AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವೇಷ ಬಿತ್ತಿದ ಆರೋಪ; ನೂಪುರ್ ಶರ್ಮ, ನವೀನ್ ಜಿಂದಾಲ್, ಓವೈಸಿ ಸೇರಿ ಇತರರ ವಿರುದ್ಧ ಕೇಸ್ ದಾಖಲು

ದ್ವೇಷಪೂರಿತ ಭಾಷಣ, ಗುಂಪುಗಳಿಗೆ ಪ್ರಚೋದನೆ ಮತ್ತು ಸಮಾಜದ ಶಾಂತಿಯನ್ನು ಕದಡಿದ್ದಕ್ಕಾಗಿ ಬಿಜೆಪಿ ವಕ್ತಾರರು, ಸಂಸದರು, ಪತ್ರಕರ್ತರು, ಸಾಮಾಜಿಕ ಮಾಧ್ಯಮ ಬಳಕೆದಾರರು ಮತ್ತು ಧಾರ್ಮಿಕ ಸಂಘಟನೆಗಳ ಸದಸ್ಯರನ್ನು ಹೆಸರಿಸಿ 2 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ದ್ವೇಷ ಬಿತ್ತಿದ ಆರೋಪ; ನೂಪುರ್ ಶರ್ಮ, ನವೀನ್ ಜಿಂದಾಲ್, ಓವೈಸಿ ಸೇರಿ ಇತರರ ವಿರುದ್ಧ ಕೇಸ್ ದಾಖಲು
ನೂಪುರ್ ಶರ್ಮ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jun 09, 2022 | 1:12 PM

ನವದೆಹಲಿ: ಪ್ರವಾದಿ ಮೊಹಮ್ಮದ್ ಮತ್ತು ಇಸ್ಲಾಂ ಧರ್ಮದ ವಿರುದ್ಧ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮ (Nupur Sharma) ಟಿವಿ ಚಾನೆಲ್ ಚರ್ಚೆಯಲ್ಲಿ ಮತ್ತು ಬಿಜೆಪಿ ನಾಯಕ ನವೀನ್ ಜಿಂದಾಲ್ (Naeen Jindal) ಟ್ವಿಟ್ಟರ್​ನಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಬಳಿ ಅವರಿಬ್ಬರನ್ನೂ ಪಕ್ಷದಿಂದ ಅಮಾನತು ಮಾಡಲಾಗಿತ್ತು. ಬಿಜೆಪಿಯಿಂದ ಅಮಾನತಾದ ಎರಡು ವಾರಗಳ ನಂತರ ದ್ವೇಷಪೂರಿತ ಭಾಷಣ, ಗುಂಪುಗಳಿಗೆ ಪ್ರಚೋದನೆ ಮತ್ತು ಸಮಾಜದ ಶಾಂತಿಯನ್ನು ಕದಡುವ ಸನ್ನಿವೇಶಗಳನ್ನು ಸೃಷ್ಟಿಸಿದಕ್ಕಾಗಿ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಬಿಜೆಪಿ ವಕ್ತಾರರು, ಸಂಸದರು, ಪತ್ರಕರ್ತರು, ಸಾಮಾಜಿಕ ಮಾಧ್ಯಮ ಬಳಕೆದಾರರು ಮತ್ತು ಧಾರ್ಮಿಕ ಸಂಘಟನೆಗಳ ಸದಸ್ಯರನ್ನು ಹೆಸರಿಸಿ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಅಮಾನತುಗೊಂಡಿರುವ ಬಿಜೆಪಿ ವಕ್ತಾರ ನೂಪುರ್ ಶರ್ಮಾ ಮತ್ತು ಪಕ್ಷದ ದೆಹಲಿ ಮಾಧ್ಯಮ ವಿಭಾಗದ ಮುಖ್ಯಸ್ಥ ನವೀನ್ ಕುಮಾರ್ ಜಿಂದಾಲ್ ಅವರ ಆಕ್ಷೇಪಾರ್ಹ ಮತ್ತು ಕೋಮುವಾದಿ ಹೇಳಿಕೆಗಳಿಂದ ಉಂಟಾದ ಭಾರೀ ಆಕ್ರೋಶದ ಬಳಿಕ ಪೊಲೀಸರು ಈ ಕೇಸ್ ದಾಖಲಿಸಿದ್ದಾರೆ.

ನೂಪುರ್ ಶರ್ಮ ಮತ್ತು ನವೀನ್ ಜಿಂದಾಲ್ ಮಾತ್ರವಲ್ಲದೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಮತ್ತು ಸಂಸದ ಅಸಾದುದ್ದೀನ್ ಓವೈಸಿ ಮತ್ತು ಹರಿದ್ವಾರ ದ್ವೇಷ ಭಾಷಣ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ದ್ವೇಷಿ ಯತಿ ನರಸಿಂಹಾನಂದ ಅವರನ್ನು ಕೂಡ ದೆಹಲಿ ಪೊಲೀಸರು ಎಫ್​ಐಆರ್​​ನಲ್ಲಿ ಹೆಸರಿಸಿದ್ದಾರೆ.

ಇದನ್ನೂ ಓದಿ: Nupur Sharma: ಪ್ರವಾದಿ ಮೊಹಮ್ಮದ್ ಕುರಿತ ವಿವಾದಾತ್ಮಕ ಹೇಳಿಕೆಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮ ಯಾರು?

ಇಬ್ಬರು ಬಿಜೆಪಿ ನಾಯಕರ ಟೀಕೆಗಳನ್ನು 16ಕ್ಕೂ ಹೆಚ್ಚು ದೇಶಗಳು ಟೀಕಿಸಿದ ನಂತರ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆಯೇ ಅಥವಾ ದೆಹಲಿ ಪೊಲೀಸರ ವಿಶೇಷ ಸೆಲ್‌ನ ಸೈಬರ್ ಘಟಕವು ಸ್ವಯಂಪ್ರೇರಿತವಾಗಿ ಸಂಜ್ಞೆ ತೆಗೆದುಕೊಂಡಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. “ಸಾರ್ವಜನಿಕ ಶಾಂತಿ ಕಾಪಾಡುವ ವಿರುದ್ಧ ಸಂದೇಶಗಳನ್ನು ಪೋಸ್ಟ್ ಮಾಡುವ ಮತ್ತು ಹಂಚಿಕೊಳ್ಳುವ ಮತ್ತು ವಿವಿಧ ವಿಭಜಕ ರೇಖೆಗಳ ಆಧಾರದ ಮೇಲೆ ಜನರನ್ನು ಪ್ರಚೋದಿಸುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:11 pm, Thu, 9 June 22

ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?