AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

12ರಿಂದ 17 ವರ್ಷದ ಮಕ್ಕಳಿಗೆ ಕೊವಾವ್ಯಾಕ್ಸ್ ಲಸಿಕೆ: ತುರ್ತು ಬಳಕೆಗೆ ಡಿಜಿಸಿಐ ಅನುಮತಿ

ಚೀನಾದಲ್ಲಿ ಮತ್ತೆ ಕೊರೊನಾ ಹರಡಿ, ಹಲವು ನಗರಗಳಿಗೆ ಲಾಕ್​ಡೌನ್ ನಿರ್ಬಂಧಗಳನ್ನು ವಿಧಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಮಹತ್ವ ಪಡೆದುಕೊಂಡಿದೆ.

12ರಿಂದ 17 ವರ್ಷದ ಮಕ್ಕಳಿಗೆ ಕೊವಾವ್ಯಾಕ್ಸ್ ಲಸಿಕೆ: ತುರ್ತು ಬಳಕೆಗೆ ಡಿಜಿಸಿಐ ಅನುಮತಿ
ನೊವಾವ್ಯಾಕ್ಸ್ ಲಸಿಕೆ (ಸಂಗ್ರಹ ಚಿತ್ರ)
TV9 Web
| Edited By: |

Updated on: Mar 23, 2022 | 7:19 AM

Share

ದೆಹಲಿ: ಭಾರತದಲ್ಲಿ 12ರಿಂದ 17 ವರ್ಷದ ವಯೋಮಾನದ ಮಕ್ಕಳ ತುರ್ತು ಬಳಕೆಗೆ ಕೊವಾವ್ಯಾಕ್ಸ್ ಲಸಿಕೆ ನೀಡಲು ಭಾರತ ಔಷಧ ಮಹಾನಿಯಂತ್ರಕರು (Drugs Controller General of India – DGCI) ಅನುಮತಿ ನೀಡಿದ್ದಾರೆ. ಚೀನಾದಲ್ಲಿ ಮತ್ತೆ ಕೊರೊನಾ ಹರಡಿ, ಹಲವು ನಗರಗಳಿಗೆ ಲಾಕ್​ಡೌನ್ ನಿರ್ಬಂಧಗಳನ್ನು ವಿಧಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಮಹತ್ವ ಪಡೆದುಕೊಂಡಿದೆ. ನೊವಾವ್ಯಾಕ್ಸ್​ ಕಂಪನಿಯ ಈ ಲಸಿಕೆಯನ್ನು ಭಾರತದಲ್ಲಿ ಸೆರಮ್ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ ಕೊವಾವ್ಯಾಕ್ಸ್​ ಹೆಸರಿನಲ್ಲಿ ಉತ್ಪಾದಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದೆ.

ಕೊವಿಡ್-19 ಸೋಂಕಿನ ವಿರುದ್ಧ ತನ್ನ ಲಸಿಕೆ ಶೇ 80ರಷ್ಟು ಪರಿಣಾಮಕಾರಿ ಎಂದು ಕಳೆದ ವಾರ ನೊವಾವ್ಯಾಕ್ಸ್ ಹೇಳಿತ್ತು. ಭಾರತದ 2,247 ಹದಿಹರೆಯದ ಮಕ್ಕಳ ಮೇಲೆ ಕೊವಾವ್ಯಾಕ್ಸ್ ಲಸಿಕೆಯ ಪರೀಕ್ಷೆಗಳು ನಡೆದಿತ್ತು. ಈ ಮಕ್ಕಳೆಲ್ಲರೂ 12ರಿಂದ 17 ವರ್ಷ ವಯೋಮಾನದವರು. ಕ್ಲಿನಿಕಲ್ಸ್​ ಟ್ರಯಲ್ಸ್​ ವೇಳೆಯಲ್ಲಿ ಈ ಲಸಿಕೆ ಪಡೆದ ಮಕ್ಕಳ ದೇಹದಲ್ಲಿಯೂ ನಿರೀಕ್ಷಿತ ರೀತಿಯಲ್ಲಿ ಪ್ರತಿಕಾಯಗಳನ್ನು ಬಿಡುಗಡೆ ಮಾಡಿದೆ ಎಂದು ಕಂಪನಿ ಹೇಳಿದೆ.

ಮಕ್ಕಳಿಗೆ ನೀಡುವ ಉದ್ದೇಶದೊಂದಿಗೆ ಅಭಿವೃದ್ಧಿ ಪಡಿಸಿದ ಲಸಿಕೆಗಳ ಪೈಕಿ ಕೊವಾವ್ಯಾಕ್ಸ್​ ಸೇರಿ 4 ಲಸಿಕೆಗಳಿಗೆ ಅನುಮತಿ ಸಿಕ್ಕಿದೆ. 12 ವರ್ಷಕ್ಕೂ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ನೀಡಲು ಭಾರತ ಸರ್ಕಾರ ಅನುಮತಿ ನೀಡಿದೆ. ಬಯಲಾಜಿಕಲ್ ಇ ಕಂಪನಿಯ ಕೊರ್ಬಾವ್ಯಾಕ್ಸ್, ಝೈಡಸ್ ಕೆಡಿಲಿಯಾ ಕಂಪನಿಯ ಝೈಕೊವ್-ಡಿ ಮತ್ತು ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್ ಲಸಿಕೆಗಳಿಗೆ ಈಗಾಗಲೇ ಅನುಮತಿ ಸಿಕ್ಕಿದೆ.

ಭಾರತದಲ್ಲಿ ಈವರೆಗೆ 15 ವರ್ಷ ದಾಟಿದ ಮಕ್ಕಳಿಗೆ ಮಾತ್ರ ಲಸಿಕೆ ನೀಡಲಾಗುತ್ತಿತ್ತು. ಕಳೆದ ವಾರವಷ್ಟೇ ಭಾರತದಲ್ಲಿ 12ರಿಂದ 14 ವರ್ಷದ ಮಕ್ಕಳಿಗೆ ಬಯಾಲಾಜಿಕಲ್ ಇ ಕಂಪನಿಯ ಕೊರ್ಬಾವ್ಯಾಕ್ಸ್ ಲಸಿಕೆ ನೀಡಲು ಅನುಮತಿ ನೀಡಲಾಗಿತ್ತು. ನೊವಾವ್ಯಾಕ್ಸ್​ನ ಕೊರೊನಾ ನಿರೋಧಕ ಲಸಿಕೆಯನ್ನು 18 ವರ್ಷ ದಾಟಿದ ಎಲ್ಲರಿಗೂ ನೀಡಬಹುದು ಎಂದು ಕಳೆದ ಡಿಸೆಂಬರ್​ನಲ್ಲಿ ಡಿಜಿಸಿಐ ಅನುಮತಿ ನೀಡಿತ್ತು.

ಇದನ್ನೂ ಓದಿ: ಚೀನಾದಲ್ಲಿ ಮತ್ತೆ ಹೆಚ್ಚಾಗಿದೆ ಕೊರೊನಾ ವೈರಸ್​; ಒಂದು ವರ್ಷದ ಬಳಿಕ ಒಂದೇ ದಿನ ಇಬ್ಬರು ಸೋಂಕಿನಿಂದ ಸಾವು

ಇದನ್ನೂ ಓದಿ: ಜಾಗತಿಕವಾಗಿ ಕೊರೊನಾ ಏರಿಕೆ; ಈ 5 ಅಂಶಗಳನ್ನು ಅನುಸರಿಸುವಂತೆ ಎಲ್ಲಾ ರಾಜ್ಯಗಳಿಗೆ ರಾಜೇಶ್ ಭೂಷಣ್ ಪತ್ರ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು