AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಲಸಿಕೆ ಹಾಕಿಸಿಕೊಂಡ್ರೆ ಕೊರೊನಾ ತಡೆಗಟ್ಟಬಹುದು ಅಂದ್ಕೋಬೇಡಿ; ಬೂಸ್ಟರ್​​ ಡೋಸ್​ ಸಹ ಬೇಕು ಅನ್ನುತ್ತಿದೆ ಅಧ್ಯಯನ: ಏನಿದರ ಲೆಕ್ಕಾಚಾರ?

Booster Dose: ಪ್ರತಿಯೊಬ್ಬರಿಗೂ ಕೊರೊನಾ ಸೋಂಕಿನ ವಿರುದ್ಧ ಲಸಿಕೆ ಮೂಲಕ ರಕ್ಷಣೆ ಒದಗಿಸಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಅದನ್ನು ಮಾಡುತ್ತಿದ್ದೇವೆ. ಈ ಮಧ್ಯೆ, ಲಸಿಕೆ ಪಡೆದ 6 ತಿಂಗಳ ತರುವಾಯ ಮತ್ತೆ ಬೂಸ್ಟರ್​ ಡೋಸ್ ಅನ್ನೂ ತೆಗೆದುಕೊಳ್ಳುವ ಅಗತ್ಯವಿದೆಯೇ ಎಂಬುದರ ಬಗ್ಗೆ ವ್ಯಾಕ್ಸಿನ್ ಪ್ರಯೋಗಗಳು ನಡೆಯುತ್ತಿವೆ ಎಂದೂ ಡಾ. ವಿ ಕೆ ಪಾಲ್ ಸ್ಪಷ್ಟಪಡಿಸಿದ್ದಾರೆ.

2 ಲಸಿಕೆ ಹಾಕಿಸಿಕೊಂಡ್ರೆ ಕೊರೊನಾ ತಡೆಗಟ್ಟಬಹುದು ಅಂದ್ಕೋಬೇಡಿ; ಬೂಸ್ಟರ್​​ ಡೋಸ್​ ಸಹ ಬೇಕು ಅನ್ನುತ್ತಿದೆ ಅಧ್ಯಯನ: ಏನಿದರ ಲೆಕ್ಕಾಚಾರ?
ಪ್ರಾತಿನಿಧಿಕ ಚಿತ್ರ
Follow us
ಸಾಧು ಶ್ರೀನಾಥ್​
|

Updated on: May 28, 2021 | 4:05 PM

ನವದೆಹಲಿ: ಒಂದು ಕಡೆ ಕೊರೊನಾ ಮಹಾಮಾರಿಯನ್ನು ತಡೆಗಟ್ಟಲು ಲಸಿಕೆ ಹಾಕಿಸಿಕೊಂಡರೆ ಸಾಕು ಎಂಬ ಜನಜನಿತ ನಂಬಿಕೆ ದೃಢವಾಗುತ್ತಿರುವಾಗಲೇ ಕೇಂದ್ರ ಸರ್ಕಾರದಿಂದ ಆಘಾತಕಾರಿ ಸುದ್ದಿಯೊಂದು ಬಂದಿದೆ. ಅಧ್ಯಕ್ಷ ಜೋ ಬೈಡನ್​ ಸೇರಿದಂತೆ ಅಮೆರಿಕದಲ್ಲಿ ಎಲ್ಲರೂ ಎರಡು ಬಾರಿ ಲಸಿಕೆ ಹಾಕಿಸಿಕೊಂಡು ನಮಗಿನ್ನು ಕೊರೊನಾ ಬರಾಕಿಲ್ಲ ಎಂದು ಮೂತಿಗೆ ಹಾಕಿಕೊಂಡಿದ್ದ ಮಾಸ್ಕ್​ ಅನ್ನು ಕಿತ್ತೆಸೆದು, ಎದುರಿಗೆ ಬಂದವರನ್ನೆಲ್ಲ ಅಪ್ಪಿಕೊಳ್ಳುತ್ತಿದ್ದಾರೆ. ನೋಡಿ ನಾವು ಕೊರೊನಾದಿಂದ ಮುಕ್ತ ಮುಕ್ತ ಎಂದು ಸಾರುತ್ತಿದ್ದಾರೆ. ಆದರೆ ಈ ಮಧ್ಯೆ, ಕೇಂದ್ರ ಸರ್ಕಾರ ನಿರ್ದೇಶಿತ ಅಧ್ಯಯನ ಪ್ರಕಾರ ಕೊರೊನಾ ಸೋಂಕಿನ ವಿರುದ್ಧ ಲಸಿಕೆ ಹಾಕಿಸಿಕೊಂಡರೆ ಅದೂ ಎರಡು ಬಾರಿ ಹಾಕಿಸಿಕೊಂಡರೂ ಕೊರೊನಾ ಬರುವುದಿಲ್ಲ ಎಂದು ಘಂಟಾಘೋಷವಾಗಿ ಹೇಳಲು ಸಾಧ್ಯವಿಲ್ಲ. ಹಾಗಾಗಿ ಎರಡು ಬಾರಿ ಲಸಿಕೆ ಹಾಕಿಸಿಕೊಳ್ಳುವುದರ ಜೊತೆಗೆ ಅದಕ್ಕೆ ಪೂರಕವಾಗಿ ಬೂಸ್ಟರ್​ ಲಸಿಕೆಯನ್ನೂ ಹಾಕಿಸಿಕೊಳ್ಳಬೇಕಾಗುತ್ತದೆ ಎಂದು ತಿಳಿದುಬಂದಿದೆ.

ಕೊರೊನಾ ಸೋಂಕಿನ ವಿರುದ್ಧ ಯಾವುದೇ ಲಸಿಕೆ ಶೇ. 100ರಷ್ಟು ಗ್ಯಾರಂಟಿ ಕೊಡುವುದಿಲ್ಲ. ಆ ತರಹದ ಲಸಿಕೆ ಇದುವರೆಗೂ ಬಂದಿಲ್ಲ ಎಂಬುದು ಕೇಂದ್ರದ ವಾದವಾಗಿದೆ. ಇದಕ್ಕೆ ಪೂರಕವಾಗಿ ಬೂಸ್ಟರ್​ ಡೋಸ್​ ಹಾಕಿಸಿಕೊಳ್ಳುವ ಅಗತ್ಯವಿದೆಯೇ ಎಂಬುದುರ ಬಗ್ಗೆ ಅಧ್ಯಯನ ನಡೆಯುತ್ತಿದೆ. ಬೂಸ್ಟರ್​ ಡೋಸ್​ ಹಾಕಿಸಿಕೊಳ್ಳುವ ಅಗತ್ಯವಿದೆ ಎಂದು ಒಂದು ವೇಳೆ ಅಧ್ಯಯನದಿಂದ ದೃಢಪಟ್ಟರೆ ಆ ಬಗ್ಗೆ ಜನರಿಗೆ ತಕ್ಷಣ ಮಾಹಿತಿ ನೀಡಿ, ಅದಕ್ಕೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವುದಾಗಿ ಎಂದು ನೀತಿ ಆಯೋಗದ ಸದಸ್ಯ ಡಾ. ವಿ ಕೆ ಪಾಲ್​ ಹೇಳಿದ್ದಾರೆ.

ಪ್ರತಿಯೊಬ್ಬರಿಗೂ ಕೊರೊನಾ ಸೋಂಕಿನ ವಿರುದ್ಧ ಲಸಿಕೆ ಮೂಲಕ ರಕ್ಷಣೆ ಒದಗಿಸಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಅದನ್ನು ಮಾಡುತ್ತಿದ್ದೇವೆ. ಈ ಮಧ್ಯೆ, ಲಸಿಕೆ ಪಡೆದ 6 ತಿಂಗಳ ತರುವಾಯ ಮತ್ತೆ ಬೂಸ್ಟರ್​ ಡೋಸ್ ಅನ್ನೂ ತೆಗೆದುಕೊಳ್ಳುವ ಅಗತ್ಯವಿದೆಯೇ ಎಂಬುದರ ಬಗ್ಗೆ ವ್ಯಾಕ್ಸಿನ್ ಪ್ರಯೋಗಗಳು ನಡೆಯುತ್ತಿವೆ ಎಂದೂ ಡಾ. ವಿ ಕೆ ಪಾಲ್ ಸ್ಪಷ್ಟಪಡಿಸಿದ್ದಾರೆ.

(Not just 2 corona vaccine enough booster dose is needed in experimental studies says niti aayog member vk paul)

ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?