AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್​ ಮನಿ ಸಂಸ್ಕೃತಿಯ ಟಿಎಂಸಿಯಿಂದ ಬಂದವರಿಗೆ ಬಿಜೆಪಿಯಲ್ಲಿ ಉಳಿಯುವುದು ಕಷ್ಟ: ದಿಲೀಪ್ ಘೋಷ್​

ನಮ್ಮ ಪಕ್ಷ ಯಾರೇ ಬಂದರೂ ಅವರನ್ನು ಸ್ವಾಗತಿಸುತ್ತದೆ. ಪ್ರಜಾಪ್ರಭುತ್ವ ಮಾದರಿಯಲ್ಲಿ ಅವರಿಗೆ ಜವಾಬ್ದಾರಿಯನ್ನೂ ವಹಿಸುತ್ತದೆ. ಆದರೆ ಒಂದಷ್ಟು ಮಂದಿಗೆ ಶಿಸ್ತಿನಿಂದ ಕೆಲಸ ಮಾಡಲು ಸಾಧ್ಯವಿಲ್ಲ. ಬಿಜೆಪಿಯ ಸಿದ್ಧಾಂತಕ್ಕೆ ಬದ್ಧರಾಗಿ ಇರಲು ಸಾಧ್ಯವಿಲ್ಲ ಎಂದು ದಿಲೀಪ್​ ಘೋಷ್​ ಹೇಳಿದ್ದಾರೆ.

ಕಟ್​ ಮನಿ ಸಂಸ್ಕೃತಿಯ ಟಿಎಂಸಿಯಿಂದ ಬಂದವರಿಗೆ ಬಿಜೆಪಿಯಲ್ಲಿ ಉಳಿಯುವುದು ಕಷ್ಟ: ದಿಲೀಪ್ ಘೋಷ್​
ದಿಲೀಪ್​ ಘೋಷ್​
TV9 Web
| Updated By: Lakshmi Hegde|

Updated on:Jun 13, 2021 | 10:01 AM

Share

ಬಿಜೆಪಿಯನ್ನು ತೊರೆದ ಮುಕುಲ್​ ರಾಯ್​ಗೆ ಬಿಜೆಪಿ ಮುಖಂಡ ದಿಲೀಪ್​ ಘೋಷ್​ ತಿರುಗೇಟು ನೀಡಿದ್ದಾರೆ. ಟಿಎಂಸಿಯಲ್ಲಿದ್ದು ಕಟ್​ ಮನಿ (ಭ್ರಷ್ಟಾಚಾರ) ಸಂಸ್ಕೃತಿ ಅಭ್ಯಾಸ ಆದವರಿಗೆ ಬಿಜೆಪಿಗೆ ಬಂದು ಉಳಿಯುವುದು ತುಂಬ ಕಷ್ಟ ಎಂದು ವ್ಯಂಗ್ಯವಾಡಿದ್ದಾರೆ. ಹಾಗೇ, ಮುಕುಲ್​ ರಾಯ್​ ಪದೇಪದೆ ಪಕ್ಷ ಬದಲಿಸುತ್ತಾರೆ ಎಂಬುದನ್ನು ಅಲ್ಲಗಳೆದ ದಿಲೀಪ್​ ಘೋಷ್​, ಮುಕುಲ್​ಗೆ ಬಿಜೆಪಿಯಲ್ಲಿ ಉಳಿಯುವುದಷ್ಟೇ ಕಷ್ಟ ಎಂದಿದ್ದಾರೆ.

ಬಿಜೆಪಿಗೆ ಬರುವ ಇತರ ಪಕ್ಷದವರಿಗೆ ಇಲ್ಲಿ ಉಳಿದುಕೊಳ್ಳಲು ತಪಸ್ಸು ಮಾಡುವ ಅಗತ್ಯವಿಲ್ಲ. ಆದರೆ ಕಟ್​ ಮನಿ, ಸಿಂಡಿಕೇಟ್​ ಸಂಸ್ಕೃತಿಯಿರುವ ಟಿಎಂಸಿಯಿಂದ ಬಿಜೆಪಿಗೆ ಬಂದವರಿಗೆ ಇಲ್ಲಿ ಮುಂದುವರಿಯುವುದು ತುಂಬ ಕಷ್ಟ ಎಂದು ದಿಲೀಪ್​ ಘೋಷ್​ ಹೇಳಿದ್ದಾರೆ. ಮುಕುಲ್​ ರಾಯ್​ ಮತ್ತೆ ಬಿಜೆಪಿಯಿಂದ ಹೊರಹೋದಾಕ್ಷಣ ನಮ್ಮ ಪಕ್ಷಕ್ಕೆ ಯಾವ ನಷ್ಟವೂ ಅಲ್ಲ, ನಮಗೇನೂ ಬಾಧಿಸುವುದೂ ಇಲ್ಲ ಎಂದಿದ್ದಾರೆ.

ಮುಕುಲ್​ ರಾಯ್ ಒಬ್ಬ ಅನುಭವಿ ರಾಜಕಾರಣಿ. ಅವರೇನೇ ಮಾಡಿದರೂ, ಅದರ ಹಿಂದೊಂದು ಪ್ಲ್ಯಾನ್​ ಇದ್ದೇ ಇರುತ್ತದೆ. ಸಾವಿರಾರು ಜನರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ. ಆದರೆ ಕೆಲವೇ ಜನರಿಗೆ ಇಲ್ಲಿ ಒಗ್ಗಿಕೊಳ್ಳಲು ಸಮಸ್ಯೆಯಾಗುತ್ತದೆ. ಅದು ಅವರ ವೈಯಕ್ತಿಕ ಸಮಸ್ಯೆಯೇ ಹೊರತು ಪಕ್ಷದ್ದಲ್ಲ ಎಂದು ದಿಲೀಪ್​ ಘೋಷ್​ ಹೇಳಿದ್ದಾರೆ.

ನಮ್ಮ ಪಕ್ಷ ಯಾರೇ ಬಂದರೂ ಅವರನ್ನು ಸ್ವಾಗತಿಸುತ್ತದೆ. ಪ್ರಜಾಪ್ರಭುತ್ವ ಮಾದರಿಯಲ್ಲಿ ಅವರಿಗೆ ಜವಾಬ್ದಾರಿಯನ್ನೂ ವಹಿಸುತ್ತದೆ. ಆದರೆ ಒಂದಷ್ಟು ಮಂದಿಗೆ ಶಿಸ್ತಿನಿಂದ ಕೆಲಸ ಮಾಡಲು ಸಾಧ್ಯವಿಲ್ಲ. ಬಿಜೆಪಿಯ ಸಿದ್ಧಾಂತಕ್ಕೆ ಬದ್ಧರಾಗಿ ಇರಲು ಸಾಧ್ಯವಿಲ್ಲ. ಅಂಥವರು ಪಕ್ಷವನ್ನು ಬಿಟ್ಟು ಹೋಗುತ್ತಾರೆ ಎಂದು ದಿಲೀಪ್​ ಘೋಷ್​ ಹೇಳಿದ್ದಾರೆ. ನಮ್ಮ ಪಕ್ಷ ಸಂಘಟನೆಯಾಗಿದ್ದು ಹಳೇ ಕಾರ್ಯಕರ್ತರಿಂದ. ಅವರಿನ್ನೂ ಪಕ್ಷಕ್ಕೆ ಬದ್ಧರಾಗಿದ್ದಾರೆ. ಹೀಗೆ ಬಂದು..ಹಾಗೇ ಹೋಗುವವರ ಬಗ್ಗೆಯೆಲ್ಲ ನಾವು ತಲೆ ಕೆಡಿಸಿಕೊಳ್ಳೋದಿಲ್ಲ ಎಂದು ದಿಲೀಪ್ ಘೋಷ್​ ಖಡಾಖಂಡಿತವಾಗಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Sushant Singh Rajput: ಸುಶಾಂತ್​ ಸಾವಿನ ನಂತರ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ನೀಡಿದ ಅಚ್ಚರಿಯ​ ಹೇಳಿಕೆಗಳು

Published On - 9:58 am, Sun, 13 June 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!