AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಾಹಿತ್ಯ ಅಕಾಡೆಮಿ 2023ರ ಪ್ರಶಸ್ತಿ ಪ್ರಕಟ: ಲೇಖಕ, ಚಿಂತಕ ಲಕ್ಷ್ಮೀಶ ತೋಳ್ಪಾಡಿಗೆ ಪ್ರಶಸ್ತಿ

ಖ್ಯಾತ ಲೇಖಕ, ಚಿಂತಕ, ವಾಗ್ಮಿ ಲಕ್ಷ್ಮೀಶ ತೋಳ್ಪಾಡಿ ಅವರಿಗೆ  ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. 2023ರ ಸಾಲಿನ ಪ್ರಶಸ್ತಿ ಘೋಷಣೆ ಆಗಿದ್ದು ಪ್ರಬಂಧ ವಿಭಾಗಲ್ಲಿ ತೋಳ್ಪಾಡಿ ಅವರ ಮಹಾಭಾರತ ಅನುಸಂಧಾನದ ಭಾರತಯಾತ್ರೆಗೆ ಈ ಪ್ರಶಸ್ತಿ ಬಂದಿದೆ ಎಂದು ಸಾಹಿತ್ಯ ಅಕಾಡೆಮಿ ಪ್ರಕಟಣೆ ತಿಳಿಸಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿ 2023ರ ಪ್ರಶಸ್ತಿ ಪ್ರಕಟ: ಲೇಖಕ, ಚಿಂತಕ ಲಕ್ಷ್ಮೀಶ ತೋಳ್ಪಾಡಿಗೆ ಪ್ರಶಸ್ತಿ
ಲಕ್ಷ್ಮೀಶ ತೋಳ್ಪಾಡಿ
Follow us
ರಶ್ಮಿ ಕಲ್ಲಕಟ್ಟ
|

Updated on:Dec 20, 2023 | 6:24 PM

ದೆಹಲಿ ಡಿಸೆಂಬರ್ 20: 2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (Kendra Sahitya Akademi Award) ಪ್ರಕಟವಾಗಿದೆ. 24 ಭಾಷೆಗಳಿಗೆ ಪ್ರಶಸ್ತಿ ಪ್ರಕಟವಾಗಿದ್ದು ಇದರಲ್ಲಿ ಪ್ರಬಂಧ ವಿಭಾಗದಲ್ಲಿ ಕನ್ನಡದ ಖ್ಯಾತ  ಚಿಂತಕ, ಲೇಖಕ, ವಾಗ್ಮಿ ಲಕ್ಷ್ಮೀಶ ತೋಳ್ಪಾಡಿ (Lakshmeesha tolpadi) ಅವರ ಕೃತಿಗೆ ಪ್ರಶಸ್ತಿ ಲಭಿಸಿದೆ. ಮಹಾಭಾರತ ಅನುಸಂಧಾನದ ಭಾರತಯಾತ್ರೆ ಪ್ರಬಂಧಕ್ಕೆ ಈ ಗೌರವ ಸಿಕ್ಕಿದೆ ಎಂದು ಸಾಹಿತ್ಯ ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ.

ಲಕ್ಷೀಶ ತೋಳ್ಪಾಡಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಳಿಯ ಶಾಂತಿಗೋಡು ಗ್ರಾಮದವರು. ಭಗವದ್ಗೀತೆಯ ಬಗೆಗಿನ ‘ಮಹಾಯುದ್ದಕ್ಕೆ ಮುನ್ನ’ ಮೊದಲ ಪ್ರಕಟಿತ ಕೃತಿ. ಬೆಟ್ಟ ಮಹಮದನ ಬಳಿಗೆ ಬಾರದಿದ್ದರೆ, ಸಂಪಿಗೆ ಭಾಗವತ,ಬಾಳು ಸಾವು ಒಡ್ಡುತ್ತಿರುವ ಆಮಿಷ, ಆನಂದ ಲಹರೀ,ಭಕ್ತಿಯ ನೆಪದಲ್ಲಿ,ಭವ ತಲ್ಲಣ’ (ತಾಳಮದ್ದಲೆ ಕುರಿತು) ಕೃತಿಗಳು ಪ್ರಕಟವಾಗಿವೆ.

ಮಲಯಾಳಂ ಭಾಷೆಯಲ್ಲಿ ಖ್ಯಾತ ಬರಹಗಾರ ಇ.ವಿ. ರಾಮಕೃಷ್ಣನ್ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಿಕ್ಕಿದೆ.ಮಾತೃಭೂಮಿ ಬುಕ್ಸ್‌ ಪ್ರಕಟಿಸಿದ ‘ಮಲಯಾಳ ನೋವೆಲಿಂಡೆ ದೇಶ ಕಾಲಂಞಳ್’ ಕೃತಿಗೆ ಈ ಪ್ರಶಸ್ತಿ ಲಭಿಸಿದೆ. ರಾಮಕೃಷ್ಣನ್ ಅವರು ಸಾಹಿತ್ಯ ವಿಮರ್ಶೆಗಾಗಿ ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ಓಡಕ್ಕುಝಲ್ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಇದನ್ನೂ ಓದಿ: ಶಿಕ್ಷಕ ವೃತ್ತಿ ಬಿಟ್ಟು ಜಾನಪದ ಸಂಗೀತ ಉಸಿರಾಗಿಸಿಕೊಂಡ ಕೋಲಾರದ ಗೋ.ನಾ. ಸ್ವಾಮಿಗೆ ಕಾಸರಗೋಡಿನ ಗಡಿನಾಡು ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಒಡಿಯಾದ ಖ್ಯಾತ ಕವಿ ಅಶುತೋಷ್ ಪರಿದಾ  ‘ಅಪ್ರಸ್ತುತ ಮೃತ್ಯು’ ಕವನ ಸಂಕಲಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಹಿಂದಿ ಭಾಷೆಯಲ್ಲಿ ಸಂಜೀವ್ ಅವರ ‘ಮುಜೆ ಪಹಚಾನೋ’ ಕಾದಂಬರಿಗೆ, ಇಂಗ್ಲಿಷ್ ಭಾಷೆಯಲ್ಲಿ ನೀಲಂ ಶರಣ್ ಗೌರ್ ಅವರ Requiem in Raga Janki  ಮತ್ತು ಉರ್ದು ಭಾಷೆಯಲ್ಲಿ ನವಾಬ್ ಸಹರ್ ಅವರ ‘ರಾಜದೇವ್ ಕಿ ಅಮರಾಯಿ’ ಕೃತಿಗೆ ಪ್ರಶಸ್ತಿ ಸಂದಿದೆ.

ಕಾದಂಬರಿಕಾರ ಕೃಷ್ಣತ್ ಖೋಟ್ ಅವರ ಮರಾಠಿಯಲ್ಲಿನ ‘ರಿಂಗಾನ’ ಪುಸ್ತಕ ಮತ್ತು ಕೊಂಕಣಿಯಲ್ಲಿ ಪ್ರಕಾಶ್ ಪರ್ಯಾಕರ್ ಅವರ ಕಥಾ ಸಂಕಲನ ‘ವರ್ಸಲ್’ಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿದೆ.

ಸಾಹಿತ್ಯ ಅಕಾಡೆಮಿ ಕಾರ್ಯದರ್ಶಿ ಡಾ. ಶ್ರೀನಿವಾಸ ರಾವ್ ಅವರು ಹಿಂದಿ ಹೊರತುಪಡಿಸಿ ಇತರ ಭಾಷೆಗಳಲ್ಲಿ ವಿಜೇತರ ಹೆಸರನ್ನು ಪ್ರಕಟಿಸಿದರು. ಪ್ರಶಸ್ತಿ ವಿಜೇತರು ಮಾರ್ಚ್ 12, 2024 ರಂದು ನವದೆಹಲಿಯ ಕಮಾನಿ ಸಭಾಂಗಣದಲ್ಲಿ ಈ ಗೌರವವನ್ನು ಸ್ವೀಕರಿಸುತ್ತಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:45 pm, Wed, 20 December 23

ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ
ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್