಕ್ಷೇತ್ರದ ಹಿಡಿತಕ್ಕೆ ಸಿಲುಕಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಬ್ಯಾಂಕ್ ಖಾಸಗೀಕರಣದ ತೀರ್ಮಾನ ನಿಲ್ಲಿಸಬೇಕೆಂದು ಆಗ್ರಹಿಸಿ ಎರಡು ದಿನದ ಮುಷ್ಕರಕ್ಕೆ ಬ್ಯಾಂಕ್‌ ಒಕ್ಕೂಟ​ಗಳ ಸಂಯುಕ್ತ ವೇದಿಕೆ ಕರೆ ಕೊಟ್ಟಿದ್ದವು.

ಇದನ್ನೂ ಓದಿ: ಈ 8 ಬ್ಯಾಂಕ್​ಗಳ ಚೆಕ್​ಬುಕ್, ಪಾಸ್​ಬುಕ್ ಏಪ್ರಿಲ್ 1ರಿಂದ ಚಾಲ್ತಿಯಲ್ಲಿ ಇರಲ್ಲ

Bank Strike: ಇಂದೇ ಮುಗಿಸಿಕೊಳ್ಳಿ ಬ್ಯಾಂಕ್ ಕೆಲಸ, 4 ದಿನ ಸಾಲು ಸಾಲು ರಜೆ.. ಮಾರ್ಚ್ 15 ಮತ್ತು 16 ಬ್ಯಾಂಕ್ ನೌಕರರ ಮುಷ್ಕರ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?