AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೈನಿಕ ಕೊರೊನಾ ಸಂಖ್ಯೆ ಗಣನೀಯ ಇಳಿಕೆ, ನಾಲ್ಕು ತಿಂಗಳಲ್ಲಿ ಭಾರತೀಯರಿಗೆ ಸಮಾಧಾನಕರ ಸುದ್ದಿ!

ದೆಹಲಿ:ಕೊರೊನಾ ಆತಂಕದಲ್ಲಿರುವ ಭಾರತೀಯರಿಗೆ ಸಿಹಿಸುದ್ದಿಯೊಂದು ಸಿಕ್ಕಿದೆ. ಬರೋಬ್ಬರಿ ನಾಲ್ಕು ತಿಂಗಳ ಬಳಿಕ ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಇಂದು ಬೆಳಗ್ಗೆ 8 ಗಂಟೆಗೆ (ನವಂಬರ್ 17) 29,163 ಪ್ರಕರಣಗಳು ದಾಖಲಾಗುವ ಮೂಲಕ, ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾದಂತಾಗಿದೆ. ಈ ಮೂಲಕ, ಭಾರತದಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 88,74,290 ತಲುಪಿದೆ. ನಿನ್ನೆ (ನವೆಂಬರ್ 16) 30,568 ಕೊರೊನಾ ಪ್ರಕರಣಗಳು ದಾಖಲಾಗಿದ್ದವು. ಈ ಹಿಂದೆ, ಜುಲೈ 15ಕ್ಕೂ ಮೊದಲು ಕೊವಿಡ್ ಪ್ರಕರಣಗಳ ಸಂಖ್ಯೆ 30 ಸಾವಿರಕ್ಕಿಂತ […]

ದೈನಿಕ ಕೊರೊನಾ ಸಂಖ್ಯೆ ಗಣನೀಯ ಇಳಿಕೆ, ನಾಲ್ಕು ತಿಂಗಳಲ್ಲಿ ಭಾರತೀಯರಿಗೆ ಸಮಾಧಾನಕರ ಸುದ್ದಿ!
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 17, 2020 | 4:02 PM

Share

ದೆಹಲಿ:ಕೊರೊನಾ ಆತಂಕದಲ್ಲಿರುವ ಭಾರತೀಯರಿಗೆ ಸಿಹಿಸುದ್ದಿಯೊಂದು ಸಿಕ್ಕಿದೆ. ಬರೋಬ್ಬರಿ ನಾಲ್ಕು ತಿಂಗಳ ಬಳಿಕ ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಇಂದು ಬೆಳಗ್ಗೆ 8 ಗಂಟೆಗೆ (ನವಂಬರ್ 17) 29,163 ಪ್ರಕರಣಗಳು ದಾಖಲಾಗುವ ಮೂಲಕ, ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾದಂತಾಗಿದೆ. ಈ ಮೂಲಕ, ಭಾರತದಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 88,74,290 ತಲುಪಿದೆ. ನಿನ್ನೆ (ನವೆಂಬರ್ 16) 30,568 ಕೊರೊನಾ ಪ್ರಕರಣಗಳು ದಾಖಲಾಗಿದ್ದವು.

ಈ ಹಿಂದೆ, ಜುಲೈ 15ಕ್ಕೂ ಮೊದಲು ಕೊವಿಡ್ ಪ್ರಕರಣಗಳ ಸಂಖ್ಯೆ 30 ಸಾವಿರಕ್ಕಿಂತ ಕಡಿಮೆ ದಾಖಲಾಗುತ್ತಿದ್ದವು. ನಂತರ ಹೊಸ ಪ್ರಕರಣಗಳ ಸಂಖ್ಯೆ ಏರಿಕೆ ಆಗಿತ್ತೇ ಹೊರತು ಇಳಿಕೆ ಕಂಡಿರಲಿಲ್ಲ. ಇದೀಗ ನಾಲ್ಕು ತಿಂಗಳ ಬಳಿಕ ಕೊವಿಡ್ ಪ್ರಕರಣಗಳು 30,000ಕ್ಕಿಂತ ಕಡಿಮೆಯಾಗಿವೆ.

ಕೇಂದ್ರ ಆರೋಗ್ಯ ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿರುವಂತೆ, 82,90,370 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. 4,53,401 ಲಕ್ಷ ಕೊವಿಡ್ ಪ್ರಕರಣಗಳಿದ್ದು, ಸತತ ಏಳನೇ ದಿನ 5 ಲಕ್ಷಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಕೊರೊನಾ ಪೀಡಿತರಲ್ಲಿ, ಶೇ. 93.42 ಪ್ರತಿಷತ ಜನರು ಗುಣಮುಖರಾಗುತ್ತಿದ್ದು, ಶೇ. 1.47ರಷ್ಟು ರೋಗಿಗಳು ಮರಣ ಹೊಂದುತ್ತಿದ್ದಾರೆ.

ಕೊವಿಡ್​ನಿಂದ ಮರಣ ಹೊಂದುತ್ತಿರುವವರಲ್ಲಿ ಶೇ. 70ರಷ್ಟು ಪೀಡಿತರು ಇತರ ವೈದ್ಯಕೀಯ ಸಮಸ್ಯೆಗಳನ್ನು ಹೊಂದಿರುವವರಾಗಿದ್ದಾರೆ ಎಂದೂ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

Follow Us
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು