AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತಿಯಾದ ನಾಲ್ಕೇ ದಿನಕ್ಕೆ ಕೋವಿಡ್ ವಾರಿಯರ್ ಸಾವು! ಎಲ್ಲಿ?

ಕೊರೊನಾ ಸೋಂಕಿತರ ಆರೈಕೆಯಲ್ಲಿ ನರ್ಸ್​ಗಳ ಪಾತ್ರ ದೊಡ್ಡದು. ತೆಲಂಗಾಣದಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡ್ತಿದ್ದ ಹೆಡ್ ನರ್ಸ್ ಒಬ್ಬರು ಸೋಂಕಿನಿಂದಲೇ ಮೃತಪಟ್ಟಿದ್ದಾರೆ. ವಿಪರ್ಯಾಸ ಅಂದ್ರೆ, ಸರ್ಕಾರಿ ಆಸ್ಪತ್ರೆಯಿಂದ 4 ದಿನದ ಹಿಂದೆಯಷ್ಟೇ ನಿವೃತ್ತಿ ಹೊಂದಿದ್ದರು. ಸೋಂಕು ಪತ್ತೆ ಬಳಿಕ ಎದೆರೋಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. 5 ಲಕ್ಷ ದಾಟಿದ ಸೋಂಕಿತರು ಭಾರತದಲ್ಲಿ ಕೊರೊನಾ ಸೋಂಕು ಅಬ್ಬರಿಸಿ ಬೊಬ್ಬರಿಯುತ್ತಲೇ ಇದೆ. ದೇಶದಲ್ಲಿ ಸೋಂಕಿತರ ಸಂಖ್ಯೆ 5 ಲಕ್ಷದ 9 ಸಾವಿರದ 446ಕ್ಕೆ ಏರಿಕೆಯಾಗಿದೆ. ಕಳೆದ 24 […]

ನಿವೃತ್ತಿಯಾದ ನಾಲ್ಕೇ ದಿನಕ್ಕೆ ಕೋವಿಡ್ ವಾರಿಯರ್ ಸಾವು! ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jun 27, 2020 | 4:51 PM

Share

ಕೊರೊನಾ ಸೋಂಕಿತರ ಆರೈಕೆಯಲ್ಲಿ ನರ್ಸ್​ಗಳ ಪಾತ್ರ ದೊಡ್ಡದು. ತೆಲಂಗಾಣದಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡ್ತಿದ್ದ ಹೆಡ್ ನರ್ಸ್ ಒಬ್ಬರು ಸೋಂಕಿನಿಂದಲೇ ಮೃತಪಟ್ಟಿದ್ದಾರೆ. ವಿಪರ್ಯಾಸ ಅಂದ್ರೆ, ಸರ್ಕಾರಿ ಆಸ್ಪತ್ರೆಯಿಂದ 4 ದಿನದ ಹಿಂದೆಯಷ್ಟೇ ನಿವೃತ್ತಿ ಹೊಂದಿದ್ದರು. ಸೋಂಕು ಪತ್ತೆ ಬಳಿಕ ಎದೆರೋಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

5 ಲಕ್ಷ ದಾಟಿದ ಸೋಂಕಿತರು ಭಾರತದಲ್ಲಿ ಕೊರೊನಾ ಸೋಂಕು ಅಬ್ಬರಿಸಿ ಬೊಬ್ಬರಿಯುತ್ತಲೇ ಇದೆ. ದೇಶದಲ್ಲಿ ಸೋಂಕಿತರ ಸಂಖ್ಯೆ 5 ಲಕ್ಷದ 9 ಸಾವಿರದ 446ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 18,552 ಮಂದಿಗೆ ಕೊರೊನ ಸೋಂಕು ದೃಢವಾಗಿದ್ದು, ‌ಸೋಂಕಿನಿಂದ ಈವರೆಗೂ 15,689 ಜನರು ಮೃತಪಟ್ಟಿದ್ದಾರೆ. 2,95, 917 ಜನರು ಸೋಂಕಿನಿಂದ ಗುಣಮುಖ ರಾದ್ರೆ, 1,97,840 ಜನರು ಸೋಂಕಿನಿಂದ ನರಳುತ್ತಿದ್ದಾರೆ.

ದೆಹಲಿಯಲ್ಲಿ ಟೆಸ್ಟಿಂಗ್ ಹೆಚ್ಚಳ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೆರೀತಿದೆ. ಈವರೆಗೂ ಸೋಂಕಿನ ಸಂಖ್ಯೆ 73,780 ದಾಟಿದ್ರೆ, 2 ಸಾವಿರಕ್ಕೂ ಅಧಿಕ ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಹೀಗಾಗಿ, ಕೊರೊನಾ ಟೆಸ್ಟಿಂಗ್ ಸೆಂಟರ್ ಹೆಚ್ಚಳ ಮಾಡಿದ್ದು, ನಿನ್ನೆ ಒಂದೇ ದಿನ 21,144 ಜನರಿಗೆ ಕೊರೊನಾ ತಪಾಸಣೆ ನಡೆಸಿರೋದಾಗಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಕೊರೊನಾ ಟೆಸ್ಟಿಂಗ್ ನಾಲ್ಕು ಪಟ್ಟು ಹೆಚ್ಚಾಗಿರೋದಾಗಿ ಕೇಜ್ರಿವಾಲ್ ಹೇಳಿದ್ದಾರೆ.

ನೂಡಲ್ ಅಧಿಕಾರಿಗಳಿಗೆ ಉಸ್ತುವಾರಿ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಒಂದೂವರೆ ಲಕ್ಷದತ್ತ ಮುಟ್ಟುತ್ತಿದ್ದು, 6,931 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಮುಂಬೈನಲ್ಲಿ ಹೆಚ್ಚು ಸೋಂಕಿತರು ಸಾವನ್ನಪ್ಪಿದ್ದರೂ ಸಹ, ಮುಂಬೈ ಪಾಲಿಕೆ ಮೃತರ ಸಂಖ್ಯೆ ನೀಡುವಲ್ಲಿ ಸುಳ್ಳು ಲೆಕ್ಕ ನೀಡ್ತಿದೆ ಅನ್ನೋ ಆರೋಪ ಎದುರಾಗಿದೆ. ಹೀಗಾಗಿ, ಜುಲೈ 1 ರಿಂದ ಬಿಎಂಸಿ ಆಸ್ಪತ್ರೆಗಳಲ್ಲಿರುವ ನೂಡಲ್ ಅಧಿಕಾರಿಗಳೇ ಕೊರೊನಾ ಮೃತರ ಬಗ್ಗೆ ಮಾಹಿತಿ ನೀಡಲಿದ್ದಾರೆ ಅಂತಾ ಬಾಂಬೆ ಮಹಾನಗರ ಪಾಲಿಕೆ ಹೇಳಿದೆ.

ವಿಮೆಗೆ ಆಸ್ಪತ್ರೆ ಬಿಲ್​ ಅಗತ್ಯವಿಲ್ಲ ಹೆಲ್ತ್ ಇನ್ಯೂರೆನ್ಸ್ ಮೊತ್ತವನ್ನ ಪಡೆಯಲು ಆಸ್ಪತ್ರೆಗಳಿಗೆ ದಾಖಲಾಗಲೇಬೇಕು ಅನ್ನೋ ನಿಯಮವಿದೆ. ಆದ್ರೆ, ಪಾಲಿಸಿಯ ಲಾಭ ಪಡೆಯಲು ದಿನದ 24 ಗಂಟೆಯಾದರೂ ಅಡ್ಮಿಟ್ ಆಗಬೇಕು. ಆದ್ರೆ, ಕೊರೊನಾ ಸೋಂಕಿತರಲ್ಲಿ ಕೆಲವರು ಆಸ್ಪತ್ರೆಗೆ ದಾಖಲಾಗದೇ, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವವರಿಗೂ ಇನ್ಸೂರೆನ್ಸ್ ಮೊತ್ತ ಪಡೆಯಲು ಅವಕಾಶ ನೀಡುವುದಾಗಿ ICICI ಜನರಲ್ ಇನ್ಸುರೆನ್ಸ್​ ಮುಖ್ಯಸ್ಥ ಸಂಜಯ್ ದತ್ತ ಹೇಳಿದ್ದಾರೆ.

ಇಂಧನ ಗಗನಕ್ಕೆ ಭಾರತೀಯರಿಗೆ ಒಂದ್ಕಡೆ ಇಂಧನ ಬರೆ ಎಳೆಯುತ್ತಿದ್ದರೆ, ಮತ್ತೊಂದ್ಕಡೆ ಇಂಧನ ಬೆರೆ ಬರೆ ಎಳೆಯುತ್ತಿದೆ. ದೇಶದಲ್ಲಿ ಕಳೆದ 21 ದಿನಗಳಿಂದ ಕೊರೊನಾ ಸೋಂಕು ನಿರಂತರವಾಗಿ ಹಬ್ಬುತ್ತಲೇ ಇದ್ದು, ಇಂದೂ ಕೂಡ ತೈಲ ಬೆಲೆ ಏರಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ದರ 25 ಪೈಸೆ ಏರಿಕೆಯಾಗಿದ್ರೆ, ಪ್ರತಿ ಲೀಟರ್ ಡೀಸೆಲ್ ದರ 21 ಪೈಸೆ ಏರಿಕೆಯಾಗಿದೆ. ಅಲ್ಲಿಗೆ 21 ದಿನದಲ್ಲಿ ಲೀಟರ್ ಪೆಟ್ರೋಲ್ ಬೆಲೆ ₹9.12 ಪೈಸೆಯಷ್ಟ ದುಬಾರಿಯಾದ್ರೆ, ಡೀಸೆಲ್‌ ಬೆಲೆ 10.77 ರೂಪಾಯಿ ಏರಿಕೆಯಾದಂತಾಗಿದೆ.

43 BSF ಸಿಬ್ಬಂದಿಗೆ ಸೋಂಕು ಕೊರೊನಾ ವಾರಿಯರ್ಸ್ ಪಾಲಿಗೆ ವೈರಸ್​ ವೈರಿಯಾಗಿ ಪರಿಣಮಿಸುತ್ತಿದೆ. ಇಂದೂ ಮತ್ತೆ 43 ಗಡಿ ಭದ್ರತಾ ಸಿಬ್ಬಂದಿಗೆ ಸೋಂಕು ತಗುಲಿದೆ. 24 ಗಂಟೆಗಳಲ್ಲೇ ಸೋಂಕು ಈ ಪರಿ ಹೆಚ್ಚಾಗಿದ್ದಕ್ಕೆ ಬಿಎಸ್​ಎಫ್​ನಲ್ಲಿ ಉಳಿದ ಸಿಬ್ಬಂದಿಗೂ ಸೋಂಕಿನ ಭೀತಿ ಶುರುವಾಗಿದೆ. ಈ ವರೆಗೂ 911 ಜನರಿಗೆ ಕೊರೊನಾ ಸೋಂಕು ಹಬ್ಬಿದ್ದು, 633 ಸಿಬ್ಬಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

Published On - 4:50 pm, Sat, 27 June 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ