AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5000ಕ್ಕೂ ಹೆಚ್ಚು ಮಹಿಳೆಯರಿಗೆ ಹೆರಿಗೆ ಮಾಡಿಸಿದ್ದ ನರ್ಸ್​ ತನ್ನದೇ ಹೆರಿಗೆ ವೇಳೆ ಸಾವು; ಕೊನೇ ಕ್ಷಣ ನಿಜಕ್ಕೂ ಭೀಕರ

ಹಿಂಗೋಲಿ ಜಿಲ್ಲೆಯ ಸಿವಿಲ್ ಆಸ್ಪತ್ರೆಯಲ್ಲಿ ಜ್ಯೋತಿ ಕಳೆದ ಎರಡು ವರ್ಷಗಳಿಂದ ಲೇಬರ್​ ರೂಂ ನರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಲ್ಲಿ ಕೆಲಸ ಮಾಡುವುದಕ್ಕೂ ಮೊದಲು ಎರಡು ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡಿದವರು.

5000ಕ್ಕೂ ಹೆಚ್ಚು ಮಹಿಳೆಯರಿಗೆ ಹೆರಿಗೆ ಮಾಡಿಸಿದ್ದ ನರ್ಸ್​ ತನ್ನದೇ ಹೆರಿಗೆ ವೇಳೆ ಸಾವು; ಕೊನೇ ಕ್ಷಣ ನಿಜಕ್ಕೂ ಭೀಕರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 17, 2021 | 3:14 PM

Share

ಸುಮಾರು 5000 ಮಹಿಳೆಯ ಹೆರಿಗೆ ಮಾಡಿಸಿದ್ದ ನರ್ಸ್​​ ತಮ್ಮ ಹೆರಿಗೆಯಲ್ಲಿ ಜೀವ ಕಳೆದುಕೊಂಡ ದುರದೃಷ್ಟಕರ ಘಟನೆ ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯಲ್ಲಿ ನಡೆದಿದೆ. ಜ್ಯೋತಿ ಗಾವ್ಲಿ (38) ಮೃತರು​​. ಇವರು ಸರ್ಕಾರಿ ಆಸ್ಪತ್ರೆಯೊಂದರಲ್ಲಿ ನರ್ಸ್​ ಆಗಿ ಕೆಲಸ ಮಾಡುತ್ತಿದ್ದರು. ತಮ್ಮ ಸೇವಾವಧಿ ಪ್ರಾರಂಭದಿಂದ ಇಲ್ಲಿಯವರೆಗೆ ಸುಮಾರು 5000 ಮಹಿಳೆಯರಿಗೆ ಹೆರಿಗೆ (ಸಹಜ ಮತ್ತು ಸಿಸೇರಿಯನ್​ ಎರಡೂ)  ಯಲ್ಲಿ ಸಹಾಯ ಮಾಡಿದ್ದಾರೆ.  ಅನೇಕರಿಗೆ ತಾವೇ ಮುಂದೆ ನಿಂತು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ. ಆದರೆ ದುರದೃಷ್ಟವೆಂದರೆ ತಾವು ಎರಡನೇ ಮಗುವಿಗೆ ಜನ್ಮ ನೀಡುವ ಸಂದರ್ಭದಲ್ಲಿ ಉಸಿರು ಚೆಲ್ಲಿದ್ದಾರೆ.  

ಜ್ಯೋತಿ ಆಸ್ಪತ್ರೆಯಲ್ಲಿ ಉಳಿದ ಸಿಬ್ಬಂದಿಗೂ ಅಚ್ಚುಮೆಚ್ಚಿನ ನರ್ಸ್ ಆಗಿದ್ದರು. ಹಾಗೇ, ಇಲ್ಲಿಗೆ ಬರುವ ರೋಗಿಗಳ ಪಾಲಿಗೂ ಆಪ್ತರಾಗುತ್ತಿದ್ದರು. ಅವರ ಆರೈಕೆಯನ್ನು ತುಂಬ ಪ್ರೀತಿಯಿಂದ ಮಾಡುತ್ತಿದ್ದರು. ಇವರು ಎರಡನೇ ಬಾರಿಗೆ ಗರ್ಭ ಧರಿಸಿ, ಇತ್ತೀಚೆಗಷ್ಟೇ ಹೆರಿಗೆಯ ದಿನ ಹತ್ತಿರ ಬಂದಿತ್ತು. ಹಾಗಾಗಿ ತಾವು ಕೆಲಸ ಮಾಡುತ್ತಿದ್ದ ಸರ್ಕಾರಿ ಆಸ್ಪತ್ರೆಯಲ್ಲೇ ದಾಖಲಾಗಿದ್ದರು. ಜ್ಯೋತಿಗೆ ಸಹಜ ಹೆರಿಗೆ ಆಗುವ ಸಾಧ್ಯತೆ ಕಡಿಮೆ ಇದ್ದ ಕಾರಣ ಸಿಸೇರಿಯನ್​ ಮೂಲಕ ಮಗುವನ್ನು ತೆಗೆಯಲಾಯಿತು. ಆ ಮಗು ತುಂಬ ಆರೋಗ್ಯವಾಗಿಯೂ ಇತ್ತು. ಆದರೆ ಹೆರಿಗೆಯಾಗುತ್ತಿದ್ದಂತೆ ನರ್ಸ್​ ಆರೋಗ್ಯ ಒಮ್ಮೆಲೇ ಹದಗೆಡಲು ಶುರುವಾಯಿತು. ರಕ್ತಸ್ರಾವವನ್ನು ನಿಲ್ಲಿಸಲು ಸಾಧ್ಯವಾಗಲೇ ಇಲ್ಲ. ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ನಂದೇಡ್​​ನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಅಲ್ಲಿ ಕರೆದುಕೊಂಡು ಹೋದರೂ ಪ್ರಯೋಜನವಾಗದೆ ವಿಪರೀತ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ.  ನಂದೇಡ್​​ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ಹೊತ್ತಿಗೆ ಜ್ಯೋತಿ ಆರೋಗ್ಯ ಅದೆಷ್ಟು ಕ್ಷೀಣಿಸಿತ್ತೆಂದರೆ ಅವರಿಗೆ ಉಸಿರಾಡಲೂ ಸಾಧ್ಯವಾಗುತ್ತಿರಲಿಲ್ಲ. ಅಲ್ಲಿನ ವೈದ್ಯರೂ ಏನೂ ಮಾಡಲಾಗದೆ ಔರಂಗಾಬಾದ್​ಗೆ ಕಳಿಸೋಣ ಎಂದು ಯೋಜನೆ ಹಾಕುತ್ತಿದ್ದಾಗಲೇ ಇತ್ತ ಜ್ಯೋತಿ ಪ್ರಾಣ ಹೋಗಿದೆ.

ಹಿಂಗೋಲಿ ಜಿಲ್ಲೆಯ ಸಿವಿಲ್ ಆಸ್ಪತ್ರೆಯಲ್ಲಿ ಜ್ಯೋತಿ ಕಳೆದ ಎರಡು ವರ್ಷಗಳಿಂದ ಲೇಬರ್​ ರೂಂ ನರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಲ್ಲಿ ಕೆಲಸ ಮಾಡುವುದಕ್ಕೂ ಮೊದಲು ಎರಡು ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡಿದವರು. ತುಂಬ ಅನುಭವಿ ನರ್ಸ್​. ದಿನಕ್ಕೆ ಏನಿಲ್ಲವೆಂದರೂ ನಮ್ಮ ಆಸ್ಪತ್ರೆಯಲ್ಲಿ 15 ಹೆರಿಗೆ ಮಾಡಿಸುತ್ತಿದ್ದರು. ಗರ್ಭಿಣಿಯಾಗಿದ್ದರೂ 9 ತಿಂಗಳು ತುಂಬುವವರೆಗೂ ಕೆಲಸ ಮಾಡಿದ್ದಾರೆ. ಹೆರಿಗೆ ನಂತರವೇ ರಜೆ ತೆಗೆದುಕೊಳ್ಳಲು ನಿರ್ಧಾರ ಮಾಡಿದ್ದರು ಎಂದು ಸಿವಿಲ್​ ಆಸ್ಪತ್ರೆಯ ರೆಸಿಡೆಂಟ್​ ವೈದ್ಯಕೀಯ ಅಧಿಕಾರಿ ಡಾ. ಗೋಪಾಲ್​ ಕದಮ್​ ಹೇಳಿದ್ದಾರೆ. ಜ್ಯೋತಿ ಗಾವ್ಲಿ ಸಾವಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: Photos: ಶಿವಣ್ಣನ ಜತೆ ವಿಶಾಲ್​ ಮಾತುಕತೆ; ಪುನೀತ್​ ಫೋಟೋಗೆ ಹಾರ ಹಾಕಿ ನಮಿಸಿದ ತಮಿಳು ನಟ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ