AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಸಂಪುಟದಲ್ಲಿ ಮಂತ್ರಿಗಳ ಸಂಖ್ಯೆ ಹೆಚ್ಚಾಗಿದೆ; ಕೊರೊನಾ ಲಸಿಕೆ ಸಂಖ್ಯೆ ಏರಿಕೆಯಾಗಿಲ್ಲ: ರಾಹುಲ್ ಗಾಂಧಿ ಟೀಕೆ

ಕೆಲವು ದಿನಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಸಂಪುಟಕ್ಕೆ 43 ನೂತನ ಸಚಿವರ ಸೇರ್ಪಡೆಯಾಗಿತ್ತು. ಆ ಮೂಲಕ, ಸಂಪುಟದ ಒಟ್ಟು ಸಚಿವರ ಸಂಖ್ಯೆ 77ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.

ಸಚಿವ ಸಂಪುಟದಲ್ಲಿ ಮಂತ್ರಿಗಳ ಸಂಖ್ಯೆ ಹೆಚ್ಚಾಗಿದೆ; ಕೊರೊನಾ ಲಸಿಕೆ ಸಂಖ್ಯೆ ಏರಿಕೆಯಾಗಿಲ್ಲ: ರಾಹುಲ್ ಗಾಂಧಿ ಟೀಕೆ
ರಾಹುಲ್​ ಗಾಂಧಿ
Follow us
TV9 Web
| Updated By: ganapathi bhat

Updated on:Jul 11, 2021 | 9:13 PM

ದೆಹಲಿ: ಕೇಂದ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಕಾಂಗ್ರೆಸ್ ನಾಯಕ ಹಾಗೂ ಸಂಸದರೂ ಆಗಿರುವ ರಾಹುಲ್ ಗಾಂಧಿ ಇಂದು (ಜುಲೈ 11) ಟೀಕಾಪ್ರಹಾರ ಮಾಡಿದ್ದಾರೆ. ಕೇಂದ್ರ ಸರ್ಕಾರದ ಮಂತ್ರಿಗಳ ಪಟ್ಟಿ ಹೆಚ್ಚುತ್ತಾ ಇದೆ ಆದರೆ, ಕೊರೊನಾ ವಿರುದ್ಧದ ಲಸಿಕೆ ಸಂಖ್ಯೆ ಹೆಚ್ಚಾಗುತ್ತಿಲ್ಲ, ಏರಿಕೆಯಾಗುತ್ತಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಪ್ರತಿನಿತ್ಯ ನೀಡಲಾಗುತ್ತಿರುವ ಸರಾಸರಿ ಲಸಿಕೆಯ ಪಟ್ಟಿಯನ್ನೂ ಹಂಚಿಕೊಂಡಿರುವ ಅವರು, ಡಿಸೆಂಬರ್ 2021ರ ಒಳಗಾಗಿ ವಯಸ್ಕರಿಗೆ ಲಸಿಕೆ ನೀಡುವ ಗುರಿಯಿಂದ ದೇಶ ಹಿಂದುಳಿದಿರುವ ಬಗ್ಗೆ ತಿಳಿಸಿದ್ದಾರೆ. ಸಚಿವ ಸಂಪುಟದಲ್ಲಿ ಮಂತ್ರಿಗಳ ಸಂಖ್ಯೆ ಹೆಚ್ಚಾಗಿದೆ. ಆದರೆ, ಲಸಿಕೆಯದ್ದಲ್ಲ ಎಂದು ರಾಹುಲ್ ಗಾಂಧಿ ತಮ್ಮ ಟ್ವೀಟ್ ಮೂಲಕ ಹೇಳಿದ್ದಾರೆ. ಲಸಿಕೆ ಎಲ್ಲಿದೆ (WhereAreVaccines) ಎಂಬ ಹ್ಯಾಷ್ ಟ್ಯಾಗ್ ಬಳಸಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಸಂಪುಟಕ್ಕೆ 43 ನೂತನ ಸಚಿವರ ಸೇರ್ಪಡೆಯಾಗಿತ್ತು. ಆ ಮೂಲಕ, ಸಂಪುಟದ ಒಟ್ಟು ಸಚಿವರ ಸಂಖ್ಯೆ 77ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.

ಅವರು ಹಂಚಿಕೊಂಡಿರುವ ಚಾರ್ಟ್​ನಲ್ಲಿ ಡಿಸೆಂಬರ್ 2021ರ ಒಳಗಾಗಿ ದೇಶದ ಶೇಕಡಾ 60ರಷ್ಟು ಜನರಿಗೆ ಎರಡೂ ಡೋಸ್ ಲಸಿಕೆ ನೀಡುವ ಗುರಿ ಹೊಂದಿರುವ ಮಾಹಿತಿ ಇದೆ. ಜೊತೆಗೆ, ಇದಕ್ಕೆ ದಿನಕ್ಕೆ 8.8 ಮಿಲಿಯನ್ ಜನತೆಗೆ ಲಸಿಕೆ ನೀಡಿಕೆ ಆಗಬೇಕಾಗಿದೆ.

ಆದರೆ, ಕಳೆದ ಒಂದು ವಾರದ ಸರಾಸರಿ ಲಸಿಕೆ ನೀಡಿಕೆಯ ವಿವರದಂತೆ ಪ್ರತಿನಿತ್ಯ 3.4 ಮಿಲಿಯನ್ ಜನತೆಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ಅಂದರೆ, ದಿನನಿತ್ಯದ ಲಸಿಕೆ ವಿತರಣೆಯಲ್ಲಿ 5.4 ಮಿಲಿಯನ್​ನಷ್ಟು ಜನಸಂಖ್ಯೆಗೆ ಲಸಿಕೆ ನೀಡಿಕೆ ಹಿಂದುಳಿದಿದೆ. ಜುಲೈ 10ರಂದು 3.7 ಮಿಲಿಯನ್ ಜನರಿಗೆ ಲಸಿಕೆ ನೀಡಲಾಗಿದೆ. ಅದರಂತೆ 5.1 ಮಿಲಿಯನ್ ಜನರಿಗೆ ಲಸಿಕೆ ನೀಡಿಕೆ ಕಡಿಮೆಯಾದಂತಾಗಿದೆ.

ದೇಶದಲ್ಲಿ ಕೊರೊನಾ ಲಸಿಕೆ ನೀಡಿಕೆ ನಿಧಾನಗತಿಯಿಂದ ಸಾಗುತ್ತಿರುವುದನ್ನು ಕಾಂಗ್ರೆಸ್ ಸತತವಾಗಿ ವಿರೋಧಿಸುತ್ತಿದೆ. ಲಸಿಕೆ ನೀಡಿಕೆಗೆ ವೇಗ ನೀಡುವಂತೆ ಕೇಂದ್ರ ಸರ್ಕಾರವನ್ನು ಎಚ್ಚರಿಸುತ್ತಿದೆ. ಕೊರೊನಾ ಸೋಂಕು ಹರಡುವಿಕೆಯನ್ನು ಹಾಗೆ ಮಾತ್ರ ತಡೆಗಟ್ಟಬಹುದು ಎಂದು ಕಾಂಗ್ರೆಸ್ ಹೇಳುತ್ತಿದೆ.

ಕಾಂಗ್ರೆಸ್​ನ ಲಸಿಕೆ ವಿಚಾರದ ಟೀಕೆಗೆ ಬಿಜೆಪಿ ಪಕ್ಷವೂ ತಿರುಗೇಟು ನೀಡಿದೆ. ಕಾಂಗ್ರೆಸ್ ಅಧಿಕಾರದಲ್ಲಿ ಇರುವ ರಾಜ್ಯಗಳಲ್ಲಿಯೂ ಲಸಿಕೆ ನೀಡಿಕೆ ನಿಧಾನಗತಿಯಲ್ಲೇ ಸಾಗುತ್ತಿದೆ ಎಂದು ಬಿಜೆಪಿ ಹೇಳಿದೆ.

ಇದನ್ನೂ ಓದಿ: ಕೊವ್ಯಾಕ್ಸಿನ್ ಲಸಿಕೆ ಉತ್ಪಾದನೆ ಭರವಸೆ ಹುಸಿ; 10 ಕೋಟಿ ಬದಲು ಕೇವಲ 2.6 ಕೋಟಿ ಡೋಸ್ ಲಸಿಕೆ ಉತ್ಪಾದನೆ

Rafale deal ನರೇಂದ್ರ ಮೋದಿ ಸರ್ಕಾರ ಜೆಪಿಸಿ ತನಿಖೆಗೆ ಸಿದ್ಧವಿಲ್ಲ ಯಾಕೆ: ರಾಹುಲ್ ಗಾಂಧಿ

Published On - 9:05 pm, Sun, 11 July 21

ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ