AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮುದ್ರದಾಳದ ಬೆರಗು, ಸದ್ದಿಲ್ಲದೇ ಇಸ್ರೋ ತಯಾರಿ ನಡೆಸುತ್ತಿರುವ ಸಮುದ್ರಯಾನದ ಬಗ್ಗೆ ನಿಮಗೆಷ್ಟು ಗೊತ್ತು?

Samudrayaan: ಭಾರತ ಕೇವಲ ಬಾಹ್ಯಾಕಾಶ ಕ್ಷೇತ್ರದಲ್ಲಿ ಮಾತ್ರ ಪ್ರಗತಿ ಸಾಧಿಸುತ್ತಿಲ್ಲ. ಇಸ್ರೋದ ಚಂದ್ರಯಾನ-3 ಮತ್ತು ಆದಿತ್ಯ L1 ಯಶಸ್ಸಿನ ನಂತರ ಇತ್ತೀಚೆಗೆ ಸಮುದ್ರಯಾನ ಮತ್ತೆ ಮತ್ತೆ ಚರ್ಚೆಯಾಗುತ್ತಿದೆ.

ಸಮುದ್ರದಾಳದ ಬೆರಗು, ಸದ್ದಿಲ್ಲದೇ ಇಸ್ರೋ ತಯಾರಿ ನಡೆಸುತ್ತಿರುವ ಸಮುದ್ರಯಾನದ ಬಗ್ಗೆ ನಿಮಗೆಷ್ಟು ಗೊತ್ತು?
ಸಮುದ್ರಯಾನ
ನಯನಾ ರಾಜೀವ್
|

Updated on: Oct 09, 2024 | 11:58 AM

Share

ಸಮುದ್ರದಾಳದ ಕೌತುಕ, ಬೆರಗು ಇಂದು ನಿನ್ನೆಯದಲ್ಲ, ಪ್ರಪಂಚದ ಸಾಕಷ್ಟು ದೇಶಗಳು ಸಮುದ್ರದಾಳದಲ್ಲಿ ಶೋಧ ನಡೆಸುತ್ತಲೇ ಇವೆ. ಅಕ್ಟೋಬರ್​ ಕೊನೆಯ ವಾರದಲ್ಲಿ ಯೋಜನೆ ಆರಂಭಗೊಳ್ಳಲಿದೆ.  ಮಾನವಸಹಿತ ಸಬ್‌ಮರ್ಸಿಬಲ್ ಮಿಷನ್ ಸಮುದ್ರಯಾನ ಯೋಜನೆಯನ್ನು ಭಾರತ ಸರ್ಕಾರ ಅನುಷ್ಠಾನಕ್ಕೆ ತರಲು ಹೊರಟಿದೆ. ಈ ಯೋಜನೆ ಅಡಿಯಲ್ಲಿ ಮತ್ಸ್ಯ 6000′ ಜಲಾಂತರ್ಗಾಮಿ ನೌಕೆಯನ್ನು ಅಭಿವೃದ್ಧಿಪಡಿಸಲಾಗಿದೆ.

ಅಕ್ಟೋಬರ್ 2021 ರಲ್ಲಿ, ಸುಧಾರಿತ ಸಬ್‌ಮರ್ಸಿಬಲ್ ಸಾಮರ್ಥ್ಯಗಳೊಂದಿಗೆ ಅಮೆರಿಕ, ರಷ್ಯಾ, ಜಪಾನ್, ಫ್ರಾನ್ಸ್ ಮತ್ತು ಚೀನಾ ಸೇರಿದಂತೆ ದೇಶಗಳ ಆಯ್ದ ಕ್ಲಬ್‌ಗೆ ಭಾರತ ಸೇರಿಕೊಂಡಿತು. ಈ ಮೂಲಕ ವಿಶಿಷ್ಟವಾದ ಸಮುದ್ರಯಾನ ಮಿಷನ್ ಉಡಾವಣೆಯ ಭಾಗವಾಗಿತು.

ಇಸ್ರೋದ ಚಂದ್ರಯಾನ ಮತ್ತು ಆದಿತ್ಯ ಎಲ್ 1 ನಂತರ ಇದು ಭಾರತದ ಅತಿದೊಡ್ಡ ಮಿಷನ್ ಎಂದು ಹೇಳಲಾಗುತ್ತಿದೆ. ಸಮುದ್ರಯಾನ ಅಭಿಯಾನ ಅಥವಾ ಮತ್ಸ್ಯ 6000 ಭಾರತದ ಮೊದಲ ಮಾನವಸಹಿತ ಜಲಾಂತರ್ಗಾಮಿ ಯಾತ್ರೆಯಾಗಿದ್ದು, ಇದರ ಮೂಲಕ ವಿಜ್ಞಾನಿಗಳು 6000 ಮೀಟರ್ ಆಳ ಸಮುದ್ರಕ್ಕೆ ಹೋಗಿ ಅಲ್ಲಿನ ಪರಿಸ್ಥಿತಿಗಳು ಮತ್ತು ಪ್ರಕ್ರಿಯೆಗಳನ್ನು ವಿಶೇಷ ಉಪಕರಣಗಳು ಮತ್ತು ಸಂವೇದಕಗಳ ಮೂಲಕ ಅಧ್ಯಯನ ಮಾಡುತ್ತಾರೆ.

ಸಮುದ್ರಯಾನವು ಆಳ ಸಮುದ್ರದ ಖನಿಜಗಳಾದ ಪಾಲಿಮೆಟಾಲಿಕ್, ಕೋಬಾಲ್ಟ್ , ಮ್ಯಾಂಗನೀಸ್ ಅನ್ವೇಷಿಸುವ ಗುರಿ ಹೊಂದಿದೆ. ಭಾರತದ ಮೂವರು ಮತ್ಸ್ಯ 6000 ಎಂಬ ನೌಕೆಯಲ್ಲಿ ಆಳಸಮುದ್ರಕ್ಕೆ ಹೋಗಿ, ಶೋಧ ನಡೆಸಲಿದ್ದಾರೆ. ಚೆನ್ನೈ ಸನಿಹದಲ್ಲಿರುವ ಸಾಗರದ ನೀರಿನಲ್ಲಿ ಭಾರತ ಹೊಸ ಶೌರ್ಯಕ್ಕೆ ಸಜ್ಜಾಗಿದೆ.

ನಿಕ್ಕೆಲ್‌, ಕೊಬಾಲ್ಟ್, ಮ್ಯಾಂಗನೀಸ್‌, ಹೈಡ್ರೋಥರ್ಮಲ್‌ ಸಲ್ಫೈಟ್ಸ್​ ಮತ್ತು ಗ್ಯಾಸ್‌ ಹೈಡ್ರೇಟ್ಸ್‌. ಜತೆಗೆ, ಸಮುದ್ರದಾಳದ ಜೀವ ವೈವಿಧ್ಯತೆ ಕುರಿತಂತೆ ಶೋಧ ನಡೆಯಲಿದೆ. 6,000 ಮೀ. ಕೆಳಗೆ ನೌಕೆ ಮೇಲೆ ಭಾರೀ ಒತ್ತಡ ಬೀಳುತ್ತದೆ. ಅಂದರೆ, ಆಚೆಗಿಂತ 600 ಪಟ್ಟು ಹೆಚ್ಚು ಒತ್ತಡವಿರುತ್ತದೆ.

ನೌಕೆಯ ತೂಕ -25 ಟನ್‌ ಉದ್ದ – 9 ಮೀ. ಎತ್ತರ – 4.5 ಮೀ. ಅಗಲ – 4 ಮೀ. ಸುತ್ತಳತೆ – 2.1ಮೀ. ನೌಕೆಯೊಳಗೆ ಇರಬಹುದಾದ ಸಮಯ- 12 ಗಂಟೆ ತುರ್ತು ಸ್ಥಿತಿಯಲ್ಲಿ ಇರಬಹುದಾದ ಸಮಯ – 96 ಗಂಟೆ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು