AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಜಾಹೀರಾತಿನಿಂದ ವಿವಾದಕ್ಕೀಡಾದ ಫ್ಯಾಬ್ ​ಇಂಡಿಯಾದಿಂದ ಸ್ಪಷ್ಟನೆ; ಇದು ದೀಪಾವಳಿ ಕಲೆಕ್ಷನ್​ ಅಲ್ಲವೆಂದ ಕಂಪನಿ !

Fabindia: ಫ್ಯಾಬ್​ ಇಂಡಿಯಾ ಕಂಪನಿ ಪ್ರತಿ 15ದಿನಗಳಿಗೊಮ್ಮೆ ಹೊಸ ಕಲೆಕ್ಷನ್​ ಬಿಡುಗಡೆ ಮಾಡುತ್ತದೆ ಎಂದೂ ಹೇಳಲಾಗಿದೆ. ಅಂದರೆ ನಿನ್ನೆ ಬಿಡುಗಡೆಯಾಗಿದ್ದು ದೀಪಾವಳಿ ಕಲೆಕ್ಷನ್​ ಆಗಿರಲಿಲ್ಲ.

ದೀಪಾವಳಿ ಜಾಹೀರಾತಿನಿಂದ ವಿವಾದಕ್ಕೀಡಾದ ಫ್ಯಾಬ್ ​ಇಂಡಿಯಾದಿಂದ ಸ್ಪಷ್ಟನೆ; ಇದು ದೀಪಾವಳಿ ಕಲೆಕ್ಷನ್​ ಅಲ್ಲವೆಂದ ಕಂಪನಿ !
ಫ್ಯಾಬ್​ ಇಂಡಿಯಾ ಬಿಡುಗಡೆ ಮಾಡಿದ್ದ ಜಾಹೀರಾತು
TV9 Web
| Edited By: |

Updated on:Oct 19, 2021 | 2:54 PM

Share

ದೆಹಲಿ: ಜನಪ್ರಿಯ ವಸ್ತ್ರ ಬ್ರ್ಯಾಂಡ್​ ಫ್ಯಾಬ್​ ಇಂಡಿಯಾ (Fabindia) ಇದೀಗ ಭರ್ಜರಿ ಸುದ್ದಿಯಲ್ಲಿದೆ. ಒಂದೇ ಒಂದು ಜಾಹಿರಾತಿನಿಂದ ಸಿಕ್ಕಾಪಟೆ ಟ್ರೋಲ್​ ಆಗಿ, ಇದೀಗ ಆ ಜಾಹೀರಾತನ್ನೇ ಹಿಂಪಡೆದಿದೆ. ಹಿಂದುಗಳ ಹಬ್ಬ ದೀಪಾವಳಿಗೆ ಉರ್ದು ಲಿಂಕ್​ ಮಾಡಿ, ಜೈಷ್ನ್​ ಎ ರಿವಾಜ್ (Jashn-e-Riwaaz)​ ಎಂದು ಕರೆದಿತ್ತು. ಅಂದರೆ ದೀಪಾವಳಿಯ ಹೊಸ ಬಟ್ಟೆ ಕಲೆಕ್ಷನ್​​ಗೆ ಉರ್ದುವಿನಲ್ಲಿ ಜೈಷ್ನ್​ ಎ ರಿವಾಜ್​ ಎಂದು ಹೆಸರಿಟ್ಟಿತ್ತು. ಆದರೆ ಅದು ಕೆಲವೇ ಕ್ಷಣಗಳಲ್ಲಿ ಸಿಕ್ಕಾಪಟೆ ಆಕ್ರೋಶಕ್ಕೆ ಕಾರಣವಾದ ನಂತರ ತನ್ನ ಟ್ವೀಟ್ ಡಿಲೀಟ್​ ಮಾಡಿ, ಜಾಹೀರಾತನ್ನೇ ಹಿಂಪಡೆದಿದೆ. 

ಜಾಹೀರಾತು ಹಿಂಪಡೆದ ಕಂಪನಿ ಇದೀಗ ಒಂದು ಸ್ಪಷ್ಟೀಕರಣ ಬಿಡುಗಡೆ ಮಾಡಿದೆ.  ಜೈಷ್ನ್​ ಎ ರಿವಾಜ್​ ಎಂಬುದು ಕಂಪನಿಯು ದೀಪಾವಳಿ ಬಟ್ಟೆ ಕಲೆಕ್ಷನ್​​ಗೆ ಇಟ್ಟಿದ್ದ ಹೆಸರಲ್ಲ. ದೀಪಾವಳಿ ಕಲೆಕ್ಷನ್​ ಝಿಲ್​ ಮಿಲ್​ ಸೆ ದಿವಾಲಿ ಇನ್ನೂ ಬಿಡುಗಡೆಯಾಗಿಲ್ಲ ಎಂದು ಹೇಳಿಕೊಂಡಿದೆ.  ಈ ಫ್ಯಾಬ್​ ಇಂಡಿಯಾ ಕಂಪನಿ ಪ್ರತಿ 15ದಿನಗಳಿಗೊಮ್ಮೆ ಹೊಸ ಕಲೆಕ್ಷನ್​ ಬಿಡುಗಡೆ ಮಾಡುತ್ತದೆ ಎಂದೂ ಹೇಳಲಾಗಿದೆ. ಅಂದರೆ ನಿನ್ನೆ ಬಿಡುಗಡೆಯಾಗಿದ್ದು ದೀಪಾವಳಿ ಕಲೆಕ್ಷನ್​ ಆಗಿರಲಿಲ್ಲ ಎಂಬುದು ಕಂಪನಿಯ ಸ್ಪಷ್ಟನೆ.

ದೆಹಲಿಯ ಪ್ರಸಿದ್ಧ ವಸ್ತ್ರದ ಬ್ರ್ಯಾಂಡ್​ ಆಗಿರುವ ಫ್ಯಾಬ್​ ಇಂಡಿಯಾ ನಿನ್ನೆ ಈ ಜಾಹಿರಾತು ಬಿಡುಗಡೆ ಮಾಡುತ್ತಿದ್ದಂತೆ ನೆಟ್ಟಿಗರು ಕಿಡಿಕಾರಿದ್ದರು. ದೀಪಾವಳಿಗಾಗಿ ಬಿಡುಗಡೆ ಮಾಡಿದ ಬಟ್ಟೆಯ ಕಲೆಕ್ಷನ್​ಗೆ ಜೈಷ್ನ್​ ಎ ರಿವಾಜ್​ ಎಂದು ಯಾಕೆ ಹೆಸರಿಡಬೇಕು ಎಂಬುದು ಪ್ರಶ್ನೆ. ಇನ್ನು ಸಂಸದ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಕೂಡ ಟ್ವೀಟ್​ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದರು. ದೀಪಾವಳಿಯೆಂಬುದು ಜೈಷ್ನ್​ ಎ ರಿವಾಜ್​ ಅಲ್ಲ. ಹೀಗೆ ಉದ್ದೇಶಪೂರ್ವಕವಾಗಿ ಮಾಡುವ ದುಷ್ಕೃತ್ಯಗಳಿಗಾಗಿ  ಫ್ಯಾಬ್​ ಇಂಡಿಯಾ ಆರ್ಥಿಕ ವೆಚ್ಚ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದರು. ತೇಜಸ್ವಿ ಸೂರ್ಯನಷ್ಟೇ ಅಲ್ಲದೆ ಇನ್ನೂ ಹಲವರು ವಿರೋಧ ವ್ಯಕ್ತಪಡಿಸಿದ್ದರು.  ಟ್ವಿಟರ್​ನಲ್ಲಿ Boycott Fabindia ಹ್ಯಾಷ್​ಟ್ಯಾಗ್​ ಟ್ರೆಂಡ್​ ಕೂಡ ಆಗಿತ್ತು.

ಇದನ್ನೂ ಓದಿ: ಬಾಂಗ್ಲಾದೇಶಿ ಹಿಂದೂಗಳನ್ನು ರಕ್ಷಿಸಲು ಸಿಎಎಗೆ ತಿದ್ದುಪಡಿ ಮಾಡಿ: ಕಾಂಗ್ರೆಸ್ ನಾಯಕ ಮಿಲಿಂದ್ ದೆವರಾ

ಶಿವಮೊಗ್ಗ ಕೃಷಿ ಕಾಲೇಜು ಉಪನ್ಯಾಸಕ ಶವ ಹೊನ್ನಾಳಿ ತಾಂಡಾ ಕೆರೆಯಲ್ಲಿ ಪತ್ತೆ; ಚಿಂತಾಮಣಿಯಲ್ಲಿ ಮೂವರು ಬಾಲಕರು ಕೆರೆಪಾಲು

Published On - 2:52 pm, Tue, 19 October 21

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು