ಸಮುದ್ರದಾಳದ ಬೆರಗು, ಸದ್ದಿಲ್ಲದೇ ಇಸ್ರೋ ತಯಾರಿ ನಡೆಸುತ್ತಿರುವ ಸಮುದ್ರಯಾನದ ಬಗ್ಗೆ ನಿಮಗೆಷ್ಟು ಗೊತ್ತು?

Samudrayaan: ಭಾರತ ಕೇವಲ ಬಾಹ್ಯಾಕಾಶ ಕ್ಷೇತ್ರದಲ್ಲಿ ಮಾತ್ರ ಪ್ರಗತಿ ಸಾಧಿಸುತ್ತಿಲ್ಲ. ಇಸ್ರೋದ ಚಂದ್ರಯಾನ-3 ಮತ್ತು ಆದಿತ್ಯ L1 ಯಶಸ್ಸಿನ ನಂತರ ಇತ್ತೀಚೆಗೆ ಸಮುದ್ರಯಾನ ಮತ್ತೆ ಮತ್ತೆ ಚರ್ಚೆಯಾಗುತ್ತಿದೆ.

ಸಮುದ್ರದಾಳದ ಬೆರಗು, ಸದ್ದಿಲ್ಲದೇ ಇಸ್ರೋ ತಯಾರಿ ನಡೆಸುತ್ತಿರುವ ಸಮುದ್ರಯಾನದ ಬಗ್ಗೆ ನಿಮಗೆಷ್ಟು ಗೊತ್ತು?
ಸಮುದ್ರಯಾನ
Follow us
|

Updated on: Oct 09, 2024 | 11:58 AM

ಸಮುದ್ರದಾಳದ ಕೌತುಕ, ಬೆರಗು ಇಂದು ನಿನ್ನೆಯದಲ್ಲ, ಪ್ರಪಂಚದ ಸಾಕಷ್ಟು ದೇಶಗಳು ಸಮುದ್ರದಾಳದಲ್ಲಿ ಶೋಧ ನಡೆಸುತ್ತಲೇ ಇವೆ. ಅಕ್ಟೋಬರ್​ ಕೊನೆಯ ವಾರದಲ್ಲಿ ಯೋಜನೆ ಆರಂಭಗೊಳ್ಳಲಿದೆ.  ಮಾನವಸಹಿತ ಸಬ್‌ಮರ್ಸಿಬಲ್ ಮಿಷನ್ ಸಮುದ್ರಯಾನ ಯೋಜನೆಯನ್ನು ಭಾರತ ಸರ್ಕಾರ ಅನುಷ್ಠಾನಕ್ಕೆ ತರಲು ಹೊರಟಿದೆ. ಈ ಯೋಜನೆ ಅಡಿಯಲ್ಲಿ ಮತ್ಸ್ಯ 6000′ ಜಲಾಂತರ್ಗಾಮಿ ನೌಕೆಯನ್ನು ಅಭಿವೃದ್ಧಿಪಡಿಸಲಾಗಿದೆ.

ಅಕ್ಟೋಬರ್ 2021 ರಲ್ಲಿ, ಸುಧಾರಿತ ಸಬ್‌ಮರ್ಸಿಬಲ್ ಸಾಮರ್ಥ್ಯಗಳೊಂದಿಗೆ ಅಮೆರಿಕ, ರಷ್ಯಾ, ಜಪಾನ್, ಫ್ರಾನ್ಸ್ ಮತ್ತು ಚೀನಾ ಸೇರಿದಂತೆ ದೇಶಗಳ ಆಯ್ದ ಕ್ಲಬ್‌ಗೆ ಭಾರತ ಸೇರಿಕೊಂಡಿತು. ಈ ಮೂಲಕ ವಿಶಿಷ್ಟವಾದ ಸಮುದ್ರಯಾನ ಮಿಷನ್ ಉಡಾವಣೆಯ ಭಾಗವಾಗಿತು.

ಇಸ್ರೋದ ಚಂದ್ರಯಾನ ಮತ್ತು ಆದಿತ್ಯ ಎಲ್ 1 ನಂತರ ಇದು ಭಾರತದ ಅತಿದೊಡ್ಡ ಮಿಷನ್ ಎಂದು ಹೇಳಲಾಗುತ್ತಿದೆ. ಸಮುದ್ರಯಾನ ಅಭಿಯಾನ ಅಥವಾ ಮತ್ಸ್ಯ 6000 ಭಾರತದ ಮೊದಲ ಮಾನವಸಹಿತ ಜಲಾಂತರ್ಗಾಮಿ ಯಾತ್ರೆಯಾಗಿದ್ದು, ಇದರ ಮೂಲಕ ವಿಜ್ಞಾನಿಗಳು 6000 ಮೀಟರ್ ಆಳ ಸಮುದ್ರಕ್ಕೆ ಹೋಗಿ ಅಲ್ಲಿನ ಪರಿಸ್ಥಿತಿಗಳು ಮತ್ತು ಪ್ರಕ್ರಿಯೆಗಳನ್ನು ವಿಶೇಷ ಉಪಕರಣಗಳು ಮತ್ತು ಸಂವೇದಕಗಳ ಮೂಲಕ ಅಧ್ಯಯನ ಮಾಡುತ್ತಾರೆ.

ಸಮುದ್ರಯಾನವು ಆಳ ಸಮುದ್ರದ ಖನಿಜಗಳಾದ ಪಾಲಿಮೆಟಾಲಿಕ್, ಕೋಬಾಲ್ಟ್ , ಮ್ಯಾಂಗನೀಸ್ ಅನ್ವೇಷಿಸುವ ಗುರಿ ಹೊಂದಿದೆ. ಭಾರತದ ಮೂವರು ಮತ್ಸ್ಯ 6000 ಎಂಬ ನೌಕೆಯಲ್ಲಿ ಆಳಸಮುದ್ರಕ್ಕೆ ಹೋಗಿ, ಶೋಧ ನಡೆಸಲಿದ್ದಾರೆ. ಚೆನ್ನೈ ಸನಿಹದಲ್ಲಿರುವ ಸಾಗರದ ನೀರಿನಲ್ಲಿ ಭಾರತ ಹೊಸ ಶೌರ್ಯಕ್ಕೆ ಸಜ್ಜಾಗಿದೆ.

ನಿಕ್ಕೆಲ್‌, ಕೊಬಾಲ್ಟ್, ಮ್ಯಾಂಗನೀಸ್‌, ಹೈಡ್ರೋಥರ್ಮಲ್‌ ಸಲ್ಫೈಟ್ಸ್​ ಮತ್ತು ಗ್ಯಾಸ್‌ ಹೈಡ್ರೇಟ್ಸ್‌. ಜತೆಗೆ, ಸಮುದ್ರದಾಳದ ಜೀವ ವೈವಿಧ್ಯತೆ ಕುರಿತಂತೆ ಶೋಧ ನಡೆಯಲಿದೆ. 6,000 ಮೀ. ಕೆಳಗೆ ನೌಕೆ ಮೇಲೆ ಭಾರೀ ಒತ್ತಡ ಬೀಳುತ್ತದೆ. ಅಂದರೆ, ಆಚೆಗಿಂತ 600 ಪಟ್ಟು ಹೆಚ್ಚು ಒತ್ತಡವಿರುತ್ತದೆ.

ನೌಕೆಯ ತೂಕ -25 ಟನ್‌ ಉದ್ದ – 9 ಮೀ. ಎತ್ತರ – 4.5 ಮೀ. ಅಗಲ – 4 ಮೀ. ಸುತ್ತಳತೆ – 2.1ಮೀ. ನೌಕೆಯೊಳಗೆ ಇರಬಹುದಾದ ಸಮಯ- 12 ಗಂಟೆ ತುರ್ತು ಸ್ಥಿತಿಯಲ್ಲಿ ಇರಬಹುದಾದ ಸಮಯ – 96 ಗಂಟೆ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಎಂ ಹುದ್ದೆ ರೇಸಲ್ಲಿ ಸತೀಶ್ ಜಾರಕಿಹೊಳಿ ಇದ್ದರೆ ಶಿವಕುಮಾರ್ ಎಲ್ಹೋದರು?
ಸಿಎಂ ಹುದ್ದೆ ರೇಸಲ್ಲಿ ಸತೀಶ್ ಜಾರಕಿಹೊಳಿ ಇದ್ದರೆ ಶಿವಕುಮಾರ್ ಎಲ್ಹೋದರು?
ಸಿಎಂ ಹುದ್ದೆಗೆ ಸತೀಶ್ ಹೆಸರು ಪ್ರಸ್ತಾಪ ಯಾಕೆ? ಅವರನ್ನೇ ಕೇಳಿ: ಪರಮೇಶ್ವರ್
ಸಿಎಂ ಹುದ್ದೆಗೆ ಸತೀಶ್ ಹೆಸರು ಪ್ರಸ್ತಾಪ ಯಾಕೆ? ಅವರನ್ನೇ ಕೇಳಿ: ಪರಮೇಶ್ವರ್
ಮಹದೇವಪ್ಪ ನಿವಾಸದಲ್ಲಿನ ರಹಸ್ಯ ಸಭೆಯ ಮಾಹಿತಿ ಬಿಚ್ಚಿಟ್ಟ ಜಿ ಪರಮೇಶ್ವರ
ಮಹದೇವಪ್ಪ ನಿವಾಸದಲ್ಲಿನ ರಹಸ್ಯ ಸಭೆಯ ಮಾಹಿತಿ ಬಿಚ್ಚಿಟ್ಟ ಜಿ ಪರಮೇಶ್ವರ
‘ಯಾವ ಸೀಮೆಯ ಕ್ಯಾಪ್ಟನ್ ನೀವು?’; ಹಂಸಾ ವಿರುದ್ಧ ಸಿಡಿದೆದ್ದ ಚೈತ್ರಾ
‘ಯಾವ ಸೀಮೆಯ ಕ್ಯಾಪ್ಟನ್ ನೀವು?’; ಹಂಸಾ ವಿರುದ್ಧ ಸಿಡಿದೆದ್ದ ಚೈತ್ರಾ
ನವರಾತ್ರಿಯ 7ನೇ ದಿನ ಕಾಲರಾತ್ರಿ ದೇವಿ ಆರಾಧನೆಯ ಮಹತ್ವ ತಿಳಿಯಿರಿ
ನವರಾತ್ರಿಯ 7ನೇ ದಿನ ಕಾಲರಾತ್ರಿ ದೇವಿ ಆರಾಧನೆಯ ಮಹತ್ವ ತಿಳಿಯಿರಿ
ನವರಾತ್ರಿ 7ನೇ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ನವರಾತ್ರಿ 7ನೇ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್