AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Triple Talaq: ವರದಕ್ಷಿಣೆಯಾಗಿ 7 ಸೀಟಿನ ಕಾರು, 10 ಲಕ್ಷ ರೂ ನೀಡಲಿಲ್ಲ ಎಂದು ಪತ್ನಿಗೆ ತಲಾಖ್ ನೀಡಿದ ಪತಿ

ಪತಿಯೊಬ್ಬ ವರದಕ್ಷಿಣೆ ಬೇಡಿಕೆಯನ್ನು ಈಡೇರಿಸಲಿಲ್ಲ ಎನ್ನುವ ಕಾರಣಕ್ಕೆ ಪತ್ನಿಗೆ ತಲಾಖ್(Talaq) ನೀಡಿದ್ದಾನೆ. ಆತ 7 ಸೀಟಿನ ಕಾರು ಹಾಗೂ 10 ಲಕ್ಷ ರೂ ವರದಕ್ಷಿಣೆಯನ್ನು ಕೇಳಿದ್ದ ಆದರೆ ಪತ್ನಿಯ ಕುಟುಂಬದವರಿಗೆ ಅದನ್ನು ನೀಡಲು ಸಾಧ್ಯವಾಗಿಲ್ಲ ಹೀಗಾಗಿ ಪತ್ನಿಗೆ ತ್ರಿವಳಿ ತಲಾಖ್ ನೀಡಿದ್ದಾನೆ.

Triple Talaq: ವರದಕ್ಷಿಣೆಯಾಗಿ 7 ಸೀಟಿನ ಕಾರು, 10 ಲಕ್ಷ ರೂ ನೀಡಲಿಲ್ಲ ಎಂದು ಪತ್ನಿಗೆ ತಲಾಖ್ ನೀಡಿದ ಪತಿ
ತಲಾಖ್Image Credit source: DNA India
ನಯನಾ ರಾಜೀವ್
|

Updated on:Jul 05, 2023 | 2:46 PM

Share

ಪತಿಯೊಬ್ಬ ವರದಕ್ಷಿಣೆ ಬೇಡಿಕೆಯನ್ನು ಈಡೇರಿಸಲಿಲ್ಲ ಎನ್ನುವ ಕಾರಣಕ್ಕೆ ಪತ್ನಿಗೆ ತಲಾಖ್(Talaq) ನೀಡಿದ್ದಾನೆ. ಆತ 7 ಸೀಟಿನ ಕಾರು ಹಾಗೂ 10 ಲಕ್ಷ ರೂ ವರದಕ್ಷಿಣೆಯನ್ನು ಕೇಳಿದ್ದ ಆದರೆ ಪತ್ನಿಯ ಕುಟುಂಬದವರಿಗೆ ಅದನ್ನು ನೀಡಲು ಸಾಧ್ಯವಾಗಿಲ್ಲ ಹೀಗಾಗಿ ಪತ್ನಿಗೆ ತ್ರಿವಳಿ ತಲಾಖ್ ನೀಡಿದ್ದಾನೆ. ಸಂತ್ರಸ್ತೆ ಫರ್ಹೀನ್ ಪತಿ ಫೈಸಲ್ ಹಸನ್, ಅತ್ತೆ ಅಖ್ತರಿ ಬೇಗಂ, ಸೋದರ ಅದೀಬ್ ಹುಸೇನ್, ಅರಾಫತ್ ಮತ್ತು ಸೊಸೆ ಕೈನಾತ್ ವಿರುದ್ಧ ಉತ್ತರ ಪ್ರದೇಶದ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಫರ್ಹೀನ್ 2019 ರಲ್ಲಿ ಅಜಂಗಢ ರಾಮನಗರ ಕಾಲೋನಿ ನಿವಾಸಿ ಫೈಸಲ್ ಹಸನ್ ಅವರನ್ನು ವಿವಾಹವಾಗಿದ್ದರು. ಫರ್ಹೀನ್ ಪ್ರಕಾರ, ಪೋಷಕರು ನಾಲ್ಕು ಚಕ್ರದ ವಾಹನವನ್ನು ವರದಕ್ಷಿಣೆಯಾಗಿ ನೀಡಿದ್ದರು ಮತ್ತು 25 ಲಕ್ಷ ರೂ. ಕೂಡ ನೀಡಿದ್ದರು.

ಮತ್ತಷ್ಟು ಓದಿ:ತಲಾಖ್ ಕುರಿತು ಇನ್​ಸ್ಟಾಗ್ರಾಂನಲ್ಲಿ ರೀಲ್ಸ್​ ಮಾಡಿದ ಪತ್ನಿ, ರಿಯಲ್​ ಆಗಿಯೇ ತಲಾಖ್ ನೀಡಿದ ಪತಿ

ಕೆಲವು ದಿನಗಳ ನಂತರ, ಅವರು ಏಳು ಆಸನದ ಕಾರು ಮತ್ತು 10 ಲಕ್ಷ ನಗದು ಬೇಡಿಕೆಯನ್ನು ಪ್ರಾರಂಭಿಸಿದರು. ಬೇಡಿಕೆ ಈಡೇರದಿದ್ದಾಗ ಚಿತ್ರಹಿಂಸೆ ನೀಡುತ್ತಿದ್ದರು. ಜುಲೈ 13, 2022 ರಂದು, ಆಕೆಯ ಪತಿ ಮತ್ತು ಅತ್ತೆ ಅವರನ್ನು ಹೊಡೆದು ಮನೆಯಿಂದ ಹೊರಹಾಕಿದ್ದರು.

ಸಂತ್ರಸ್ತೆಯ ದೂರಿನ ಆಧಾರದ ಮೇಲೆ, ಉತ್ತರ ಪ್ರದೇಶ ಪೊಲೀಸರು ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಕಾಯಿದೆ, 2019 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ, ಇದನ್ನು ತ್ರಿವಳಿ ತಲಾಖ್ ಕಾನೂನು ಎಂದು ಕರೆಯಲಾಗುತ್ತದೆ.

ತಾಯಿ ಮನೆಗೆ ಹೋಗುವಂತೆ ಒತ್ತಾಯಿಸಿದ್ದರು, ಅತ್ತೆ ಮತ್ತೆ ಪತಿ ಸ್ವಲ್ಪ ದಿನದ ಬಳಿಕ ಕರೆಯುತ್ತಾರೆ ಎಂದು ಭಾವಿಸಿದ್ದಳು, ಆದರೆ ಆಕೆಯ ನಂಬಿಕೆ ಸುಳ್ಳಾಗಿತ್ತು, ವರದಕ್ಷಿಣೆ ನೀಡದಿದ್ದರೆ ಮನೆಗೆ ವಾಪಸ್ ಬರುವಂತಿಲ್ಲ ಎಂದು ಪತಿ ಹೇಳಿದ್ದರು, ಜೂನ್ 18ರಂದು ತಲಾಖ್ ನೀಡಿದ್ದಾರೆ ಎಂದು ಮಹಿಳೆ ದೂರಿದ್ದಾಳೆ.

ಸಂತ್ರಸ್ತ ಮಹಿಳೆ ದೂರಿನ ಮೇರೆಗೆ ಪೊಲೀಸರು ಆರೋಪಿ ಪತಿ ಹಾಗೂ ಆತನ ಕುಟುಂಬದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:45 pm, Wed, 5 July 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ