2 ಲಸಿಕೆ ಹಾಕಿಸಿಕೊಂಡ್ರೆ ಕೊರೊನಾ ತಡೆಗಟ್ಟಬಹುದು ಅಂದ್ಕೋಬೇಡಿ; ಬೂಸ್ಟರ್​​ ಡೋಸ್​ ಸಹ ಬೇಕು ಅನ್ನುತ್ತಿದೆ ಅಧ್ಯಯನ: ಏನಿದರ ಲೆಕ್ಕಾಚಾರ?

Booster Dose: ಪ್ರತಿಯೊಬ್ಬರಿಗೂ ಕೊರೊನಾ ಸೋಂಕಿನ ವಿರುದ್ಧ ಲಸಿಕೆ ಮೂಲಕ ರಕ್ಷಣೆ ಒದಗಿಸಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಅದನ್ನು ಮಾಡುತ್ತಿದ್ದೇವೆ. ಈ ಮಧ್ಯೆ, ಲಸಿಕೆ ಪಡೆದ 6 ತಿಂಗಳ ತರುವಾಯ ಮತ್ತೆ ಬೂಸ್ಟರ್​ ಡೋಸ್ ಅನ್ನೂ ತೆಗೆದುಕೊಳ್ಳುವ ಅಗತ್ಯವಿದೆಯೇ ಎಂಬುದರ ಬಗ್ಗೆ ವ್ಯಾಕ್ಸಿನ್ ಪ್ರಯೋಗಗಳು ನಡೆಯುತ್ತಿವೆ ಎಂದೂ ಡಾ. ವಿ ಕೆ ಪಾಲ್ ಸ್ಪಷ್ಟಪಡಿಸಿದ್ದಾರೆ.

2 ಲಸಿಕೆ ಹಾಕಿಸಿಕೊಂಡ್ರೆ ಕೊರೊನಾ ತಡೆಗಟ್ಟಬಹುದು ಅಂದ್ಕೋಬೇಡಿ; ಬೂಸ್ಟರ್​​ ಡೋಸ್​ ಸಹ ಬೇಕು ಅನ್ನುತ್ತಿದೆ ಅಧ್ಯಯನ: ಏನಿದರ ಲೆಕ್ಕಾಚಾರ?
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​

Updated on: May 28, 2021 | 4:05 PM

ನವದೆಹಲಿ: ಒಂದು ಕಡೆ ಕೊರೊನಾ ಮಹಾಮಾರಿಯನ್ನು ತಡೆಗಟ್ಟಲು ಲಸಿಕೆ ಹಾಕಿಸಿಕೊಂಡರೆ ಸಾಕು ಎಂಬ ಜನಜನಿತ ನಂಬಿಕೆ ದೃಢವಾಗುತ್ತಿರುವಾಗಲೇ ಕೇಂದ್ರ ಸರ್ಕಾರದಿಂದ ಆಘಾತಕಾರಿ ಸುದ್ದಿಯೊಂದು ಬಂದಿದೆ. ಅಧ್ಯಕ್ಷ ಜೋ ಬೈಡನ್​ ಸೇರಿದಂತೆ ಅಮೆರಿಕದಲ್ಲಿ ಎಲ್ಲರೂ ಎರಡು ಬಾರಿ ಲಸಿಕೆ ಹಾಕಿಸಿಕೊಂಡು ನಮಗಿನ್ನು ಕೊರೊನಾ ಬರಾಕಿಲ್ಲ ಎಂದು ಮೂತಿಗೆ ಹಾಕಿಕೊಂಡಿದ್ದ ಮಾಸ್ಕ್​ ಅನ್ನು ಕಿತ್ತೆಸೆದು, ಎದುರಿಗೆ ಬಂದವರನ್ನೆಲ್ಲ ಅಪ್ಪಿಕೊಳ್ಳುತ್ತಿದ್ದಾರೆ. ನೋಡಿ ನಾವು ಕೊರೊನಾದಿಂದ ಮುಕ್ತ ಮುಕ್ತ ಎಂದು ಸಾರುತ್ತಿದ್ದಾರೆ. ಆದರೆ ಈ ಮಧ್ಯೆ, ಕೇಂದ್ರ ಸರ್ಕಾರ ನಿರ್ದೇಶಿತ ಅಧ್ಯಯನ ಪ್ರಕಾರ ಕೊರೊನಾ ಸೋಂಕಿನ ವಿರುದ್ಧ ಲಸಿಕೆ ಹಾಕಿಸಿಕೊಂಡರೆ ಅದೂ ಎರಡು ಬಾರಿ ಹಾಕಿಸಿಕೊಂಡರೂ ಕೊರೊನಾ ಬರುವುದಿಲ್ಲ ಎಂದು ಘಂಟಾಘೋಷವಾಗಿ ಹೇಳಲು ಸಾಧ್ಯವಿಲ್ಲ. ಹಾಗಾಗಿ ಎರಡು ಬಾರಿ ಲಸಿಕೆ ಹಾಕಿಸಿಕೊಳ್ಳುವುದರ ಜೊತೆಗೆ ಅದಕ್ಕೆ ಪೂರಕವಾಗಿ ಬೂಸ್ಟರ್​ ಲಸಿಕೆಯನ್ನೂ ಹಾಕಿಸಿಕೊಳ್ಳಬೇಕಾಗುತ್ತದೆ ಎಂದು ತಿಳಿದುಬಂದಿದೆ.

ಕೊರೊನಾ ಸೋಂಕಿನ ವಿರುದ್ಧ ಯಾವುದೇ ಲಸಿಕೆ ಶೇ. 100ರಷ್ಟು ಗ್ಯಾರಂಟಿ ಕೊಡುವುದಿಲ್ಲ. ಆ ತರಹದ ಲಸಿಕೆ ಇದುವರೆಗೂ ಬಂದಿಲ್ಲ ಎಂಬುದು ಕೇಂದ್ರದ ವಾದವಾಗಿದೆ. ಇದಕ್ಕೆ ಪೂರಕವಾಗಿ ಬೂಸ್ಟರ್​ ಡೋಸ್​ ಹಾಕಿಸಿಕೊಳ್ಳುವ ಅಗತ್ಯವಿದೆಯೇ ಎಂಬುದುರ ಬಗ್ಗೆ ಅಧ್ಯಯನ ನಡೆಯುತ್ತಿದೆ. ಬೂಸ್ಟರ್​ ಡೋಸ್​ ಹಾಕಿಸಿಕೊಳ್ಳುವ ಅಗತ್ಯವಿದೆ ಎಂದು ಒಂದು ವೇಳೆ ಅಧ್ಯಯನದಿಂದ ದೃಢಪಟ್ಟರೆ ಆ ಬಗ್ಗೆ ಜನರಿಗೆ ತಕ್ಷಣ ಮಾಹಿತಿ ನೀಡಿ, ಅದಕ್ಕೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವುದಾಗಿ ಎಂದು ನೀತಿ ಆಯೋಗದ ಸದಸ್ಯ ಡಾ. ವಿ ಕೆ ಪಾಲ್​ ಹೇಳಿದ್ದಾರೆ.

ಪ್ರತಿಯೊಬ್ಬರಿಗೂ ಕೊರೊನಾ ಸೋಂಕಿನ ವಿರುದ್ಧ ಲಸಿಕೆ ಮೂಲಕ ರಕ್ಷಣೆ ಒದಗಿಸಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಅದನ್ನು ಮಾಡುತ್ತಿದ್ದೇವೆ. ಈ ಮಧ್ಯೆ, ಲಸಿಕೆ ಪಡೆದ 6 ತಿಂಗಳ ತರುವಾಯ ಮತ್ತೆ ಬೂಸ್ಟರ್​ ಡೋಸ್ ಅನ್ನೂ ತೆಗೆದುಕೊಳ್ಳುವ ಅಗತ್ಯವಿದೆಯೇ ಎಂಬುದರ ಬಗ್ಗೆ ವ್ಯಾಕ್ಸಿನ್ ಪ್ರಯೋಗಗಳು ನಡೆಯುತ್ತಿವೆ ಎಂದೂ ಡಾ. ವಿ ಕೆ ಪಾಲ್ ಸ್ಪಷ್ಟಪಡಿಸಿದ್ದಾರೆ.

(Not just 2 corona vaccine enough booster dose is needed in experimental studies says niti aayog member vk paul)

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us