AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ರೋಗಿಯ ಮೊಬೈಲ್ ಕದ್ದ ನರ್ಸ್​; ಬಂಧಿಸಿ ವಿಚಾರಿಸಿದಾಗ ಹೊರಬಿತ್ತು ಮತ್ತೊಂದು ಸತ್ಯ

ಮೊಬೈಲ್​​ನ್ನು ತಾನೇ ಕದ್ದು, ಅದನ್ನು ಸ್ನೇಹಿತೆಗೆ ಕೊಟ್ಟಿದ್ದೇನೆ ಎಂದಿದ್ದಳು. ಪೊಲೀಸರು ತನಿಖೆ ನಡೆಸಿದ ಬಳಿಕ ಫೋನ್​​ನ್ನು ಸಲ್ಮಾನ್​ ಅಹ್ಮದ್​ ಎಂಬಾತ ಬಳಕೆ ಮಾಡುತ್ತಿರುವುದು ತಿಳಿದು ಬಂತು.

ಮೃತ ರೋಗಿಯ ಮೊಬೈಲ್ ಕದ್ದ ನರ್ಸ್​; ಬಂಧಿಸಿ ವಿಚಾರಿಸಿದಾಗ ಹೊರಬಿತ್ತು ಮತ್ತೊಂದು ಸತ್ಯ
ಹುಡುಗಿ ಮೊಬೈಲ್​ ವೈರಲ್​ ಮಾಡಿದ ವಿಚಾರ: ತಡರಾತ್ರಿ ಪೊಲೀಸರ ಭಯದಿಂದ ಮನೆಯಲ್ಲಿ ಯುವಕ ನೇಣಿಗೆ ಶರಣು
Lakshmi Hegde
|

Updated on: May 26, 2021 | 11:46 PM

Share

ಡೆಹ್ರಾಡೂನ್​: ಕೊವಿಡ್​ 19 ಸೋಂಕಿನಿಂದ ಮೃತಪಟ್ಟ ರೋಗಿಯ ಮೊಬೈಲ್​​ನ್ನು ಆತ ದಾಖಲಾಗಿದ್ದ ಆಸ್ಪತ್ರೆಯ ನರ್ಸ್ ಕದ್ದು, ಅರೆಸ್ಟ್​ ಆದ ಘಟನೆ ಉತ್ತರಾಖಂಡ್​​ನ ಡೆಹ್ರಾಡೂನ್​ನಲ್ಲಿ ನಡೆದಿದೆ. ಮೇ 18ರಂದು ಅಮನ್​ದೀಪ್​ ಗಿಲ್​​ ಎಂಬುವರು ಪೊಲೀಸರಿಗೆ ದೂರು ನೀಡಿದ್ದರು. ನನ್ನ ತಂದೆ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಮೃತಪಟ್ಟಿದ್ದಾರೆ. ಆದರೆ ಅವರ ಮೊಬೈಲ್ ಕಳವಾಗಿದೆ ಎಂದು ಹೇಳಿದ್ದರು. ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆಸ್ಪತ್ರೆಗೆ ಭೇಟಿಕೊಟ್ಟ ಸಂದರ್ಭದಲ್ಲಿ ನರ್ಸ್​ ಒಪ್ಪಿಕೊಂಡಿದ್ದಳು.

ಮೊಬೈಲ್​​ನ್ನು ತಾನೇ ಕದ್ದು, ಅದನ್ನು ಸ್ನೇಹಿತೆಗೆ ಕೊಟ್ಟಿದ್ದೇನೆ ಎಂದಿದ್ದಳು. ಪೊಲೀಸರು ತನಿಖೆ ನಡೆಸಿದ ಬಳಿಕ ಫೋನ್​​ನ್ನು ಸಲ್ಮಾನ್​ ಅಹ್ಮದ್​ ಎಂಬಾತ ಬಳಕೆ ಮಾಡುತ್ತಿರುವುದು ತಿಳಿದು ಬಂತು. ಆತನನ್ನು ಹಿಡಿದು ವಿಚಾರಿಸಿದಾಗ ನನಗೆ ಈ ಮೊಬೈಲ್​​ನ್ನು ರುಕೈಯಾ ಎಂಬುವಳಿಂದ ತೆಗೆದುಕೊಂಡಿದ್ದಾಗಿ ಹೇಳಿದ್ದ. ಅಲ್ಲಿಗೆ ನರ್ಸ್​ ರುಕೈಯಾ ಮೊಬೈಲ್​ ಕದ್ದು ತನ್ನ ಗೆಳೆಯ ಸಲ್ಮಾನ್​ಗೆ ಕೊಟ್ಟಿದ್ದು ಸಾಬೀತಾಗಿತ್ತು.

ಆದರೆ ರುಕೈಯಾ ವಿಚಾರಣೆಯ ನಂತರ ಮತ್ತೊಂದು ಸತ್ಯವೂ ಹೊರಬಂತು. ಬರೀ ಮೃತ ರೋಗಿಗಳ ಮೊಬೈಲ್​ ಅಷ್ಟೇ ಅಲ್ಲ, ಈ ಖಾಸಗಿ ಆಸ್ಪತ್ರೆಯಿಂದ ರೆಮ್​ಡಿಸಿವಿರ್​ ಸೇರಿ ಹಲವು ಔಷಧಿಗಳನ್ನೂ ಕದ್ದು ಸಾಗಿಸಿದ್ದೇನೆ. ಆದರೂ ಯಾರೂ ಏನೂ ಹೇಳಲಿಲ್ಲ ಎಂದು ಆಕೆ ಹೇಳಿಕೊಂಡಿದ್ದಾಳೆ. ಇನ್ನು ಈ ಆಸ್ಪತ್ರೆಯಿಂದ ನಮಗೆ ಯಾವುದೇ ದೂರು ಬರಲಿಲ್ಲ ಎಂದು ರಾಜ್​ಪುರ್ ಠಾಣೆಯ ಪೊಲೀಸ್ ಅಧಿಕಾರಿ ರಾಕೇಶ್​ ಶಾ ಕೂಡ ತಿಳಿಸಿದ್ದಾರೆ. ಸದ್ಯಕ್ಕೆ ಈ ನರ್ಸ್​​ನ್ನು ಕೆಲಸದಿಂದ ತೆಗೆದುಹಾಕಲಾಗಿದೆ.

ಇದನ್ನೂ ಓದಿ: ಸ್ಟಿರಾಯ್ಡ್​​​ ನೀಡುತ್ತಿರುವುದರಿಂದ ಬ್ಲ್ಯಾಕ್​​ ಫಂಗಸ್ ಹೆಚ್ಚಳ: ಆರೋಗ್ಯ ಸಚಿವ ಡಾ. ಸುಧಾಕರ್

Follow Us
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು