AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Munawar Faruqui ಮುನಾವರ್​ ಫಾರೂಖಿ ವಿರುದ್ಧ ಕೇಸ್​ ದಾಖಲಾಗಿದ್ದು ಕೇವಲ 1 ಕಾರಣಕ್ಕಲ್ಲ !

ಇಂದೋರ್​ನ 56 ಡುಕಾನ್​​ ಎಂಬಲ್ಲಿನ ಕೆಫೆಯೊಂದರಲ್ಲಿ ಅಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮುನಾವರ್​ ಹಿಂದು ದೇವತೆಗಳು ಮತ್ತು ಗೃಹ ಸಚಿವ ಅಮಿತ್​ ಶಾಗೆ ಅವಮಾನ ಮಾಡಿದ್ದಾರೆ ಎನ್ನಲಾಗಿತ್ತು.

Munawar Faruqui ಮುನಾವರ್​ ಫಾರೂಖಿ ವಿರುದ್ಧ ಕೇಸ್​ ದಾಖಲಾಗಿದ್ದು ಕೇವಲ 1 ಕಾರಣಕ್ಕಲ್ಲ !
ಕಾಮಿಡಿಯನ್​ ಮುನಾವರ್ ಫಾರೂಖಿ
Lakshmi Hegde
| Edited By: |

Updated on: Feb 06, 2021 | 1:26 PM

Share

ಇಂದೋರ್​: ಮಧ್ಯಪ್ರದೇಶದ ಇಂದೋರ್​​ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಿಂದೂ ದೇವರು- ದೇವತೆಗಳಿಗೆ ಅವಮಾನ ಮಾಡಿದ ಆರೋಪದಡಿ ಜ.1ರಂದು ಬಂಧಿತನಾಗಿದ್ದ ಕಾಮಿಡಿಯನ್​ ಮುನಾವರ್​ ಫಾರೂಖಿಗೆ ನಿನ್ನೆ ಸುಪ್ರೀಂಕೋರ್ಟ್​ ಮಧ್ಯಂತರ ಜಾಮೀನು ನೀಡಿದೆ. ಬಂಧನಕ್ಕೊಳಗಾಗಿ ಸುಮಾರು 1 ತಿಂಗಳ ಬಳಿಕ ಫಾರೂಖಿ ಬಿಡುಗಡೆಯಾಗಿದ್ದಾರೆ.

ಇಂದೋರ್​ನ 56 ಡುಕಾನ್​​ ಎಂಬಲ್ಲಿನ ಕೆಫೆಯೊಂದರಲ್ಲಿ ಅಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮುನಾವರ್​ ಹಿಂದು ದೇವತೆಗಳು ಮತ್ತು ಗೃಹ ಸಚಿವ ಅಮಿತ್​ ಶಾಗೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ಶಾಸಕಿ ಮಾಲಿನಿ ಗೌರ್​ ಪುತ್ರ, ಹಿಂದ್​ ರಕ್ಷಕ್​ ಸಂಘಟನೆಯ ಸಮಾವೇಶಕನೂ ಆಗಿರುವ ಏಕಲವ್ಯ ಗೌರ್​ ದೂರು ದಾಖಲಿಸಿದ್ದರು. ಅವರ ದೂರಿನ ಅನ್ವಯ ಮುನಾವರ್​ ಫಾರೂಖಿ ಸೇರಿ ಒಟ್ಟು ಆರು ಮಂದಿಯ ಬಂಧನವಾಗಿತ್ತು.

ಅನುಮತಿಯನ್ನೂ ಪಡೆದಿರಲಿಲ್ಲ ! ಹೊಸವರ್ಷಾಚರಣೆಯಂದು ಕೆಫೆಯಲ್ಲಿ ಕಾರ್ಯಕ್ರಮ ನಡೆಸಲು ಮೊದಲನೇದಾಗಿ ಮುನಾವರ್​ ಫಾರೂಖಿ ಮತ್ತು ಸಹಚರರು ಅನುಮತಿಯನ್ನೇ ಪಡೆದಿರಲಿಲ್ಲ. ಎರಡನೇದಾಗಿ ಕೊವಿಡ್​ ನಿಯಂತ್ರಣಾ ನಿಯಮಗಳನ್ನು ಸಂಫೂರ್ಣವಾಗಿ ಉಲ್ಲಂಘನೆ ಮಾಡಿದ್ದರು. ಅದಾದ ಬಳಿಕ ಕಾರ್ಯಕ್ರಮದಲ್ಲಿ ಹಿಂದು ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದರು. ಅಮಿತ್​ ಶಾರನ್ನೂ ಅವಮಾನಿಸಿದ್ದರು. ಹೀಗಾಗಿ ಐಪಿಸಿ ಸೆಕ್ಷನ್​ 188, 269, 34, ಮತ್ತು 295Aದಡಿ ಪ್ರಕರಣ ದಾಖಲಾಗಿತ್ತು. ಇದೇ ಕಾರಣಕ್ಕೆ ಬಂಧಿಸಲ್ಪಟ್ಟಿದ್ದರು.

ಆದರೆ ಫಾರೂಖಿ ಪರ ವಕೀಲ, ಅಂಶುಮಾನ್​ ಶ್ರೀವಾಸ್ತವಾ, ಈ ಎಲ್ಲ ಆರೋಪಗಳನ್ನು ಅಲ್ಲಗಳೆದಿದ್ದಾರೆ. ಅವರ ವಿರುದ್ಧ ಮಾಡಲಾದ ಆರೋಪದಲ್ಲಿ ಸ್ಪಷ್ಟತೆಯೇ ಇಲ್ಲ. ರಾಜಕೀಯ ಕಾರಣಕ್ಕಾಗಿ ಅವರನ್ನು ಬಂಧಿಸಲಾಗಿದೆ. ಅಂದಿನ ಕಾರ್ಯಕ್ರಮದಲ್ಲಿ ಫಾರೂಖಿಯಾಗಲೀ, ಉಳಿದ ನಟರಾಗಲೀ, ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಮಾತುಗಳನ್ನಾಡಿಲ್ಲ. ಯಾರನ್ನೂ ಅವಮಾನಿಸಿಲ್ಲ ಎಂದು ಹೇಳಿದ್ದಾರೆ.

ಈ ಮೊದಲು ಪ್ರಕರಣದ ವಿಚಾರಣೆ ನಡೆಸಿದ್ದ ಮಧ್ಯಪ್ರದೇಶ ಹೈಕೋರ್ಟ್​ ಜಾಮೀನು ನೀಡಲು ನಿರಾಕರಿಸಿತ್ತು. ಒಬ್ಬ ವ್ಯಕ್ತಿ ತನಗೆ ಕೊಟ್ಟಿರುವ ಸ್ವಾತಂತ್ರ್ಯವನ್ನು ಇನ್ನೊಬ್ಬರಿಗೆ ನೋವಾಗುವ ರೀತಿ ಬಳಸಿಕೊಳ್ಳಬಾರದು. ಸಮತೋಲಿತವಾಗಿ ಮಾತನಾಡಬೇಕಾಗುತ್ತದೆ ಎಂದು ಕೋರ್ಟ್​ ಹೇಳಿತ್ತು. ಆದರೆ ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿ ಆರ್​.ಎಫ್​.ನಾರಿಮನ್​ ನೇತೃತ್ವದ ಪೀಠ ಫಾರೂಖಿಗೆ ಮಧ್ಯಂತರ ಜಾಮೀನು ನೀಡಿದೆ. ಮುನಾವರ್ ಫಾರೂಖಿ ಮಧ್ಯಪ್ರದೇಶದ ಇಂದೋರ ಮೂಲದ ಹಾಸ್ಯನಟ. ಅವರು ಮೂಲತಃ ಗುಜರಾತ್ನ ಜುನಾಗಢ್​​ನವರು.

Munawar Faruqui ಹಿಂದೂ ದೇವತೆಗಳು ಮತ್ತು ಅಮಿತ್​ ಶಾ ನಿಂದನೆ ಆರೋಪ ಹೊತ್ತ ಮುನಾವರ್ ಫಾರೂಖಿಗೆ ಮಧ್ಯಂತರ ಜಾಮೀನು

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್