Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಅಮ್ಮ ಬೆಳಗ್ಗೆ ತಿಂಡಿ ಕೊಟ್ಟಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಮಗ

ಅಮ್ಮ ಬೆಳಗ್ಗೆ ತಿಂಡಿ ರೆಡಿ ಮಾಡಿಲ್ಲವೆಂದು ಮಗನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ತಿಂಡಿ ತಯಾರು ಮಾಡಿಲ್ಲ ಎಂದು ತಾಯಿಯೊಂದಿಗೆ ಜಗಳವಾಡಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕನ್ಹನ್ ಪಿಂಪ್ರಿ ಪ್ರದೇಶದ ನಿವಾಸಿಯಾದ 17 ವರ್ಷದ ಬಾಲಕ ಶುಕ್ರವಾರ ಬೆಳಗ್ಗೆ ತನ್ನ ತಾಯಿಯೊಂದಿಗೆ ಜಗಳವಾಡಿದ್ದ. ತಾಯಿ ಬೆಳಗಿನ ತಿಂಡಿಯನ್ನು ತಯಾರಿಸಿಲ್ಲವೆಂದು ಕೋಪಗೊಂಡು ಮನೆಯಿಂದ ಹೊರ ಹೋಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾರಾಷ್ಟ್ರ: ಅಮ್ಮ ಬೆಳಗ್ಗೆ ತಿಂಡಿ ಕೊಟ್ಟಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಮಗ
ಪ್ರಾತಿನಿಧಿಕ ಚಿತ್ರ
Follow us
ನಯನಾ ರಾಜೀವ್
|

Updated on: Dec 04, 2023 | 8:38 AM

ಅಮ್ಮ ಬೆಳಗ್ಗೆ ತಿಂಡಿ ರೆಡಿ ಮಾಡಿಲ್ಲವೆಂದು ಮಗನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ತಿಂಡಿ ತಯಾರು ಮಾಡಿಲ್ಲ ಎಂದು ತಾಯಿಯೊಂದಿಗೆ ಜಗಳವಾಡಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕನ್ಹನ್ ಪಿಂಪ್ರಿ ಪ್ರದೇಶದ ನಿವಾಸಿಯಾದ 17 ವರ್ಷದ ಬಾಲಕ ಶುಕ್ರವಾರ ಬೆಳಗ್ಗೆ ತನ್ನ ತಾಯಿಯೊಂದಿಗೆ ಜಗಳವಾಡಿದ್ದ. ತಾಯಿ ಬೆಳಗಿನ ತಿಂಡಿಯನ್ನು ತಯಾರಿಸಿಲ್ಲವೆಂದು ಕೋಪಗೊಂಡು ಮನೆಯಿಂದ ಹೊರ ಹೋಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕನ ಪೋಷಕರು ಪೊಲೀಸರನ್ನು ಸಂಪರ್ಕಿಸಿದ ನಂತರ, ಅಪರಿಚಿತ ವ್ಯಕ್ತಿ ವಿರುದ್ಧ ಅಪಹರಣದ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ಹುಡುಕಾಟದ ವೇಳೆ ಭಾನುವಾರ ಬೆಳಗ್ಗೆ ರೈಲ್ವೇ ಹಳಿಯ ಬಳಿಯ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕ ಪತ್ತೆಯಾಗಿದ್ದಾನೆ. ನ್ಯೂಕ್ಯಾಂಪ್ಟಿ ಪೊಲೀಸರು ಆಕಸ್ಮಿಕ ಸಾವಿನ ಪ್ರಕರಣವನ್ನು ದಾಖಲಿಸಿದ್ದಾರೆ, ಎಂದು ಅಧಿಕಾರಿ ಸೇರಿಸಲಾಗಿದೆ.

ಮತ್ತಷ್ಟು ಓದಿ: ಮಹಾರಾಷ್ಟ್ರ: ರುಚಿ ರುಚಿಯಾದ ಊಟ ಬಡಿಸಲಿಲ್ಲ ಎಂದು ತಾಯಿಯನ್ನೇ ಕೊಂದ ಮಗ

ಊಟ ರುಚಿ ಇಲ್ಲವೆಂದು ತಾಯಿಯ ಹತ್ಯೆ ಊಟ ರುಚಿ ಇಲ್ಲ ಎಂದು ಮಗನೊಬ್ಬ ತನ್ನ ತಾಯಿಯನ್ನೇ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಮುರ್ಬಾದ್ ತಾಲೂಕಿನ ವೇಲು ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಥಾಣೆ ಗ್ರಾಮಾಂತರ ಪೊಲೀಸ್ ನಿಯಂತ್ರಣ ಕೊಠಡಿಯ ಅಧಿಕಾರಿ ತಿಳಿಸಿದ್ದಾರೆ. ಮನೆಯ ವಿಚಾರವಾಗಿ ಮಹಿಳೆ ಮತ್ತು ಆಕೆಯ ಮಗನ ನಡುವೆ ಆಗಾಗ ಜಗಳ ನಡೆಯುತ್ತಿತ್ತು.

ವ್ಯಕ್ತಿ ತನ್ನ ತಾಯಿಯೊಂದಿಗೆ ಮತ್ತೆ ಜಗಳವಾಡಿದ್ದಾನೆ ಮತ್ತು ಅವರು ರುಚಿಕರವಾದ ಆಹಾರವನ್ನು ಬೇಯಿಸಿ ಬಡಿಸಲಿಲ್ಲ ಎಂದು ದೂರಿದ್ದಾನೆ ಎಂದು ಎಫ್‌ಐಆರ್ ಉಲ್ಲೇಖಿಸಿ ಪೊಲೀಸರು ತಿಳಿಸಿದ್ದಾರೆ.

ಕೋಪದ ಭರದಲ್ಲಿ ಆ ವ್ಯಕ್ತಿ ತನ್ನ ತಾಯಿಯ ಕುತ್ತಿಗೆಯ ಮೇಲೆ ಕುಡುಗೋಲಿನಿಂದ ಹಲ್ಲೆ ಮಾಡಿದ್ದಾನೆ, ನಂತರ ತಾಯಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ