AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಲಸಿಕೆ ಹಾಕಿಸಿಕೊಂಡ್ರೆ ಕೊರೊನಾ ತಡೆಗಟ್ಟಬಹುದು ಅಂದ್ಕೋಬೇಡಿ; ಬೂಸ್ಟರ್​​ ಡೋಸ್​ ಸಹ ಬೇಕು ಅನ್ನುತ್ತಿದೆ ಅಧ್ಯಯನ: ಏನಿದರ ಲೆಕ್ಕಾಚಾರ?

Booster Dose: ಪ್ರತಿಯೊಬ್ಬರಿಗೂ ಕೊರೊನಾ ಸೋಂಕಿನ ವಿರುದ್ಧ ಲಸಿಕೆ ಮೂಲಕ ರಕ್ಷಣೆ ಒದಗಿಸಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಅದನ್ನು ಮಾಡುತ್ತಿದ್ದೇವೆ. ಈ ಮಧ್ಯೆ, ಲಸಿಕೆ ಪಡೆದ 6 ತಿಂಗಳ ತರುವಾಯ ಮತ್ತೆ ಬೂಸ್ಟರ್​ ಡೋಸ್ ಅನ್ನೂ ತೆಗೆದುಕೊಳ್ಳುವ ಅಗತ್ಯವಿದೆಯೇ ಎಂಬುದರ ಬಗ್ಗೆ ವ್ಯಾಕ್ಸಿನ್ ಪ್ರಯೋಗಗಳು ನಡೆಯುತ್ತಿವೆ ಎಂದೂ ಡಾ. ವಿ ಕೆ ಪಾಲ್ ಸ್ಪಷ್ಟಪಡಿಸಿದ್ದಾರೆ.

2 ಲಸಿಕೆ ಹಾಕಿಸಿಕೊಂಡ್ರೆ ಕೊರೊನಾ ತಡೆಗಟ್ಟಬಹುದು ಅಂದ್ಕೋಬೇಡಿ; ಬೂಸ್ಟರ್​​ ಡೋಸ್​ ಸಹ ಬೇಕು ಅನ್ನುತ್ತಿದೆ ಅಧ್ಯಯನ: ಏನಿದರ ಲೆಕ್ಕಾಚಾರ?
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on: May 28, 2021 | 4:05 PM

Share

ನವದೆಹಲಿ: ಒಂದು ಕಡೆ ಕೊರೊನಾ ಮಹಾಮಾರಿಯನ್ನು ತಡೆಗಟ್ಟಲು ಲಸಿಕೆ ಹಾಕಿಸಿಕೊಂಡರೆ ಸಾಕು ಎಂಬ ಜನಜನಿತ ನಂಬಿಕೆ ದೃಢವಾಗುತ್ತಿರುವಾಗಲೇ ಕೇಂದ್ರ ಸರ್ಕಾರದಿಂದ ಆಘಾತಕಾರಿ ಸುದ್ದಿಯೊಂದು ಬಂದಿದೆ. ಅಧ್ಯಕ್ಷ ಜೋ ಬೈಡನ್​ ಸೇರಿದಂತೆ ಅಮೆರಿಕದಲ್ಲಿ ಎಲ್ಲರೂ ಎರಡು ಬಾರಿ ಲಸಿಕೆ ಹಾಕಿಸಿಕೊಂಡು ನಮಗಿನ್ನು ಕೊರೊನಾ ಬರಾಕಿಲ್ಲ ಎಂದು ಮೂತಿಗೆ ಹಾಕಿಕೊಂಡಿದ್ದ ಮಾಸ್ಕ್​ ಅನ್ನು ಕಿತ್ತೆಸೆದು, ಎದುರಿಗೆ ಬಂದವರನ್ನೆಲ್ಲ ಅಪ್ಪಿಕೊಳ್ಳುತ್ತಿದ್ದಾರೆ. ನೋಡಿ ನಾವು ಕೊರೊನಾದಿಂದ ಮುಕ್ತ ಮುಕ್ತ ಎಂದು ಸಾರುತ್ತಿದ್ದಾರೆ. ಆದರೆ ಈ ಮಧ್ಯೆ, ಕೇಂದ್ರ ಸರ್ಕಾರ ನಿರ್ದೇಶಿತ ಅಧ್ಯಯನ ಪ್ರಕಾರ ಕೊರೊನಾ ಸೋಂಕಿನ ವಿರುದ್ಧ ಲಸಿಕೆ ಹಾಕಿಸಿಕೊಂಡರೆ ಅದೂ ಎರಡು ಬಾರಿ ಹಾಕಿಸಿಕೊಂಡರೂ ಕೊರೊನಾ ಬರುವುದಿಲ್ಲ ಎಂದು ಘಂಟಾಘೋಷವಾಗಿ ಹೇಳಲು ಸಾಧ್ಯವಿಲ್ಲ. ಹಾಗಾಗಿ ಎರಡು ಬಾರಿ ಲಸಿಕೆ ಹಾಕಿಸಿಕೊಳ್ಳುವುದರ ಜೊತೆಗೆ ಅದಕ್ಕೆ ಪೂರಕವಾಗಿ ಬೂಸ್ಟರ್​ ಲಸಿಕೆಯನ್ನೂ ಹಾಕಿಸಿಕೊಳ್ಳಬೇಕಾಗುತ್ತದೆ ಎಂದು ತಿಳಿದುಬಂದಿದೆ.

ಕೊರೊನಾ ಸೋಂಕಿನ ವಿರುದ್ಧ ಯಾವುದೇ ಲಸಿಕೆ ಶೇ. 100ರಷ್ಟು ಗ್ಯಾರಂಟಿ ಕೊಡುವುದಿಲ್ಲ. ಆ ತರಹದ ಲಸಿಕೆ ಇದುವರೆಗೂ ಬಂದಿಲ್ಲ ಎಂಬುದು ಕೇಂದ್ರದ ವಾದವಾಗಿದೆ. ಇದಕ್ಕೆ ಪೂರಕವಾಗಿ ಬೂಸ್ಟರ್​ ಡೋಸ್​ ಹಾಕಿಸಿಕೊಳ್ಳುವ ಅಗತ್ಯವಿದೆಯೇ ಎಂಬುದುರ ಬಗ್ಗೆ ಅಧ್ಯಯನ ನಡೆಯುತ್ತಿದೆ. ಬೂಸ್ಟರ್​ ಡೋಸ್​ ಹಾಕಿಸಿಕೊಳ್ಳುವ ಅಗತ್ಯವಿದೆ ಎಂದು ಒಂದು ವೇಳೆ ಅಧ್ಯಯನದಿಂದ ದೃಢಪಟ್ಟರೆ ಆ ಬಗ್ಗೆ ಜನರಿಗೆ ತಕ್ಷಣ ಮಾಹಿತಿ ನೀಡಿ, ಅದಕ್ಕೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವುದಾಗಿ ಎಂದು ನೀತಿ ಆಯೋಗದ ಸದಸ್ಯ ಡಾ. ವಿ ಕೆ ಪಾಲ್​ ಹೇಳಿದ್ದಾರೆ.

ಪ್ರತಿಯೊಬ್ಬರಿಗೂ ಕೊರೊನಾ ಸೋಂಕಿನ ವಿರುದ್ಧ ಲಸಿಕೆ ಮೂಲಕ ರಕ್ಷಣೆ ಒದಗಿಸಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಅದನ್ನು ಮಾಡುತ್ತಿದ್ದೇವೆ. ಈ ಮಧ್ಯೆ, ಲಸಿಕೆ ಪಡೆದ 6 ತಿಂಗಳ ತರುವಾಯ ಮತ್ತೆ ಬೂಸ್ಟರ್​ ಡೋಸ್ ಅನ್ನೂ ತೆಗೆದುಕೊಳ್ಳುವ ಅಗತ್ಯವಿದೆಯೇ ಎಂಬುದರ ಬಗ್ಗೆ ವ್ಯಾಕ್ಸಿನ್ ಪ್ರಯೋಗಗಳು ನಡೆಯುತ್ತಿವೆ ಎಂದೂ ಡಾ. ವಿ ಕೆ ಪಾಲ್ ಸ್ಪಷ್ಟಪಡಿಸಿದ್ದಾರೆ.

(Not just 2 corona vaccine enough booster dose is needed in experimental studies says niti aayog member vk paul)

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್