AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

12ರಿಂದ 17 ವರ್ಷದ ಮಕ್ಕಳಿಗೆ ಕೊವಾವ್ಯಾಕ್ಸ್ ಲಸಿಕೆ: ತುರ್ತು ಬಳಕೆಗೆ ಡಿಜಿಸಿಐ ಅನುಮತಿ

ಚೀನಾದಲ್ಲಿ ಮತ್ತೆ ಕೊರೊನಾ ಹರಡಿ, ಹಲವು ನಗರಗಳಿಗೆ ಲಾಕ್​ಡೌನ್ ನಿರ್ಬಂಧಗಳನ್ನು ವಿಧಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಮಹತ್ವ ಪಡೆದುಕೊಂಡಿದೆ.

12ರಿಂದ 17 ವರ್ಷದ ಮಕ್ಕಳಿಗೆ ಕೊವಾವ್ಯಾಕ್ಸ್ ಲಸಿಕೆ: ತುರ್ತು ಬಳಕೆಗೆ ಡಿಜಿಸಿಐ ಅನುಮತಿ
ನೊವಾವ್ಯಾಕ್ಸ್ ಲಸಿಕೆ (ಸಂಗ್ರಹ ಚಿತ್ರ)
TV9 Web
| Edited By: |

Updated on: Mar 23, 2022 | 7:19 AM

Share

ದೆಹಲಿ: ಭಾರತದಲ್ಲಿ 12ರಿಂದ 17 ವರ್ಷದ ವಯೋಮಾನದ ಮಕ್ಕಳ ತುರ್ತು ಬಳಕೆಗೆ ಕೊವಾವ್ಯಾಕ್ಸ್ ಲಸಿಕೆ ನೀಡಲು ಭಾರತ ಔಷಧ ಮಹಾನಿಯಂತ್ರಕರು (Drugs Controller General of India – DGCI) ಅನುಮತಿ ನೀಡಿದ್ದಾರೆ. ಚೀನಾದಲ್ಲಿ ಮತ್ತೆ ಕೊರೊನಾ ಹರಡಿ, ಹಲವು ನಗರಗಳಿಗೆ ಲಾಕ್​ಡೌನ್ ನಿರ್ಬಂಧಗಳನ್ನು ವಿಧಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಮಹತ್ವ ಪಡೆದುಕೊಂಡಿದೆ. ನೊವಾವ್ಯಾಕ್ಸ್​ ಕಂಪನಿಯ ಈ ಲಸಿಕೆಯನ್ನು ಭಾರತದಲ್ಲಿ ಸೆರಮ್ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ ಕೊವಾವ್ಯಾಕ್ಸ್​ ಹೆಸರಿನಲ್ಲಿ ಉತ್ಪಾದಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದೆ.

ಕೊವಿಡ್-19 ಸೋಂಕಿನ ವಿರುದ್ಧ ತನ್ನ ಲಸಿಕೆ ಶೇ 80ರಷ್ಟು ಪರಿಣಾಮಕಾರಿ ಎಂದು ಕಳೆದ ವಾರ ನೊವಾವ್ಯಾಕ್ಸ್ ಹೇಳಿತ್ತು. ಭಾರತದ 2,247 ಹದಿಹರೆಯದ ಮಕ್ಕಳ ಮೇಲೆ ಕೊವಾವ್ಯಾಕ್ಸ್ ಲಸಿಕೆಯ ಪರೀಕ್ಷೆಗಳು ನಡೆದಿತ್ತು. ಈ ಮಕ್ಕಳೆಲ್ಲರೂ 12ರಿಂದ 17 ವರ್ಷ ವಯೋಮಾನದವರು. ಕ್ಲಿನಿಕಲ್ಸ್​ ಟ್ರಯಲ್ಸ್​ ವೇಳೆಯಲ್ಲಿ ಈ ಲಸಿಕೆ ಪಡೆದ ಮಕ್ಕಳ ದೇಹದಲ್ಲಿಯೂ ನಿರೀಕ್ಷಿತ ರೀತಿಯಲ್ಲಿ ಪ್ರತಿಕಾಯಗಳನ್ನು ಬಿಡುಗಡೆ ಮಾಡಿದೆ ಎಂದು ಕಂಪನಿ ಹೇಳಿದೆ.

ಮಕ್ಕಳಿಗೆ ನೀಡುವ ಉದ್ದೇಶದೊಂದಿಗೆ ಅಭಿವೃದ್ಧಿ ಪಡಿಸಿದ ಲಸಿಕೆಗಳ ಪೈಕಿ ಕೊವಾವ್ಯಾಕ್ಸ್​ ಸೇರಿ 4 ಲಸಿಕೆಗಳಿಗೆ ಅನುಮತಿ ಸಿಕ್ಕಿದೆ. 12 ವರ್ಷಕ್ಕೂ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ನೀಡಲು ಭಾರತ ಸರ್ಕಾರ ಅನುಮತಿ ನೀಡಿದೆ. ಬಯಲಾಜಿಕಲ್ ಇ ಕಂಪನಿಯ ಕೊರ್ಬಾವ್ಯಾಕ್ಸ್, ಝೈಡಸ್ ಕೆಡಿಲಿಯಾ ಕಂಪನಿಯ ಝೈಕೊವ್-ಡಿ ಮತ್ತು ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್ ಲಸಿಕೆಗಳಿಗೆ ಈಗಾಗಲೇ ಅನುಮತಿ ಸಿಕ್ಕಿದೆ.

ಭಾರತದಲ್ಲಿ ಈವರೆಗೆ 15 ವರ್ಷ ದಾಟಿದ ಮಕ್ಕಳಿಗೆ ಮಾತ್ರ ಲಸಿಕೆ ನೀಡಲಾಗುತ್ತಿತ್ತು. ಕಳೆದ ವಾರವಷ್ಟೇ ಭಾರತದಲ್ಲಿ 12ರಿಂದ 14 ವರ್ಷದ ಮಕ್ಕಳಿಗೆ ಬಯಾಲಾಜಿಕಲ್ ಇ ಕಂಪನಿಯ ಕೊರ್ಬಾವ್ಯಾಕ್ಸ್ ಲಸಿಕೆ ನೀಡಲು ಅನುಮತಿ ನೀಡಲಾಗಿತ್ತು. ನೊವಾವ್ಯಾಕ್ಸ್​ನ ಕೊರೊನಾ ನಿರೋಧಕ ಲಸಿಕೆಯನ್ನು 18 ವರ್ಷ ದಾಟಿದ ಎಲ್ಲರಿಗೂ ನೀಡಬಹುದು ಎಂದು ಕಳೆದ ಡಿಸೆಂಬರ್​ನಲ್ಲಿ ಡಿಜಿಸಿಐ ಅನುಮತಿ ನೀಡಿತ್ತು.

ಇದನ್ನೂ ಓದಿ: ಚೀನಾದಲ್ಲಿ ಮತ್ತೆ ಹೆಚ್ಚಾಗಿದೆ ಕೊರೊನಾ ವೈರಸ್​; ಒಂದು ವರ್ಷದ ಬಳಿಕ ಒಂದೇ ದಿನ ಇಬ್ಬರು ಸೋಂಕಿನಿಂದ ಸಾವು

ಇದನ್ನೂ ಓದಿ: ಜಾಗತಿಕವಾಗಿ ಕೊರೊನಾ ಏರಿಕೆ; ಈ 5 ಅಂಶಗಳನ್ನು ಅನುಸರಿಸುವಂತೆ ಎಲ್ಲಾ ರಾಜ್ಯಗಳಿಗೆ ರಾಜೇಶ್ ಭೂಷಣ್ ಪತ್ರ

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್