AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ನೋಡಲು ಆಸ್ಪತ್ರೆಗೆ ಬರಬೇಡಿ: ಬೆಂಬಲಿಗರಿಗೆ, ಅನುಯಾಯಿಗಳಿಗೆ ಕೆಸಿಆರ್ ಮನವಿ

ನಾನು ಯಶೋದಾ ಆಸ್ಪತ್ರೆಯಲ್ಲಿರುವ ಕಾರಣ, ನನ್ನ ವೈದ್ಯಕೀಯ ತಂಡವು ಸೋಂಕು ತಗುಲುವ ಸಾಧ್ಯತೆಯಿದೆ, ಪರಿಸ್ಥಿತಿ ಹದಗೆಡುತ್ತದೆ ಎಂದು ಸಲಹೆ ನೀಡುತ್ತಿದೆ. ಎಲ್ಲರೂ ತಮ್ಮ ಮನೆಗಳಿಗೆ ಹಿಂತಿರುಗುವಂತೆ ವಿನಂತಿಸುತ್ತೇವೆ. ದಯವಿಟ್ಟು ನನ್ನನ್ನು ನೋಡಲು ಆಸ್ಪತ್ರೆಗೆ ಭೇಟಿ ನೀಡಬೇಡಿ ಎಂದು ವಿಡಿಯೊ ಮೂಲಕ ಕೆಸಿಆರ್ ಮನವಿ ಮಾಡಿದ್ದಾರೆ.

ನನ್ನನ್ನು ನೋಡಲು ಆಸ್ಪತ್ರೆಗೆ ಬರಬೇಡಿ: ಬೆಂಬಲಿಗರಿಗೆ, ಅನುಯಾಯಿಗಳಿಗೆ ಕೆಸಿಆರ್ ಮನವಿ
ಕೆಸಿಆರ್
ರಶ್ಮಿ ಕಲ್ಲಕಟ್ಟ
|

Updated on:Dec 12, 2023 | 5:54 PM

Share

ಹೈದರಾಬಾದ್ ಡಿಸೆಂಬರ್ 12: ಇಂದು ನನ್ನನ್ನು ನೋಡಲು ಆಸ್ಪತ್ರೆಗೆ ಭೇಟಿ ನೀಡಿದ ಸಾವಿರಾರು ಜನರಿಗೆ ನಾನು ಕೃತಜ್ಞನಾಗಿದ್ದೇನೆ.  ಅಪಘಾತದ ನಂತರ ನಾನು ಯಶೋದಾ ಆಸ್ಪತ್ರೆಯಲ್ಲಿರುವ ಕಾರಣ, ನನ್ನ ವೈದ್ಯಕೀಯ ತಂಡವು ಸೋಂಕು ತಗುಲುವ ಸಾಧ್ಯತೆಯಿದೆ, ಪರಿಸ್ಥಿತಿ ಹದಗೆಡುತ್ತದೆ ಎಂದು ಸಲಹೆ ನೀಡುತ್ತಿದೆ. ಎಲ್ಲರೂ ತಮ್ಮ ಮನೆಗಳಿಗೆ ಹಿಂತಿರುಗುವಂತೆ ವಿನಂತಿಸುತ್ತೇವೆ. ದಯವಿಟ್ಟು ನನ್ನನ್ನು ನೋಡಲು ಆಸ್ಪತ್ರೆಗೆ ಭೇಟಿ ನೀಡುವ ಕಷ್ಟ ತೆಗೆದುಕೊಳ್ಳಬೇಡಿ ಎಂದು ವಿನಂತಿಸುತ್ತೇವೆ. ತುಂಬಾ ಟ್ರಾಫಿಕ್ ತೊಂದರೆಯೂ ಇದೆ. ಜನರ ಮಧ್ಯೆ ಇರುವ ವ್ಯಕ್ತಿ ನಾನು. ನಾನು ಚೇತರಿಸಿಕೊಂಡ ನಂತರ ನಾವು ಎಲ್ಲರೂ ಶೀಘ್ರದಲ್ಲೇ ಭೇಟಿಯಾಗಬಹುದು ಎಂದು ತೆಲಂಗಾಣದ (Telangana)ಮಾಜಿ ಸಿಎಂ, ಬಿಆರ್​​ಎಸ್ (BRS) ಮುಖ್ಯಸ್ಥ  ಕೆಸಿಆರ್(K Chandrashekar rao) ವಿಡಿಯೊದಲ್ಲಿ ಹೇಳಿದ್ದಾರೆ.

ಕೆಸಿಆರ್ ಡಿಸೆಂಬರ್ 7 ರಂದು ಎರ್ರವಳ್ಳಿಯಲ್ಲಿರುವ ತಮ್ಮ ತೋಟದ ಮನೆಯಲ್ಲಿ ಬಿದ್ದು ಹೈದರಾಬಾದ್‌ನ ಯಶೋದಾ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಒಟ್ಟು ಎಡ ಹಿಪ್ ರಿಪ್ಲೇಸ್ ಮೆಂಟ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಕೆಸಿಆರ್ ಆರೋಗ್ಯ ಸ್ಥಿತಿ

ಡಿಸೆಂಬರ್ 8 ರಂದು ವಾಶ್ ರೂಂನಲ್ಲಿ ಕಾಲು ಜಾರಿ ಬಿದ್ದ ಕೆಸಿಆರ್ ಹಿಪ್ ರಿಪ್ಲೇಸ್ ಮೆಂಟ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆಯ ನಂತರ, ಕೆಸಿಆರ್ ಅವರ ಸ್ಥಿತಿಯನ್ನು ವೈದ್ಯರ ತಂಡವು ನಿಕಟವಾಗಿ ಮೇಲ್ವಿಚಾರಣೆ ಮಾಡಿದೆ. ಅವರ ಚೇತರಿಕೆ ಪ್ರಕ್ರಿಯೆಯು ಉತ್ತಮವಾಗಿ ಸಾಗುತ್ತಿದೆ ಎಂದು ವೈದ್ಯಕೀಯ ತಜ್ಞರು ಹೇಳಿದ್ದಾರೆ. ಯಶೋದಾ ವೈದ್ಯಕೀಯ ತಂಡದಿಂದ ಡಾ.ಪ್ರವೀಣ್ ರಾವ್, ಕೆಸಿಆರ್ ಅವರು ಚೇತರಿಸಿಕೊಳ್ಳುವ ಹಂತದಲ್ಲಿ ದೈಹಿಕ ಮತ್ತು ಮಾನಸಿಕ ಶಕ್ತಿಯನ್ನು ತೋರಿಸಿದ್ದಾರೆ  ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:45 pm, Tue, 12 December 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ