AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಸರ್ಕಾರಗಳು ಉಚಿತವಾಗಿಯೇ ಲಸಿಕೆ ನೀಡುತ್ತವೆ..ನೀವು ಇದರಲ್ಲಿ ಹಸ್ತಕ್ಷೇಪ ಮಾಡಬೇಡಿ; ಸುಪ್ರೀಂಕೋರ್ಟ್​ಗೆ ಕೇಂದ್ರದ ಅಫಿಡವಿಟ್​

ಕೊವಿಡ್ 19 ಸಾಂಕ್ರಾಮಿಕ ರೋಗ ನಿಯಂತ್ರಣದ ಬಗ್ಗೆ ನೀವು ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರವಾಗಿ ತಿಳಿಸಬೇಕು ಎಂದು ಸುಪ್ರೀಂಕೋರ್ಟ್​ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಿದೆ.

ರಾಜ್ಯಸರ್ಕಾರಗಳು ಉಚಿತವಾಗಿಯೇ ಲಸಿಕೆ ನೀಡುತ್ತವೆ..ನೀವು ಇದರಲ್ಲಿ ಹಸ್ತಕ್ಷೇಪ ಮಾಡಬೇಡಿ; ಸುಪ್ರೀಂಕೋರ್ಟ್​ಗೆ ಕೇಂದ್ರದ ಅಫಿಡವಿಟ್​
ಸುಪ್ರೀಂ ಕೋರ್ಟ್​
Lakshmi Hegde
|

Updated on: May 10, 2021 | 11:58 AM

Share

ಕೇಂದ್ರ ಸರ್ಕಾರದ ಕೊವಿಡ್​ 19 ಲಸಿಕೆ ನೀತಿಯ ಬಗ್ಗೆ ಅಪಸ್ವರ ಎದ್ದಿದ್ದ ಬೆನ್ನಲ್ಲೇ ಸುಪ್ರೀಂಕೋರ್ಟ್​ ಅಫಿಡವಿಟ್ ಸಲ್ಲಿಸಲು ಹೇಳಿತ್ತು. ಅದರಂತೆ 218 ಪೇಜ್​ಗಳ ಅಫಿಡವಿಟ್ ಸಲ್ಲಿಸಿರುವ ಕೇಂದ್ರ ಸರ್ಕಾರ ತನ್ನ ಕೊರೊನಾ ಲಸಿಕೆ ನೀತಿಯನ್ನು ಸಮರ್ಥಿಸಿಕೊಂಡಿದೆ. ಅಲ್ಲದೆ, ಈ ವಿಚಾರದಲ್ಲಿ ನ್ಯಾಯಾಂಗ ಹಸ್ತಕ್ಷೇಪ ಮಾಡಬಾರದು. ಕಾರ್ಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇಡಬೇಕು ಎಂದು ಹೇಳಿದೆ.

ಕೊವಿಡ್ 19 ಸಾಂಕ್ರಾಮಿಕ ರೋಗ ನಿಯಂತ್ರಣದ ಬಗ್ಗೆ ನೀವು ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರವಾಗಿ ತಿಳಿಸಬೇಕು ಎಂದು ಸುಪ್ರೀಂಕೋರ್ಟ್​ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರ್ಕಾರ, ಕೊರೊನಾ ರೋಗಿಗಳಿಗೆ ಸುಗಮವಾಗಿ ಚಿಕಿತ್ಸೆ ನೀಡುವ ದೃಷ್ಟಿಯಿಂದ ಮೂರು ರೀತಿಯ ಆರೋಗ್ಯ ವ್ಯವಸ್ಥೆಯನ್ನು ರೂಪಿಸಲಾಗಿದೆ. ಕೊರೊನಾ ಸೌಮ್ಯ ಲಕ್ಷಣ ಇರುವವರಿಗಾಗಿ ಕೊವಿಡ್ ಕಾಳಜಿ ಕೇಂದ್ರ, ಜಾಸ್ತಿ ಲಕ್ಷಣವುಳ್ಳವರಿಗಾಗಿ ಕೊವಿಡ್ ಹೆಲ್ತ್​ ಸೆಂಟರ್​ ಮತ್ತು ಗಂಭೀರ ಪರಿಸ್ಥಿತಿ ಇರುವವರಿಗಾಗಿ ಕೊವಿಡ್ ಆಸ್ಪತ್ರೆಗಳನ್ನು ನಿಗದಿಪಡಿಸಲಾಗಿದೆ ಎಂದು ವಿವರಿಸಿದೆ. ಹಾಗೇ, ಈ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯಲು ಆರ್​ಟಿ-ಪಿಸಿಆರ್​ ಅಥವಾ ರ್ಯಾಪಿಡ್​ ಆ್ಯಂಟಿಜೆನ್​ ಟೆಸ್ಟ್ ವರದಿ ಕಡ್ಡಾಯವಲ್ಲ. ಶಂಕಿತ ರೋಗಿಗಳೂ ಕೂಡ ಅಡ್ಮಿಟ್ ಆಗಬಹುದು ಎಂದು ತಿಳಿಸಿದೆ. ಹಾಗೇ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು 5ನೇ ವರ್ಷದಲ್ಲಿ ಮೆಡಿಕಲ್​ ಓದುತ್ತಿರುವವರನ್ನೂ ನೇಮಿಸಲಾಗಿದೆ. ಈ ಮೂಲಕ ಚಿಕಿತ್ಸೆ ನೀಡುವ ವೇಗವನ್ನು ಜಾಸ್ತಿ ಮಾಡಲಾಗಿದೆ ಎಂದು ಕೋರ್ಟ್​ಗೆ ತಿಳಿಸಿದೆ.

ಲಸಿಕೆ ಉತ್ಪಾದನೆ ಇತ್ತೀಚೆಗಷ್ಟೇ ಶುರುವಾಗಿದೆ ಜಗತ್ತಿನಾದ್ಯಂತ ಲಸಿಕೆ ಉತ್ಪಾದನೆ ಇತ್ತೀಚೆಗಷ್ಟೇ ಶುರುವಾಗಿದೆ. ಲಸಿಕೆ ಸೀಮಿತವಾಗಿ ಲಭ್ಯವಾಗುತ್ತಿರುವ ಕಾರಣದಿಂದಲೇ ವಿಶ್ವದ ಪ್ರತಿ ದೇಶವೂ ಆದ್ಯತೆ ಮೇರೆಗೆ ಅದನ್ನು ವಿತರಿಸುತ್ತಿದೆ. ಭಾರತದಲ್ಲೂ ಕೂಡ ಹಂತಹಂತವಾಗಿ, ಕೊವಿಡ್ ನಿಂದ ಅಪಾಯ ಯಾರಿಗೆ ಜಾಸ್ತಿ ಇದೆ ಎಂಬುದನ್ನು ಅವಲೋಕಿಸಿಕೊಂಡು ಲಸಿಕೆ ನೀಡಲಾಗುತ್ತಿದೆ. ಆಯಾ ರಾಜ್ಯಗಳಲ್ಲಿನ ಜನಸಂಖ್ಯೆಯನ್ನು ಆಧರಿಸಿಯೇ ಲಸಿಕೆ ಹಂಚಿಕೆ ಮಾಡಲಾಗುತ್ತದೆ ಎಂದೂ ತಿಳಿಸಿದೆ.

ಲಸಿಕೆ ಬೆಲೆ ಬಗ್ಗೆ ಹೇಳಿದ್ದೇನು? ಎಲ್ಲ ರಾಜ್ಯಗಳಿಗೂ ಕೊರೊನಾ ಲಸಿಕೆ ಬೆಲೆಯನ್ನು ಏಕರೂಪವಾಗಿಯೇ ನಿಗದಿ ಮಾಡಲಾಗಿದೆ. ಕೊವಿಡ್​ 19 ವ್ಯಾಕ್ಸಿನ್​ ಬೆಲೆ ಅದನ್ನು ಪಡೆಯುವ ಅಂತಿಮ ಫಲಾನುಭವಿಯ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಬಹುತೇಕ ಎಲ್ಲ ರಾಜ್ಯ ಸರ್ಕಾರಗಳೂ ತಮ್ಮಲ್ಲಿನ ನಾಗರಿಕರಿಗೆ ಉಚಿತವಾಗಿಯೇ ಲಸಿಕೆ ನೀಡುವ ಘೋಷಣೆ ಮಾಡಿದ್ದರಿಂದ ನಾಗರಿಕರಿಗೆ ತೊಂದರೆ ಆಗುವುದಿಲ್ಲ ಎಂದು ಅಫಿಡಿವಿಟ್​​ನಲ್ಲಿ ಹೇಳಿದೆ. ಆದರೆ ಲಸಿಕೆ ವಿಚಾರದಲ್ಲಿ ಖಾಸಗಿ-ಸರ್ಕಾರಿ ಆಸ್ಪತ್ರೆಗಳಿಗೆ ಏಕರೂಪದ ಬೆಲೆ ನಿಗದಿ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಅಲ್ಲದೆ, ಈ ವಿಚಾರದಲ್ಲಿ ನಮ್ಮ ಮೇಲೆ ನಂಬಿಕೆ ಇಡಬೇಕು ಎಂದೂ ಕೇಳಿಕೊಂಡಿದೆ.

ಇದನ್ನೂ ಓದಿ: Kangana Ranaut: ಟ್ವಿಟರ್​ನಿಂದ ಹೊರದಬ್ಬಿಸಿಕೊಂಡ ಕಂಗನಾ ಇನ್​ಸ್ಟಾಗ್ರಾಮ್​ನಲ್ಲಿ ಒಂದು ವಾರ ಉಳಿಯೋದು ಕೂಡ ಅನುಮಾನ

ಜೂನಿಯರ್ ಆರ್ಟಿಸ್ಟ್‌ಗಳಿಗೆ ಪಡಿತರ ಕಿಟ್ ವಿತರಣೆ; ಮಾನವೀಯತೆ ಮೆರೆದ ಹಿರಿಯ ನಟಿ ಲೀಲಾವತಿ ಹಾಗೂ ನಟ ವಿನೋದ್ ರಾಜ್

Not to interfere in vaccine policy centre Asks to Supreme Court in its affidavit

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ