AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ರೋಗಿಯ ಮೊಬೈಲ್ ಕದ್ದ ನರ್ಸ್​; ಬಂಧಿಸಿ ವಿಚಾರಿಸಿದಾಗ ಹೊರಬಿತ್ತು ಮತ್ತೊಂದು ಸತ್ಯ

ಮೊಬೈಲ್​​ನ್ನು ತಾನೇ ಕದ್ದು, ಅದನ್ನು ಸ್ನೇಹಿತೆಗೆ ಕೊಟ್ಟಿದ್ದೇನೆ ಎಂದಿದ್ದಳು. ಪೊಲೀಸರು ತನಿಖೆ ನಡೆಸಿದ ಬಳಿಕ ಫೋನ್​​ನ್ನು ಸಲ್ಮಾನ್​ ಅಹ್ಮದ್​ ಎಂಬಾತ ಬಳಕೆ ಮಾಡುತ್ತಿರುವುದು ತಿಳಿದು ಬಂತು.

ಮೃತ ರೋಗಿಯ ಮೊಬೈಲ್ ಕದ್ದ ನರ್ಸ್​; ಬಂಧಿಸಿ ವಿಚಾರಿಸಿದಾಗ ಹೊರಬಿತ್ತು ಮತ್ತೊಂದು ಸತ್ಯ
ಹುಡುಗಿ ಮೊಬೈಲ್​ ವೈರಲ್​ ಮಾಡಿದ ವಿಚಾರ: ತಡರಾತ್ರಿ ಪೊಲೀಸರ ಭಯದಿಂದ ಮನೆಯಲ್ಲಿ ಯುವಕ ನೇಣಿಗೆ ಶರಣು
Lakshmi Hegde
|

Updated on: May 26, 2021 | 11:46 PM

Share

ಡೆಹ್ರಾಡೂನ್​: ಕೊವಿಡ್​ 19 ಸೋಂಕಿನಿಂದ ಮೃತಪಟ್ಟ ರೋಗಿಯ ಮೊಬೈಲ್​​ನ್ನು ಆತ ದಾಖಲಾಗಿದ್ದ ಆಸ್ಪತ್ರೆಯ ನರ್ಸ್ ಕದ್ದು, ಅರೆಸ್ಟ್​ ಆದ ಘಟನೆ ಉತ್ತರಾಖಂಡ್​​ನ ಡೆಹ್ರಾಡೂನ್​ನಲ್ಲಿ ನಡೆದಿದೆ. ಮೇ 18ರಂದು ಅಮನ್​ದೀಪ್​ ಗಿಲ್​​ ಎಂಬುವರು ಪೊಲೀಸರಿಗೆ ದೂರು ನೀಡಿದ್ದರು. ನನ್ನ ತಂದೆ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಮೃತಪಟ್ಟಿದ್ದಾರೆ. ಆದರೆ ಅವರ ಮೊಬೈಲ್ ಕಳವಾಗಿದೆ ಎಂದು ಹೇಳಿದ್ದರು. ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆಸ್ಪತ್ರೆಗೆ ಭೇಟಿಕೊಟ್ಟ ಸಂದರ್ಭದಲ್ಲಿ ನರ್ಸ್​ ಒಪ್ಪಿಕೊಂಡಿದ್ದಳು.

ಮೊಬೈಲ್​​ನ್ನು ತಾನೇ ಕದ್ದು, ಅದನ್ನು ಸ್ನೇಹಿತೆಗೆ ಕೊಟ್ಟಿದ್ದೇನೆ ಎಂದಿದ್ದಳು. ಪೊಲೀಸರು ತನಿಖೆ ನಡೆಸಿದ ಬಳಿಕ ಫೋನ್​​ನ್ನು ಸಲ್ಮಾನ್​ ಅಹ್ಮದ್​ ಎಂಬಾತ ಬಳಕೆ ಮಾಡುತ್ತಿರುವುದು ತಿಳಿದು ಬಂತು. ಆತನನ್ನು ಹಿಡಿದು ವಿಚಾರಿಸಿದಾಗ ನನಗೆ ಈ ಮೊಬೈಲ್​​ನ್ನು ರುಕೈಯಾ ಎಂಬುವಳಿಂದ ತೆಗೆದುಕೊಂಡಿದ್ದಾಗಿ ಹೇಳಿದ್ದ. ಅಲ್ಲಿಗೆ ನರ್ಸ್​ ರುಕೈಯಾ ಮೊಬೈಲ್​ ಕದ್ದು ತನ್ನ ಗೆಳೆಯ ಸಲ್ಮಾನ್​ಗೆ ಕೊಟ್ಟಿದ್ದು ಸಾಬೀತಾಗಿತ್ತು.

ಆದರೆ ರುಕೈಯಾ ವಿಚಾರಣೆಯ ನಂತರ ಮತ್ತೊಂದು ಸತ್ಯವೂ ಹೊರಬಂತು. ಬರೀ ಮೃತ ರೋಗಿಗಳ ಮೊಬೈಲ್​ ಅಷ್ಟೇ ಅಲ್ಲ, ಈ ಖಾಸಗಿ ಆಸ್ಪತ್ರೆಯಿಂದ ರೆಮ್​ಡಿಸಿವಿರ್​ ಸೇರಿ ಹಲವು ಔಷಧಿಗಳನ್ನೂ ಕದ್ದು ಸಾಗಿಸಿದ್ದೇನೆ. ಆದರೂ ಯಾರೂ ಏನೂ ಹೇಳಲಿಲ್ಲ ಎಂದು ಆಕೆ ಹೇಳಿಕೊಂಡಿದ್ದಾಳೆ. ಇನ್ನು ಈ ಆಸ್ಪತ್ರೆಯಿಂದ ನಮಗೆ ಯಾವುದೇ ದೂರು ಬರಲಿಲ್ಲ ಎಂದು ರಾಜ್​ಪುರ್ ಠಾಣೆಯ ಪೊಲೀಸ್ ಅಧಿಕಾರಿ ರಾಕೇಶ್​ ಶಾ ಕೂಡ ತಿಳಿಸಿದ್ದಾರೆ. ಸದ್ಯಕ್ಕೆ ಈ ನರ್ಸ್​​ನ್ನು ಕೆಲಸದಿಂದ ತೆಗೆದುಹಾಕಲಾಗಿದೆ.

ಇದನ್ನೂ ಓದಿ: ಸ್ಟಿರಾಯ್ಡ್​​​ ನೀಡುತ್ತಿರುವುದರಿಂದ ಬ್ಲ್ಯಾಕ್​​ ಫಂಗಸ್ ಹೆಚ್ಚಳ: ಆರೋಗ್ಯ ಸಚಿವ ಡಾ. ಸುಧಾಕರ್

Follow Us
Lakshmi Hegde
Lakshmi Hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!