AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

12ರಿಂದ 17 ವರ್ಷದ ಮಕ್ಕಳಿಗೆ ಕೊವಾವ್ಯಾಕ್ಸ್ ಲಸಿಕೆ: ತುರ್ತು ಬಳಕೆಗೆ ಡಿಜಿಸಿಐ ಅನುಮತಿ

ಚೀನಾದಲ್ಲಿ ಮತ್ತೆ ಕೊರೊನಾ ಹರಡಿ, ಹಲವು ನಗರಗಳಿಗೆ ಲಾಕ್​ಡೌನ್ ನಿರ್ಬಂಧಗಳನ್ನು ವಿಧಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಮಹತ್ವ ಪಡೆದುಕೊಂಡಿದೆ.

12ರಿಂದ 17 ವರ್ಷದ ಮಕ್ಕಳಿಗೆ ಕೊವಾವ್ಯಾಕ್ಸ್ ಲಸಿಕೆ: ತುರ್ತು ಬಳಕೆಗೆ ಡಿಜಿಸಿಐ ಅನುಮತಿ
ನೊವಾವ್ಯಾಕ್ಸ್ ಲಸಿಕೆ (ಸಂಗ್ರಹ ಚಿತ್ರ)
TV9 Web
| Edited By: |

Updated on: Mar 23, 2022 | 7:19 AM

Share

ದೆಹಲಿ: ಭಾರತದಲ್ಲಿ 12ರಿಂದ 17 ವರ್ಷದ ವಯೋಮಾನದ ಮಕ್ಕಳ ತುರ್ತು ಬಳಕೆಗೆ ಕೊವಾವ್ಯಾಕ್ಸ್ ಲಸಿಕೆ ನೀಡಲು ಭಾರತ ಔಷಧ ಮಹಾನಿಯಂತ್ರಕರು (Drugs Controller General of India – DGCI) ಅನುಮತಿ ನೀಡಿದ್ದಾರೆ. ಚೀನಾದಲ್ಲಿ ಮತ್ತೆ ಕೊರೊನಾ ಹರಡಿ, ಹಲವು ನಗರಗಳಿಗೆ ಲಾಕ್​ಡೌನ್ ನಿರ್ಬಂಧಗಳನ್ನು ವಿಧಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಮಹತ್ವ ಪಡೆದುಕೊಂಡಿದೆ. ನೊವಾವ್ಯಾಕ್ಸ್​ ಕಂಪನಿಯ ಈ ಲಸಿಕೆಯನ್ನು ಭಾರತದಲ್ಲಿ ಸೆರಮ್ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ ಕೊವಾವ್ಯಾಕ್ಸ್​ ಹೆಸರಿನಲ್ಲಿ ಉತ್ಪಾದಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದೆ.

ಕೊವಿಡ್-19 ಸೋಂಕಿನ ವಿರುದ್ಧ ತನ್ನ ಲಸಿಕೆ ಶೇ 80ರಷ್ಟು ಪರಿಣಾಮಕಾರಿ ಎಂದು ಕಳೆದ ವಾರ ನೊವಾವ್ಯಾಕ್ಸ್ ಹೇಳಿತ್ತು. ಭಾರತದ 2,247 ಹದಿಹರೆಯದ ಮಕ್ಕಳ ಮೇಲೆ ಕೊವಾವ್ಯಾಕ್ಸ್ ಲಸಿಕೆಯ ಪರೀಕ್ಷೆಗಳು ನಡೆದಿತ್ತು. ಈ ಮಕ್ಕಳೆಲ್ಲರೂ 12ರಿಂದ 17 ವರ್ಷ ವಯೋಮಾನದವರು. ಕ್ಲಿನಿಕಲ್ಸ್​ ಟ್ರಯಲ್ಸ್​ ವೇಳೆಯಲ್ಲಿ ಈ ಲಸಿಕೆ ಪಡೆದ ಮಕ್ಕಳ ದೇಹದಲ್ಲಿಯೂ ನಿರೀಕ್ಷಿತ ರೀತಿಯಲ್ಲಿ ಪ್ರತಿಕಾಯಗಳನ್ನು ಬಿಡುಗಡೆ ಮಾಡಿದೆ ಎಂದು ಕಂಪನಿ ಹೇಳಿದೆ.

ಮಕ್ಕಳಿಗೆ ನೀಡುವ ಉದ್ದೇಶದೊಂದಿಗೆ ಅಭಿವೃದ್ಧಿ ಪಡಿಸಿದ ಲಸಿಕೆಗಳ ಪೈಕಿ ಕೊವಾವ್ಯಾಕ್ಸ್​ ಸೇರಿ 4 ಲಸಿಕೆಗಳಿಗೆ ಅನುಮತಿ ಸಿಕ್ಕಿದೆ. 12 ವರ್ಷಕ್ಕೂ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ನೀಡಲು ಭಾರತ ಸರ್ಕಾರ ಅನುಮತಿ ನೀಡಿದೆ. ಬಯಲಾಜಿಕಲ್ ಇ ಕಂಪನಿಯ ಕೊರ್ಬಾವ್ಯಾಕ್ಸ್, ಝೈಡಸ್ ಕೆಡಿಲಿಯಾ ಕಂಪನಿಯ ಝೈಕೊವ್-ಡಿ ಮತ್ತು ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್ ಲಸಿಕೆಗಳಿಗೆ ಈಗಾಗಲೇ ಅನುಮತಿ ಸಿಕ್ಕಿದೆ.

ಭಾರತದಲ್ಲಿ ಈವರೆಗೆ 15 ವರ್ಷ ದಾಟಿದ ಮಕ್ಕಳಿಗೆ ಮಾತ್ರ ಲಸಿಕೆ ನೀಡಲಾಗುತ್ತಿತ್ತು. ಕಳೆದ ವಾರವಷ್ಟೇ ಭಾರತದಲ್ಲಿ 12ರಿಂದ 14 ವರ್ಷದ ಮಕ್ಕಳಿಗೆ ಬಯಾಲಾಜಿಕಲ್ ಇ ಕಂಪನಿಯ ಕೊರ್ಬಾವ್ಯಾಕ್ಸ್ ಲಸಿಕೆ ನೀಡಲು ಅನುಮತಿ ನೀಡಲಾಗಿತ್ತು. ನೊವಾವ್ಯಾಕ್ಸ್​ನ ಕೊರೊನಾ ನಿರೋಧಕ ಲಸಿಕೆಯನ್ನು 18 ವರ್ಷ ದಾಟಿದ ಎಲ್ಲರಿಗೂ ನೀಡಬಹುದು ಎಂದು ಕಳೆದ ಡಿಸೆಂಬರ್​ನಲ್ಲಿ ಡಿಜಿಸಿಐ ಅನುಮತಿ ನೀಡಿತ್ತು.

ಇದನ್ನೂ ಓದಿ: ಚೀನಾದಲ್ಲಿ ಮತ್ತೆ ಹೆಚ್ಚಾಗಿದೆ ಕೊರೊನಾ ವೈರಸ್​; ಒಂದು ವರ್ಷದ ಬಳಿಕ ಒಂದೇ ದಿನ ಇಬ್ಬರು ಸೋಂಕಿನಿಂದ ಸಾವು

ಇದನ್ನೂ ಓದಿ: ಜಾಗತಿಕವಾಗಿ ಕೊರೊನಾ ಏರಿಕೆ; ಈ 5 ಅಂಶಗಳನ್ನು ಅನುಸರಿಸುವಂತೆ ಎಲ್ಲಾ ರಾಜ್ಯಗಳಿಗೆ ರಾಜೇಶ್ ಭೂಷಣ್ ಪತ್ರ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ