AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್​ ಮನಿ ಸಂಸ್ಕೃತಿಯ ಟಿಎಂಸಿಯಿಂದ ಬಂದವರಿಗೆ ಬಿಜೆಪಿಯಲ್ಲಿ ಉಳಿಯುವುದು ಕಷ್ಟ: ದಿಲೀಪ್ ಘೋಷ್​

ನಮ್ಮ ಪಕ್ಷ ಯಾರೇ ಬಂದರೂ ಅವರನ್ನು ಸ್ವಾಗತಿಸುತ್ತದೆ. ಪ್ರಜಾಪ್ರಭುತ್ವ ಮಾದರಿಯಲ್ಲಿ ಅವರಿಗೆ ಜವಾಬ್ದಾರಿಯನ್ನೂ ವಹಿಸುತ್ತದೆ. ಆದರೆ ಒಂದಷ್ಟು ಮಂದಿಗೆ ಶಿಸ್ತಿನಿಂದ ಕೆಲಸ ಮಾಡಲು ಸಾಧ್ಯವಿಲ್ಲ. ಬಿಜೆಪಿಯ ಸಿದ್ಧಾಂತಕ್ಕೆ ಬದ್ಧರಾಗಿ ಇರಲು ಸಾಧ್ಯವಿಲ್ಲ ಎಂದು ದಿಲೀಪ್​ ಘೋಷ್​ ಹೇಳಿದ್ದಾರೆ.

ಕಟ್​ ಮನಿ ಸಂಸ್ಕೃತಿಯ ಟಿಎಂಸಿಯಿಂದ ಬಂದವರಿಗೆ ಬಿಜೆಪಿಯಲ್ಲಿ ಉಳಿಯುವುದು ಕಷ್ಟ: ದಿಲೀಪ್ ಘೋಷ್​
ದಿಲೀಪ್​ ಘೋಷ್​
TV9 Web
| Edited By: |

Updated on:Jun 13, 2021 | 10:01 AM

Share

ಬಿಜೆಪಿಯನ್ನು ತೊರೆದ ಮುಕುಲ್​ ರಾಯ್​ಗೆ ಬಿಜೆಪಿ ಮುಖಂಡ ದಿಲೀಪ್​ ಘೋಷ್​ ತಿರುಗೇಟು ನೀಡಿದ್ದಾರೆ. ಟಿಎಂಸಿಯಲ್ಲಿದ್ದು ಕಟ್​ ಮನಿ (ಭ್ರಷ್ಟಾಚಾರ) ಸಂಸ್ಕೃತಿ ಅಭ್ಯಾಸ ಆದವರಿಗೆ ಬಿಜೆಪಿಗೆ ಬಂದು ಉಳಿಯುವುದು ತುಂಬ ಕಷ್ಟ ಎಂದು ವ್ಯಂಗ್ಯವಾಡಿದ್ದಾರೆ. ಹಾಗೇ, ಮುಕುಲ್​ ರಾಯ್​ ಪದೇಪದೆ ಪಕ್ಷ ಬದಲಿಸುತ್ತಾರೆ ಎಂಬುದನ್ನು ಅಲ್ಲಗಳೆದ ದಿಲೀಪ್​ ಘೋಷ್​, ಮುಕುಲ್​ಗೆ ಬಿಜೆಪಿಯಲ್ಲಿ ಉಳಿಯುವುದಷ್ಟೇ ಕಷ್ಟ ಎಂದಿದ್ದಾರೆ.

ಬಿಜೆಪಿಗೆ ಬರುವ ಇತರ ಪಕ್ಷದವರಿಗೆ ಇಲ್ಲಿ ಉಳಿದುಕೊಳ್ಳಲು ತಪಸ್ಸು ಮಾಡುವ ಅಗತ್ಯವಿಲ್ಲ. ಆದರೆ ಕಟ್​ ಮನಿ, ಸಿಂಡಿಕೇಟ್​ ಸಂಸ್ಕೃತಿಯಿರುವ ಟಿಎಂಸಿಯಿಂದ ಬಿಜೆಪಿಗೆ ಬಂದವರಿಗೆ ಇಲ್ಲಿ ಮುಂದುವರಿಯುವುದು ತುಂಬ ಕಷ್ಟ ಎಂದು ದಿಲೀಪ್​ ಘೋಷ್​ ಹೇಳಿದ್ದಾರೆ. ಮುಕುಲ್​ ರಾಯ್​ ಮತ್ತೆ ಬಿಜೆಪಿಯಿಂದ ಹೊರಹೋದಾಕ್ಷಣ ನಮ್ಮ ಪಕ್ಷಕ್ಕೆ ಯಾವ ನಷ್ಟವೂ ಅಲ್ಲ, ನಮಗೇನೂ ಬಾಧಿಸುವುದೂ ಇಲ್ಲ ಎಂದಿದ್ದಾರೆ.

ಮುಕುಲ್​ ರಾಯ್ ಒಬ್ಬ ಅನುಭವಿ ರಾಜಕಾರಣಿ. ಅವರೇನೇ ಮಾಡಿದರೂ, ಅದರ ಹಿಂದೊಂದು ಪ್ಲ್ಯಾನ್​ ಇದ್ದೇ ಇರುತ್ತದೆ. ಸಾವಿರಾರು ಜನರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ. ಆದರೆ ಕೆಲವೇ ಜನರಿಗೆ ಇಲ್ಲಿ ಒಗ್ಗಿಕೊಳ್ಳಲು ಸಮಸ್ಯೆಯಾಗುತ್ತದೆ. ಅದು ಅವರ ವೈಯಕ್ತಿಕ ಸಮಸ್ಯೆಯೇ ಹೊರತು ಪಕ್ಷದ್ದಲ್ಲ ಎಂದು ದಿಲೀಪ್​ ಘೋಷ್​ ಹೇಳಿದ್ದಾರೆ.

ನಮ್ಮ ಪಕ್ಷ ಯಾರೇ ಬಂದರೂ ಅವರನ್ನು ಸ್ವಾಗತಿಸುತ್ತದೆ. ಪ್ರಜಾಪ್ರಭುತ್ವ ಮಾದರಿಯಲ್ಲಿ ಅವರಿಗೆ ಜವಾಬ್ದಾರಿಯನ್ನೂ ವಹಿಸುತ್ತದೆ. ಆದರೆ ಒಂದಷ್ಟು ಮಂದಿಗೆ ಶಿಸ್ತಿನಿಂದ ಕೆಲಸ ಮಾಡಲು ಸಾಧ್ಯವಿಲ್ಲ. ಬಿಜೆಪಿಯ ಸಿದ್ಧಾಂತಕ್ಕೆ ಬದ್ಧರಾಗಿ ಇರಲು ಸಾಧ್ಯವಿಲ್ಲ. ಅಂಥವರು ಪಕ್ಷವನ್ನು ಬಿಟ್ಟು ಹೋಗುತ್ತಾರೆ ಎಂದು ದಿಲೀಪ್​ ಘೋಷ್​ ಹೇಳಿದ್ದಾರೆ. ನಮ್ಮ ಪಕ್ಷ ಸಂಘಟನೆಯಾಗಿದ್ದು ಹಳೇ ಕಾರ್ಯಕರ್ತರಿಂದ. ಅವರಿನ್ನೂ ಪಕ್ಷಕ್ಕೆ ಬದ್ಧರಾಗಿದ್ದಾರೆ. ಹೀಗೆ ಬಂದು..ಹಾಗೇ ಹೋಗುವವರ ಬಗ್ಗೆಯೆಲ್ಲ ನಾವು ತಲೆ ಕೆಡಿಸಿಕೊಳ್ಳೋದಿಲ್ಲ ಎಂದು ದಿಲೀಪ್ ಘೋಷ್​ ಖಡಾಖಂಡಿತವಾಗಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Sushant Singh Rajput: ಸುಶಾಂತ್​ ಸಾವಿನ ನಂತರ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ನೀಡಿದ ಅಚ್ಚರಿಯ​ ಹೇಳಿಕೆಗಳು

Published On - 9:58 am, Sun, 13 June 21

Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್