AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋಶಿಮಠ ಇನ್ನುಮುಂದೆ ಜ್ಯೋತಿರ್ಮಠ; ಉತ್ತರಾಖಂಡ ಸರ್ಕಾರದಿಂದ ಮರುನಾಮಕರಣ

Uttarakhand: ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠದ ಹೆಸರನ್ನು ಬದಲಾಯಿಸಲಾಗಿದೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಇದನ್ನು ಇನ್ನುಮುಂದೆ ಜ್ಯೋತಿರ್ಮಠ ಎಂದು ಕರೆಯಲಾಗುವುದು.

ಜೋಶಿಮಠ ಇನ್ನುಮುಂದೆ ಜ್ಯೋತಿರ್ಮಠ; ಉತ್ತರಾಖಂಡ ಸರ್ಕಾರದಿಂದ ಮರುನಾಮಕರಣ
ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ
Follow us
ಸುಷ್ಮಾ ಚಕ್ರೆ
|

Updated on: Jun 12, 2024 | 7:47 PM

ನವದೆಹಲಿ: ಉತ್ತರಾಖಂಡದ (Uttarakhand) ಜೋಶಿಮಠದ ಹೆಸರನ್ನು ಜ್ಯೋತಿರ್ಮಠ (Jyotirmath) ಎಂದು ಬದಲಾಯಿಸಲು ಪುಷ್ಕರ್ ಸಿಂಗ್ ಧಾಮಿ ಸರ್ಕಾರ (Pushkar Singh Dhami Government) ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದ್ದು, ಅದಕ್ಕೆ ಅನುಮೋದನೆ ನೀಡಲಾಗಿದೆ. ಜೋಶಿಮಠ (Joshimath) ಹೆಸರನ್ನು ಬದಲಾಯಿಸಬೇಕೆಂಬ ಬೇಡಿಕೆ ಬಹಳ ಹಳೆಯದು. ಇದನ್ನು ಕಾಲಕಾಲಕ್ಕೆ ಬದಲಾಯಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಜನರ ಭಾವನೆಗಳನ್ನು ಗೌರವಿಸಿ ಸಿಎಂ ಪುಷ್ಕರ್ ಸಿಂಗ್ ಧಾಮಿ ಆ ಹೆಸರನ್ನು ಜ್ಯೋತಿರ್ಮಠ ಎಂದು ಬದಲಾಯಿಸಲು ನಿರ್ಧರಿಸಿದ್ದಾರೆ. ಇದು ಈ ಪ್ರದೇಶದ ಧಾರ್ಮಿಕ ಮತ್ತು ಸಾಂಸ್ಕೃತಿಕ ಅಸ್ಮಿತೆಯನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ನಂಬಲಾಗಿದೆ.

ಜೋಶಿಮಠದಲ್ಲಿ ವಾಸಿಸುವ ಜನರು ಅದರ ಹೆಸರನ್ನು ಬದಲಾಯಿಸಲು ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದರು. ಕಳೆದ ವರ್ಷ ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಕಾರ್ಯಕ್ರಮವೊಂದರಲ್ಲಿ ಜೋಶಿಮಠದ ಹೆಸರನ್ನು ಬದಲಾಯಿಸುವುದಾಗಿ ಘೋಷಿಸಿದ್ದರು. ಈಗ ಜನರ ಬೇಡಿಕೆ ಮತ್ತು ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಅದಕ್ಕೆ ಅನುಮೋದನೆ ನೀಡಲಾಗಿದೆ.

ಇದನ್ನೂ ಓದಿ: Kuwait Building Fire: ಕುವೈತ್ ಬೆಂಕಿ ಅಪಘಾತದಲ್ಲಿ 40 ಭಾರತೀಯರ ಸಾವು; ದುಃಖಕರ ಸಂಗತಿ ಎಂದ ಪ್ರಧಾನಿ ಮೋದಿ

ಜೋಶಿಮಠವನ್ನು ಹಿಮಾಲಯದ ಹೆಬ್ಬಾಗಿಲು ಎಂದೂ ಕರೆಯುತ್ತಾರೆ. ಇದು ಉತ್ತರಾಖಂಡದ ಪ್ರಾಚೀನ ಐತಿಹಾಸಿಕ ಮತ್ತು ಪೌರಾಣಿಕ ಸ್ಥಳಗಳಲ್ಲಿ ಒಂದಾಗಿದೆ. ಈ ಹಿಂದೆ ಜ್ಯೋತಿಷ್ಮಠದ ಹೆಸರು ಜೋಶಿಮಠ ಎಂದು ಬದಲಾಗಿದೆ ಎಂದು ಹೇಳಲಾಗುತ್ತದೆ. ಜೋಶಿಮಠವನ್ನು 8ನೇ ಶತಮಾನದಲ್ಲಿ ಶಂಕರಾಚಾರ್ಯರು ಸ್ಥಾಪಿಸಿದರು ಎಂದು ನಂಬಲಾಗಿದೆ. ಧಾರ್ಮಿಕ ಗ್ರಂಥಗಳ ಪ್ರಕಾರ, ಶಂಕರಾಚಾರ್ಯರು 4 ವಿದ್ಯಾಪೀಠಗಳಲ್ಲಿ ಒಂದಾದ ಜ್ಯೋತಿಷ್ಮಠವನ್ನು ಇಲ್ಲಿ ನಿರ್ಮಿಸಿದರು. ಅದಕ್ಕೆ ಜ್ಯೋತಿರ್ಮಠ ಎಂದು ಹೆಸರಿಸಲಾಯಿತು. ಆದಿಗುರು ಶಂಕರಾಚಾರ್ಯರು ಈ ಸ್ಥಳದ ಜವಾಬ್ದಾರಿಯನ್ನು ತಮ್ಮ ಅತ್ಯಂತ ಪ್ರೀತಿಯ ಶಿಷ್ಯ ತೋಟಕನಿಗೆ ಹಸ್ತಾಂತರಿಸಿದರು. ಅಮರ ಕೃಪಾ ಮರದ ಕೆಳಗೆ ತಪಸ್ಸು ಮಾಡಿದ ನಂತರ ಶಂಕರಾಚಾರ್ಯರು ದೈವಿಕ ಜ್ಞಾನದ ಬೆಳಕನ್ನು ಪಡೆದರು ಎಂಬ ನಂಬಿಕೆಯಿದೆ.

ಇದನ್ನೂ ಓದಿ: ಉತ್ತರಾಖಂಡ ಚಾರಣ: ಕುಂದಾಪುರ ಮೂಲದ ಚಾರಣಿಗ ಸಾವು

ಹಲವು ವರ್ಷಗಳಿಂದ, ಮೂಲ ಹೆಸರನ್ನು ಮರುಸ್ಥಾಪಿಸಲು ಹಲವು ಬೇಡಿಕೆಗಳು ಬಂದಿವೆ. ಆದರೆ ಈ ಪ್ರಯತ್ನಗಳು ಇಲ್ಲಿಯವರೆಗೆ ಕಾರ್ಯರೂಪಕ್ಕೆ ಬಂದಿಲ್ಲ. ಸಾರ್ವಜನಿಕರ ಭಾವನೆಗೆ ಸ್ಪಂದಿಸಿದ ಮುಖ್ಯಮಂತ್ರಿ ಧಾಮಿ ಅವರು ಜೋಶಿಮಠ ತಹಸಿಲ್ ಅನ್ನು ಅಧಿಕೃತವಾಗಿ ಜ್ಯೋತಿರ್ಮಠ ಎಂದು ಮರುನಾಮಕರಣ ಮಾಡಲು ನಿರ್ಧರಿಸಿದರು. ಜ್ಯೋತಿರ್ಮಠ ಎಂಬ ಹೆಸರು ಈಗ ಈ ಪ್ರದೇಶವನ್ನು ವ್ಯಾಖ್ಯಾನಿಸುವ ಶ್ರೀಮಂತ ಪರಂಪರೆ ಮತ್ತು ನಂಬಿಕೆಗೆ ಸಾಕ್ಷಿಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
‘ಅವರು ಇದ್ದಿದ್ರೆ...’ ಅಂಬರೀಶ್ ಹುಟ್ಟುಹಬ್ಬದಂದು ಸುಮಲತಾ ಭಾವುಕ
‘ಅವರು ಇದ್ದಿದ್ರೆ...’ ಅಂಬರೀಶ್ ಹುಟ್ಟುಹಬ್ಬದಂದು ಸುಮಲತಾ ಭಾವುಕ
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಒಂದೇ ವಾರದಲ್ಲಿ ಹೃದಯಾಘಾತದಿಂದ ಮೂವರ ಸಾವು; ತಜ್ಞರು ಹೇಳಿದ್ದೇನು ನೋಡಿ
ಒಂದೇ ವಾರದಲ್ಲಿ ಹೃದಯಾಘಾತದಿಂದ ಮೂವರ ಸಾವು; ತಜ್ಞರು ಹೇಳಿದ್ದೇನು ನೋಡಿ
VIDEO: ಮೈದಾನದಲ್ಲೇ ಹೊಡೆದಾಟ... ಬಾಂಗ್ಲಾ ಆಟಗಾರನಿಗೆ ಪಂಚ್
VIDEO: ಮೈದಾನದಲ್ಲೇ ಹೊಡೆದಾಟ... ಬಾಂಗ್ಲಾ ಆಟಗಾರನಿಗೆ ಪಂಚ್