AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿಗಳು ಈಗ ಶಾಂತವಾಗಿವೆ; ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಜೊತೆ ಅಜಿತ್ ದೋವಲ್ ಸಭೆ

ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ 2 ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಇಂದು ರಾಷ್ಟ್ರ ರಾಜಧಾನಿಯ ಹೈದರಾಬಾದ್ ಹೌಸ್‌ನಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿ ಮಾಡಿದರು. ಇಂದು ವಾಂಗ್ ಯಿ ಅವರೊಂದಿಗಿನ ಸಭೆಯಲ್ಲಿ NSA ಅಜಿತ್ ದೋವಲ್ ಎರಡೂ ದೇಶಗಳ ನಡುವಿನ ವಿಶ್ವಾಸವನ್ನು ಗಟ್ಟಿಗೊಳಿಸಲು ಮತ್ತು ಸಹಕಾರವನ್ನು ಬಲಪಡಿಸಲು ಒತ್ತಾಯಿಸಿದ್ದಾರೆ.

ಗಡಿಗಳು ಈಗ ಶಾಂತವಾಗಿವೆ; ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಜೊತೆ ಅಜಿತ್ ದೋವಲ್ ಸಭೆ
Ajit Doval With China Minister
ಸುಷ್ಮಾ ಚಕ್ರೆ
|

Updated on:Aug 19, 2025 | 9:55 PM

Share

ನವದೆಹಲಿ, ಆಗಸ್ಟ್ 19: ಚೀನಾ-ಭಾರತ ಗಡಿ ಪ್ರಶ್ನೆಯ ಕುರಿತು ವಿಶೇಷ ಪ್ರತಿನಿಧಿಗಳ 24ನೇ ಸಭೆ ಇಂದು ದೆಹಲಿಯಲ್ಲಿ ನಡೆಯಿತು. ಈ ವೇಳೆ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ (Wang Yi) ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಅಜಿತ್ ದೋವಲ್ (Ajit Doval) ಚೀನಾ-ಭಾರತ ಗಡಿ ಸಮಸ್ಯೆ ಮತ್ತು ದ್ವಿಪಕ್ಷೀಯ ಸಂಬಂಧಗಳ ಕುರಿತು ಸಮಗ್ರ ಚರ್ಚೆಗಳನ್ನು ನಡೆಸಿದರು. ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಮಂಗಳವಾರ ರಾಷ್ಟ್ರ ರಾಜಧಾನಿಯ ಹೈದರಾಬಾದ್ ಹೌಸ್‌ನಲ್ಲಿ ಎನ್‌ಎಸ್‌ಎ ದೋವಲ್ ಅವರನ್ನು ಭೇಟಿ ಮಾಡಿದರು.

ಕಳೆದ ಅಕ್ಟೋಬರ್‌ನಲ್ಲಿ ಮಿಲಿಟರಿ ಬಿಕ್ಕಟ್ಟು ಕೊನೆಗೊಂಡ ನಂತರ ಭಾರತ ಮತ್ತು ಚೀನಾ ಗಡಿಯಲ್ಲಿ ಶಾಂತಿ ನೆಲೆಸಿದೆ, ವಿವಿಧ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿವೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹೇಳಿದ್ದಾರೆ. ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗೆ ಗಡಿ ವಿಷಯದ ಕುರಿತು ಮಾತುಕತೆ ನಡೆಸುತ್ತಿದ್ದಾಗ ಅವರು ಈ ವಿಷಯ ತಿಳಿಸಿದರು.

ಇದನ್ನೂ ಓದಿ: ಭಯೋತ್ಪಾದನಾ ನಿಗ್ರಹಕ್ಕೆ ಆದ್ಯತೆ; ಚೀನಾದ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಮಾತುಕತೆ

ವಾಂಗ್ ಯಿ ಸೋಮವಾರ ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ಈ ವೇಳೆ ಅವರು ವಿದೇಶಾಂಗ ಸಚಿವ (ಇಎಎಂ) ಎಸ್. ಜೈಶಂಕರ್ ಅವರೊಂದಿಗೆ ಮಾತುಕತೆ ನಡೆಸಿದರು. ಭಾರತ ಮತ್ತು ಚೀನಾದ ಇಬ್ಬರು ಉನ್ನತ ನಾಯಕರ ನಡುವಿನ ಕಜಾನ್ ಸಭೆಯು ಎರಡು ರಾಷ್ಟ್ರಗಳ ನಡುವಿನ ಸಂಬಂಧಗಳ ಸುಧಾರಣೆ ಮತ್ತು ಅಭಿವೃದ್ಧಿಯಲ್ಲಿ ಒಂದು ಮಹತ್ವದ ತಿರುವು ಎಂದು ಎನ್‌ಎಸ್‌ಎ ಅಜಿತ್ ದೋವಲ್ ವಿವರಿಸಿದ್ದಾರೆ. ಈಗ ಎಎರಡೂ ದೇಶಗಳು ಗಡಿ ಪ್ರದೇಶದಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡಿಕೊಂಡಿದೆ, ದ್ವಿಪಕ್ಷೀಯ ಸಂಬಂಧಗಳಲ್ಲಿ ಮಹತ್ವದ ಪ್ರಗತಿಯನ್ನು ಸಾಧಿಸಿದೆ ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ಪ್ರಕ್ಷುಬ್ಧ ಅಂತಾರಾಷ್ಟ್ರೀಯ ಪರಿಸ್ಥಿತಿಯ ನಡುವೆ ಭಾರತ ಮತ್ತು ಚೀನಾ ಹಲವಾರು ಸಾಮಾನ್ಯ ಸವಾಲುಗಳನ್ನು ಎದುರಿಸುತ್ತಿವೆ ಎಂದು ಅಜಿತ್ ದೋವಲ್ ಹೇಳಿದ್ದಾರೆ.

ಇದನ್ನೂ ಓದಿ: China Flood: ಚೀನಾದಲ್ಲಿ ಪ್ರವಾಹಕ್ಕೆ ಸಿಲುಕಿ 10 ಜನ ಸಾವು, 33 ಮಂದಿ ನಾಪತ್ತೆ

“ಪ್ರಧಾನಿ ಮೋದಿ ಚೀನಾದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆ (SCO) ಟಿಯಾಂಜಿನ್ ಶೃಂಗಸಭೆಯಲ್ಲಿ ಭಾಗವಹಿಸಲು ಎದುರು ನೋಡುತ್ತಿದ್ದಾರೆ. ಇದು ದ್ವಿಪಕ್ಷೀಯ ಸಂಬಂಧಗಳಲ್ಲಿ ಹೊಸ ಬೆಳವಣಿಗೆಗಳನ್ನು ಉತ್ತೇಜಿಸುತ್ತದೆ ಎಂಬ ನಂಬಿಕೆಯಿದೆ. ಶೃಂಗಸಭೆಯನ್ನು ಆಯೋಜಿಸುವಲ್ಲಿ ಭಾರತ ಚೀನಾವನ್ನು ಬೆಂಬಲಿಸುತ್ತದೆ” ಎಂದು ಅಜಿತ್ ದೋವಲ್ ಹೇಳಿದರು ಎಂದು ಚೀನಾ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 9:49 pm, Tue, 19 August 25

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ