AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5000ಕ್ಕೂ ಹೆಚ್ಚು ಮಹಿಳೆಯರಿಗೆ ಹೆರಿಗೆ ಮಾಡಿಸಿದ್ದ ನರ್ಸ್​ ತನ್ನದೇ ಹೆರಿಗೆ ವೇಳೆ ಸಾವು; ಕೊನೇ ಕ್ಷಣ ನಿಜಕ್ಕೂ ಭೀಕರ

ಹಿಂಗೋಲಿ ಜಿಲ್ಲೆಯ ಸಿವಿಲ್ ಆಸ್ಪತ್ರೆಯಲ್ಲಿ ಜ್ಯೋತಿ ಕಳೆದ ಎರಡು ವರ್ಷಗಳಿಂದ ಲೇಬರ್​ ರೂಂ ನರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಲ್ಲಿ ಕೆಲಸ ಮಾಡುವುದಕ್ಕೂ ಮೊದಲು ಎರಡು ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡಿದವರು.

5000ಕ್ಕೂ ಹೆಚ್ಚು ಮಹಿಳೆಯರಿಗೆ ಹೆರಿಗೆ ಮಾಡಿಸಿದ್ದ ನರ್ಸ್​ ತನ್ನದೇ ಹೆರಿಗೆ ವೇಳೆ ಸಾವು; ಕೊನೇ ಕ್ಷಣ ನಿಜಕ್ಕೂ ಭೀಕರ
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on: Nov 17, 2021 | 3:14 PM

Share

ಸುಮಾರು 5000 ಮಹಿಳೆಯ ಹೆರಿಗೆ ಮಾಡಿಸಿದ್ದ ನರ್ಸ್​​ ತಮ್ಮ ಹೆರಿಗೆಯಲ್ಲಿ ಜೀವ ಕಳೆದುಕೊಂಡ ದುರದೃಷ್ಟಕರ ಘಟನೆ ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯಲ್ಲಿ ನಡೆದಿದೆ. ಜ್ಯೋತಿ ಗಾವ್ಲಿ (38) ಮೃತರು​​. ಇವರು ಸರ್ಕಾರಿ ಆಸ್ಪತ್ರೆಯೊಂದರಲ್ಲಿ ನರ್ಸ್​ ಆಗಿ ಕೆಲಸ ಮಾಡುತ್ತಿದ್ದರು. ತಮ್ಮ ಸೇವಾವಧಿ ಪ್ರಾರಂಭದಿಂದ ಇಲ್ಲಿಯವರೆಗೆ ಸುಮಾರು 5000 ಮಹಿಳೆಯರಿಗೆ ಹೆರಿಗೆ (ಸಹಜ ಮತ್ತು ಸಿಸೇರಿಯನ್​ ಎರಡೂ)  ಯಲ್ಲಿ ಸಹಾಯ ಮಾಡಿದ್ದಾರೆ.  ಅನೇಕರಿಗೆ ತಾವೇ ಮುಂದೆ ನಿಂತು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ. ಆದರೆ ದುರದೃಷ್ಟವೆಂದರೆ ತಾವು ಎರಡನೇ ಮಗುವಿಗೆ ಜನ್ಮ ನೀಡುವ ಸಂದರ್ಭದಲ್ಲಿ ಉಸಿರು ಚೆಲ್ಲಿದ್ದಾರೆ.  

ಜ್ಯೋತಿ ಆಸ್ಪತ್ರೆಯಲ್ಲಿ ಉಳಿದ ಸಿಬ್ಬಂದಿಗೂ ಅಚ್ಚುಮೆಚ್ಚಿನ ನರ್ಸ್ ಆಗಿದ್ದರು. ಹಾಗೇ, ಇಲ್ಲಿಗೆ ಬರುವ ರೋಗಿಗಳ ಪಾಲಿಗೂ ಆಪ್ತರಾಗುತ್ತಿದ್ದರು. ಅವರ ಆರೈಕೆಯನ್ನು ತುಂಬ ಪ್ರೀತಿಯಿಂದ ಮಾಡುತ್ತಿದ್ದರು. ಇವರು ಎರಡನೇ ಬಾರಿಗೆ ಗರ್ಭ ಧರಿಸಿ, ಇತ್ತೀಚೆಗಷ್ಟೇ ಹೆರಿಗೆಯ ದಿನ ಹತ್ತಿರ ಬಂದಿತ್ತು. ಹಾಗಾಗಿ ತಾವು ಕೆಲಸ ಮಾಡುತ್ತಿದ್ದ ಸರ್ಕಾರಿ ಆಸ್ಪತ್ರೆಯಲ್ಲೇ ದಾಖಲಾಗಿದ್ದರು. ಜ್ಯೋತಿಗೆ ಸಹಜ ಹೆರಿಗೆ ಆಗುವ ಸಾಧ್ಯತೆ ಕಡಿಮೆ ಇದ್ದ ಕಾರಣ ಸಿಸೇರಿಯನ್​ ಮೂಲಕ ಮಗುವನ್ನು ತೆಗೆಯಲಾಯಿತು. ಆ ಮಗು ತುಂಬ ಆರೋಗ್ಯವಾಗಿಯೂ ಇತ್ತು. ಆದರೆ ಹೆರಿಗೆಯಾಗುತ್ತಿದ್ದಂತೆ ನರ್ಸ್​ ಆರೋಗ್ಯ ಒಮ್ಮೆಲೇ ಹದಗೆಡಲು ಶುರುವಾಯಿತು. ರಕ್ತಸ್ರಾವವನ್ನು ನಿಲ್ಲಿಸಲು ಸಾಧ್ಯವಾಗಲೇ ಇಲ್ಲ. ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ನಂದೇಡ್​​ನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಅಲ್ಲಿ ಕರೆದುಕೊಂಡು ಹೋದರೂ ಪ್ರಯೋಜನವಾಗದೆ ವಿಪರೀತ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ.  ನಂದೇಡ್​​ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ಹೊತ್ತಿಗೆ ಜ್ಯೋತಿ ಆರೋಗ್ಯ ಅದೆಷ್ಟು ಕ್ಷೀಣಿಸಿತ್ತೆಂದರೆ ಅವರಿಗೆ ಉಸಿರಾಡಲೂ ಸಾಧ್ಯವಾಗುತ್ತಿರಲಿಲ್ಲ. ಅಲ್ಲಿನ ವೈದ್ಯರೂ ಏನೂ ಮಾಡಲಾಗದೆ ಔರಂಗಾಬಾದ್​ಗೆ ಕಳಿಸೋಣ ಎಂದು ಯೋಜನೆ ಹಾಕುತ್ತಿದ್ದಾಗಲೇ ಇತ್ತ ಜ್ಯೋತಿ ಪ್ರಾಣ ಹೋಗಿದೆ.

ಹಿಂಗೋಲಿ ಜಿಲ್ಲೆಯ ಸಿವಿಲ್ ಆಸ್ಪತ್ರೆಯಲ್ಲಿ ಜ್ಯೋತಿ ಕಳೆದ ಎರಡು ವರ್ಷಗಳಿಂದ ಲೇಬರ್​ ರೂಂ ನರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಲ್ಲಿ ಕೆಲಸ ಮಾಡುವುದಕ್ಕೂ ಮೊದಲು ಎರಡು ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡಿದವರು. ತುಂಬ ಅನುಭವಿ ನರ್ಸ್​. ದಿನಕ್ಕೆ ಏನಿಲ್ಲವೆಂದರೂ ನಮ್ಮ ಆಸ್ಪತ್ರೆಯಲ್ಲಿ 15 ಹೆರಿಗೆ ಮಾಡಿಸುತ್ತಿದ್ದರು. ಗರ್ಭಿಣಿಯಾಗಿದ್ದರೂ 9 ತಿಂಗಳು ತುಂಬುವವರೆಗೂ ಕೆಲಸ ಮಾಡಿದ್ದಾರೆ. ಹೆರಿಗೆ ನಂತರವೇ ರಜೆ ತೆಗೆದುಕೊಳ್ಳಲು ನಿರ್ಧಾರ ಮಾಡಿದ್ದರು ಎಂದು ಸಿವಿಲ್​ ಆಸ್ಪತ್ರೆಯ ರೆಸಿಡೆಂಟ್​ ವೈದ್ಯಕೀಯ ಅಧಿಕಾರಿ ಡಾ. ಗೋಪಾಲ್​ ಕದಮ್​ ಹೇಳಿದ್ದಾರೆ. ಜ್ಯೋತಿ ಗಾವ್ಲಿ ಸಾವಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: Photos: ಶಿವಣ್ಣನ ಜತೆ ವಿಶಾಲ್​ ಮಾತುಕತೆ; ಪುನೀತ್​ ಫೋಟೋಗೆ ಹಾರ ಹಾಕಿ ನಮಿಸಿದ ತಮಿಳು ನಟ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್