AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ನರ್ಸ್​ ಮೇಲೆ ಅತ್ಯಾಚಾರ ಪ್ರಕರಣ, ವೈದ್ಯ ಸೇರಿದಂತೆ ಮೂವರ ಬಂಧನ

ನರ್ಸ್​ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ವೈದ್ಯ ಸೇರಿದಂತೆ ಮೂವರನ್ನು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ.ಆಕೆ ಕಳೆದ 10 ತಿಂಗಳಿನಿಂದ ನರ್ಸ್​ ಆಗಿ ಕೆಲಸ ಮಾಡುತ್ತಿದ್ದಳು, ಶನಿವಾರ ರಾತ್ರಿ ವೈದ್ಯರ ಪತ್ನಿ ಮನೆಯಲ್ಲಿರಲಿಲ್ಲ, ಆಕೆಯನ್ನು ಮಲಗುವ ಕೋಣೆಗೆ ಕರೆದಿದ್ದರು ಆಕೆ ನಿರಾಕರಿಸಿದಾಗ ಆತನ ಸಹಚರರು ಆಕೆಯನ್ನು ಬಲವಂತವಾಗಿ ರೂಮಿಗೆ ತಳ್ಳಿ ಬಾಗಿಲು ಹಾಕಿದ್ದರು.

Uttar Pradesh: ನರ್ಸ್​ ಮೇಲೆ ಅತ್ಯಾಚಾರ ಪ್ರಕರಣ, ವೈದ್ಯ ಸೇರಿದಂತೆ ಮೂವರ ಬಂಧನ
ಅತ್ಯಾಚಾರ
ನಯನಾ ರಾಜೀವ್
|

Updated on: Aug 20, 2024 | 2:39 PM

Share

ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನರ್ಸ್​ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಆಕೆಯನ್ನು ಆಸ್ಪತ್ರೆಯಲ್ಲಿ ಒತ್ತಾಯಾಳಾಗಿಟ್ಟುಕೊಂಡು ಅತ್ಯಾಚಾರವೆಸಗಿದ ಆರೋಪದ ಮೇಲೆ ವೈದ್ಯ ಹಾಗೂ ಆತನ ಇಬ್ಬರ ಸಹಚರರನ್ನು ಬಂಧಿಸಲಾಗಿದೆ.

ಜತೆಗೆ ಆಸ್ಪತ್ರೆಗೂ ಬೀಗ ಹಾಕಲಾಗಿದೆ. ಆಕೆ ಕಳೆದ 10 ತಿಂಗಳಿನಿಂದ ನರ್ಸ್​ ಆಗಿ ಕೆಲಸ ಮಾಡುತ್ತಿದ್ದಳು, ಶನಿವಾರ ರಾತ್ರಿ ವೈದ್ಯರ ಪತ್ನಿ ಮನೆಯಲ್ಲಿರಲಿಲ್ಲ, ಆಕೆಯನ್ನು ಮಲಗುವ ಕೋಣೆಗೆ ಕರೆದಿದ್ದರು ಆಕೆ ನಿರಾಕರಿಸಿದಾಗ ಆತನ ಸಹಚರರು ಆಕೆಯನ್ನು ಬಲವಂತವಾಗಿ ರೂಮಿಗೆ ತಳ್ಳಿ ಬಾಗಿಲು ಹಾಕಿದ್ದರು. ಬಳಿಕ ಆಕೆಯ ಮೇಲೆ ಅತ್ಯಾಚಾರ ನಡೆದಿತ್ತು.

ಘಟನೆಯ ಬಗ್ಗೆ ನರ್ಸ್ ತನ್ನ ಮನೆಯವರಿಗೆ ತಿಳಿಸಿದಾಗ, ಅವರು ಅವಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಇಡೀ ಘಟನೆಯ ಬಗ್ಗೆ ಪೊಲೀಸರಿಗೆ ತಿಳಿಸಿದ್ದಾರೆ. ವೈದ್ಯರು, ವಾರ್ಡ್ ಬಾಯ್ ಮತ್ತು ವೈದ್ಯ ಸೇರಿದಂತೆ ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು, ಡಾ.ಶಹನವಾಜ್ ಮತ್ತು ಆತನ ಇಬ್ಬರು ಸಹ ಆರೋಪಿಗಳನ್ನು ಸ್ಥಳದಿಂದ ಬಂಧಿಸಿದ್ದಾರೆ.

ನರ್ಸ್ ತಂದೆಯ ದೂರಿನ ಮೇರೆಗೆ ಪೊಲೀಸರು ಅತ್ಯಾಚಾರ ಮತ್ತು ಎಸ್‌ಸಿ ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನರ್ಸ್​​ನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.

ಮತ್ತಷ್ಟು ಓದಿ: ಕೋಲ್ಕತ್ತಾ ವೈದ್ಯೆ ಅತ್ಯಾಚಾರ, ಕೊಲೆ: ಸುರಕ್ಷತೆಗಾಗಿ ರಾಷ್ಟ್ರೀಯ ಕಾರ್ಯಪಡೆ ರಚನೆಗೆ ಸುಪ್ರೀಂ ಸೂಚನೆ

ಮುಖ್ಯ ವೈದ್ಯಾಧಿಕಾರಿ ಸೂಚನೆ ಮೇರೆಗೆ ಪೊಲೀಸರೊಂದಿಗೆ ಆರೋಗ್ಯ ಇಲಾಖೆ ತಂಡ ತಪಾಸಣೆ ನಡೆಸಿತು. ಸುಮಾರು ಒಂಬತ್ತು ರೋಗಿಗಳು ಆಸ್ಪತ್ರೆಯಲ್ಲಿ ದಾಖಲಾಗಿರುವುದು ಕಂಡುಬಂದಿದೆ. ಆರೋಪಿ ಡಾ.ಶಹನವಾಜ್ ಬಿಯುಎಂಎಸ್ ಪದವಿ ಪಡೆದಿದ್ದ ಎನ್ನಲಾಗಿದೆ. ಸದ್ಯ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದ್ದು, ಆಸ್ಪತ್ರೆಯನ್ನು ಸೀಲ್ ಮಾಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?