Breaking News ಚಿತ್ರಾ ರಾಮಕೃಷ್ಣ, ಆನಂದ್ ಸುಬ್ರಮಣಿಯನ್ಗೆ ದೆಹಲಿ ಹೈಕೋರ್ಟ್ ಜಾಮೀನು
NSE co-location scam NSE ಮಾಜಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಚಿತ್ರಾ ರಾಮಕೃಷ್ಣ ಮತ್ತು ಎನ್ಎಸ್ಇಯ ಮಾಜಿ ಗ್ರೂಪ್ ಆಪರೇಟಿಂಗ್ ಅಧಿಕಾರಿ ಆನಂದ್ ಸುಬ್ರಮಣಿಯನ್ ಅವರಿಗೆ ಷರತ್ತು ಬದ್ಧ ಜಾಮೀನು ನೀಡಿದ ದೆಹಲಿ ಹೈಕೋರ್ಟ್

ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ (NSE) ಮಾಜಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಚಿತ್ರಾ ರಾಮಕೃಷ್ಣ ಮತ್ತು ಎನ್ಎಸ್ಇಯ ಮಾಜಿ ಗ್ರೂಪ್ ಆಪರೇಟಿಂಗ್ ಅಧಿಕಾರಿ ಆನಂದ್ ಸುಬ್ರಮಣಿಯನ್ ಅವರ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿದ NSE ಕೋ ಲೊಕೇಷನ್ ಹಗರಣ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಬುಧವಾರ ಷರತ್ತು ಬದ್ಧ ಜಾಮೀನು ನೀಡಿದೆ.ನ್ಯಾಯಮೂರ್ತಿ ಸುಧೀರ್ ಕುಮಾರ್ ಜೈನ್ ಅವರು ಎನ್ಎಸ್ಇಯ ಇಬ್ಬರು ಮಾಜಿ ಅಧಿಕಾರಿಗಳಿಗೆ ಷರತ್ತು ಬದ್ಧ ಜಾಮೀನು ನೀಡಿದ್ದಾರೆ
ಏನಿದು ಕೋ ಲೊಕೇಷನ್ ಹಗರಣ ?
2018 ರಲ್ಲಿ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದಲ್ಲಿ (ಎನ್ಎಸ್ಇ) ಅಕ್ರಮಗಳ ಬಗ್ಗೆ ಬಹಿರಂಗವಾದ ನಂತರ ಎಫ್ಐಆರ್ ದಾಖಲಿಸಲಾಗಿದೆ. ಅಲ್ಗಾರಿದಮಿಕ್ ಟ್ರೇಡಿಂಗ್ ಅನ್ನು ವೇಗಗೊಳಿಸಲು ಎನ್ಎಸ್ಇ ಕೆಲವು ಹೈ-ಫ್ರೀಕ್ವೆನ್ಸಿ ವ್ಯಾಪಾರಿಗಳಿಗೆ ಅನ್ಯಾಯದ ಪ್ರವೇಶವನ್ನು ಒದಗಿಸಿದೆ ಎಂಬ ಆರೋಪವನ್ನು ಈ ಪ್ರಕರಣ ಒಳಗೊಂಡಿದೆ.
ದೇಶದ ಅತಿದೊಡ್ಡ ಷೇರುಪೇಟೆಯಲ್ಲಿ ಶಂಕಿತ ಕಾರ್ಪೊರೇಟ್ ಆಡಳಿತದ ಲೋಪಗಳ ತನಿಖೆಯ ಭಾಗವಾಗಿ ಕೇಂದ್ರೀಯ ತನಿಖಾ ದಳ (ಸಿಬಿಐ) ಮಾಜಿ ಎನ್ಎಸ್ಇ ಸಿಇಒ ಚಿತ್ರಾ ರಾಮಕೃಷ್ಣ ಮತ್ತು ಅವರ ಆಗಿನ ಸಲಹೆಗಾರ ಆನಂದ್ ಸುಬ್ರಮಣಿಯನ್ ಅವರನ್ನು ಪ್ರಶ್ನಿಸಿದೆ. ವಿಚಾರಣಾ ನ್ಯಾಯಾಲಯವು ರಾಮಕೃಷ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನಂತರ ಸಿಬಿಐ ಮಾರ್ಚ್ 6 ರಂದು ಅವರನ್ನು ಬಂಧಿಸಿತ್ತು. ಮಾರುಕಟ್ಟೆ ವಿನಿಮಯ ಕೇಂದ್ರಗಳ ಕಂಪ್ಯೂಟರ್ ಸರ್ವರ್ಗಳಿಂದ ಸ್ಟಾಕ್ ಬ್ರೋಕರ್ಗಳಿಗೆ ಮಾಹಿತಿಯ ಅಸಮರ್ಪಕ ಪ್ರಸರಣವನ್ನು ಸಿಬಿಐ ತನಿಖೆ ನಡೆಸುತ್ತಿದೆ.
ಮಾರುಕಟ್ಟೆ ನಿಯಂತ್ರಕ ಸೆಬಿ ಕೂಡ ಎನ್ಎಸ್ಇಯಲ್ಲಿ ಕಾರ್ಪೊರೇಟ್ ಆಡಳಿತದ ಲೋಪಗಳನ್ನು ಎತ್ತಿ ತೋರಿಸಿದೆ. ರಾಮಕೃಷ್ಣ ಅವರು ಹಲವು ವರ್ಷಗಳಿಂದ ಗೌಪ್ಯವಾದ ಎನ್ಎಸ್ಇ ಡೇಟಾವನ್ನು ಹಂಚಿಕೊಂಡಿದ್ದಾರೆ . ಅವರು ಹಿಮಾಲಯನ್ ಯೋಗಿ ಎಂದು ಹೇಳುವ ಹೊರಗಿನ ವ್ಯಕ್ತಿಯಿಂದ ಸಲಹೆಯನ್ನು ಪಡೆದರು ಎಂದು ಅದು ಹೇಳಿದೆ.
Published On - 12:57 pm, Wed, 28 September 22