AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಈಗ ಮಾಫಿಯಾ ಯಾರನ್ನೂ ಹೆದರಿಸಲು ಸಾಧ್ಯವಿಲ್ಲ: ಅತೀಕ್, ಅಶ್ರಫ್ ಹತ್ಯೆ ಬಳಿಕ ಸಿಎಂ ಯೋಗಿ ಮಾತು

ಇದೀಗ ಮಾಫಿಯಾವು ರಾಜ್ಯದಲ್ಲಿ ಯಾರನ್ನೂ ಹೆದರಿಸಲು ಸಾಧ್ಯವಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಗ್ಯಾಂಗ್​ಸ್ಟರ್ ಅತೀಕ್ ಹಾಗೂ ಆತನ ಸಹೋದರ ಅಶ್ರಫ್ ಹತ್ಯೆ ಬಳಿಕ ಮೊದಲ ಬಾರಿಗೆ ಯೋಗಿ ಮಾತನಾಡಿದ್ದಾರೆ.

ರಾಜ್ಯದಲ್ಲಿ ಈಗ ಮಾಫಿಯಾ ಯಾರನ್ನೂ ಹೆದರಿಸಲು ಸಾಧ್ಯವಿಲ್ಲ: ಅತೀಕ್, ಅಶ್ರಫ್ ಹತ್ಯೆ ಬಳಿಕ ಸಿಎಂ ಯೋಗಿ ಮಾತು
ಯೋಗಿ ಆದಿತ್ಯನಾಥ್
ನಯನಾ ರಾಜೀವ್
|

Updated on: Apr 18, 2023 | 2:27 PM

Share

ಇದೀಗ ಮಾಫಿಯಾವು ರಾಜ್ಯದಲ್ಲಿ ಯಾರನ್ನೂ ಹೆದರಿಸಲು ಸಾಧ್ಯವಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಹೇಳಿದ್ದಾರೆ. ಗ್ಯಾಂಗ್​ಸ್ಟರ್ ಅತೀಕ್ ಹಾಗೂ ಆತನ ಸಹೋದರ ಅಶ್ರಫ್ ಹತ್ಯೆ ಬಳಿಕ ಮೊದಲ ಬಾರಿಗೆ ಯೋಗಿ ಮಾತನಾಡಿದ್ದಾರೆ. 2017 ಕ್ಕಿಂತ ಮೊದಲು ಯುಪಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿತ್ತು ಮತ್ತು ರಾಜ್ಯದಲ್ಲಿ ಪ್ರತಿದಿನ ಗಲಭೆಗಳು ನಡೆಯುತ್ತಿತ್ತು ಎಂದು ಹೇಳಿದರು. 2017ರಲ್ಲಿ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಉತ್ತರ ಪ್ರದೇಶದಲ್ಲಿ ಯಾವುದೇ ಗಲಭೆಗಳು ನಡೆದಿಲ್ಲ, ನಮ್ಮ ಸರ್ಕಾರ ರಾಜ್ಯವನ್ನು ಗಲಭೆ ಮುಕ್ತ ಮಾಡಿದೆ ಎಂದು ಸಿಎಂ ಹೇಳಿದರು.

2005 ರ ರಾಜು ಪಾಲ್ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ ಅವರನ್ನು ಫೆಬ್ರವರಿ 24 ರಂದು ಪ್ರಯಾಗ್‌ರಾಜ್‌ನಲ್ಲಿರುವ ಅವರ ನಿವಾಸದ ಹೊರಗೆ ಹತ್ಯೆ ಮಾಡಲಾಗಿತ್ತು. ರಾಜ್ಯದಲ್ಲಿ ಪ್ರತಿದಿನ ಗಲಭೆ ನಡೆಯುತ್ತಿತ್ತು. 2012 ರಿಂದ 2017 ರವರೆಗೆ 700 ಕ್ಕೂ ಹೆಚ್ಚು ಗಲಭೆಗಳು ನಡೆದಿವೆ. ಯುಪಿಯಲ್ಲಿ 2017 ರಿಂದ 2023 ರವರೆಗೆ ಒಂದೇ ಒಂದು ಗಲಭೆ ನಡೆದಿಲ್ಲ. ಯುಪಿಯಲ್ಲಿ ಒಮ್ಮೆಯೂ ಕರ್ಫ್ಯೂ ಹೇರಿಲ್ಲ. ಈಗ ಯಾವುದೇ ಕ್ರಿಮಿನಲ್ ಅಥವಾ ಮಾಫಿಯಾ ಯಾವುದೇ ಉದ್ಯಮಿಗೆ ಬೆದರಿಕೆ ಹಾಕಲು ಸಾಧ್ಯವಿಲ್ಲ. ಉತ್ತರ ಪ್ರದೇಶದಲ್ಲಿ ಆ ಪ್ರಮಾಣದಲ್ಲಿ ಭದ್ರತೆ ಒದಗಿಸಲಾಗಿದೆ.

ಮತ್ತಷ್ಟು ಓದಿ: Atiq Ahmad Killers: ಪ್ರತಾಪ್​ಗಢ ಕಾರಾಗೃಹಕ್ಕೆ ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್ ಹಂತಕರ ಸ್ಥಳಾಂತರ

ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಬದುಕುಳಿದಿರುವ ಏಕೈಕ ದಾಳಿಕೋರ ಗುಡ್ಡು ಮುಸ್ಲಿಂ. ಉಮೇಶ್ ಪಾಲ್ ಹತ್ಯೆ ವೇಳೆ ಗುಡ್ಡು ಮುಸ್ಲಿಂ ಕಚ್ಚಾ ಬಾಂಬ್‌ಗಳನ್ನು ಎಸೆದಿದ್ದು ನಂತರ ಏಳು ಜನರ ತಂಡ ಗುಂಡಿಕ್ಕಿ ಹತ್ಯೆ ಮಾಡಿತ್ತು. ಉಮೇಶ್ ಪಾಲ್ ಮತ್ತು ಪೊಲೀಸ್ ಅಂಗರಕ್ಷಕರ ಮೇಲೆ ಗುಡ್ಡು ಮುಸ್ಲಿಂ ಕಚ್ಚಾ ಬಾಂಬ್‌ಗಳನ್ನು ಎಸೆದಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿತ್ತು. ನಂತರ ತಲೆ ಮರೆಸಿಕೊಂಡಿದ್ದ ಗುಡ್ಡು ಮುಸ್ಲಿಂ ಇದೀಗ ಕರ್ನಾಟಕದಲ್ಲಿ ಓಡಾಡುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಯಿಂಗಳಿಂದ ಪತ್ತೆ ಹಚ್ಚಲಾಗಿದೆ. ಆತನ ಬಂಧನಕ್ಕಾಗಿ ಉತ್ತರ ಪ್ರದೇಶ ಪೊಲೀಸರು ಕರ್ನಾಟಕ ಪೊಲೀಸರ ನೆರವು ಕೋರಿದ್ದಾರೆ.

ಉಮೇಶ್ ಪಾಲ್ ಮತ್ತು ಇಬ್ಬರು ಪೊಲೀಸರನ್ನು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿರುವ ಅವರ ನಿವಾಸದ ಹೊರಗೆ ಗುಂಡಿಕ್ಕಿ ಕೊಂದ ನಂತರ ಎರಡು ತಿಂಗಳೊಳಗೆ ಮಾಫಿಯಾ ಡಾನ್, ರಾಜಕಾರಣಿ ಅತೀಕ್ ಅಹ್ಮದ್‌ಗೆ ಸಂಬಂಧಿಸಿದ ಆರು ಜನರು ಹತ್ಯೆ ಮಾಡಲಾಗಿದೆ. ಆರು ಮಂದಿಯ ಪಟ್ಟಿಯಲ್ಲಿ ಅತೀಕ್, ಅವರ ಪುತ್ರ ಅಸಾದ್, ಸಹಚರರಾದ ಅರ್ಬಾಜ್, ವಿಜಯ್ ಚೌಧರಿ ಅಲಿಯಾಸ್ ಉಸ್ಮಾನ್ ಮತ್ತು ಗುಲಾಮ್ ಹಸನ್ ಸೇರಿದ್ದಾರೆ.

2005ರ ಬಿಎಸ್‌ಪಿ ಶಾಸಕ ರಾಜುಪಾಲ್‌ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್‌ ಪಾಲ್‌ ಅವರನ್ನು ಫೆಬ್ರವರಿ 24ರಂದು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿರುವ ಅವರ ನಿವಾಸದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಮಾಜಿ ಸಂಸದ ಅತೀಕ್ ಅಹ್ಮದ್ ಅವರ ಕಿರಿಯ ಸಹೋದರ ಖಾಲಿದ್ ಅಜೀಂ ಅವರನ್ನು ಸೋಲಿಸುವ ಮೂಲಕ ಅಲಹಾಬಾದ್ ವಿಧಾನಸಭಾ ಸ್ಥಾನವನ್ನು ಚುನಾವಣೆ ಗೆದ್ದ ತಿಂಗಳ ಬಳಿಕ ರಾಜು ಪಾಲ್ ಅವರನ್ನು ಹತ್ಯೆ ಮಾಡಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?