Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಸಿಡಿದೆದ್ದ ನರ್ಸ್​ಗಳು, ಹೊರಗುತ್ತಿಗೆ ನೀಡುವ ನಿರ್ಧಾರ ಹಿಂಪಡೆತಕ್ಕೆ ಒತ್ತಾಯಿಸಿ ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ

ನರ್ಸ್​ ನೇಮಕಾತಿಯನ್ನು ಖಾಸಗಿ ಏಜೆನ್ಸಿಗಳಿಗೆ ನೀಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಇಂದಿನಿಂದ ಮಹಾರಾಷ್ಟ್ರ ನರ್ಸ್​​ಗಳು ಅನಿರ್ದಿಷ್ಟಾವಧಿ ಮುಷ್ಕರ ಹೂಡಲಿದ್ದಾರೆ. ಪ್ರತಿಭಟನೆಯಲ್ಲಿ 15000 ನರ್ಸ್​ಗಳು ಭಾಗಿಯಾಗಲಿದ್ದಾರೆ.

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಸಿಡಿದೆದ್ದ ನರ್ಸ್​ಗಳು, ಹೊರಗುತ್ತಿಗೆ ನೀಡುವ ನಿರ್ಧಾರ ಹಿಂಪಡೆತಕ್ಕೆ ಒತ್ತಾಯಿಸಿ ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ
ಮಹಾರಾಷ್ಟ್ರದ ನರ್ಸ್​ಗಳು
Follow us
TV9 Web
| Updated By: Rakesh Nayak Manchi

Updated on:May 28, 2022 | 6:54 AM

ಮಹಾರಾಷ್ಟ್ರ: ನರ್ಸ್​ ನೇಮಕಾತಿಯನ್ನು ಖಾಸಗಿ ಏಜೆನ್ಸಿಗಳಿಗೆ ನೀಡುವ ಮಹಾರಾಷ್ಟ್ರ (Maharashtra) ಸರ್ಕಾರದ ನಿರ್ಧಾರವನ್ನು ಖಂಡಿಸಿ ಇಂದಿನಿಂದ ಮಹಾರಾಷ್ಟ್ರ ನರ್ಸ್ (Nurse)​​ಗಳು ಅನಿರ್ದಿಷ್ಟಾವಧಿ ಮುಷ್ಕರ ಹೂಡಲಿದ್ದಾರೆ. ನರ್ಸ್​ಗಳ ನೇಮಕಾತಿಯನ್ನು  ಖಾಸಗಿ ಏಜೆನ್ಸಿಗಳಿಗೆ ಹೊರಗುತ್ತಿಗೆ ನೀಡುವ ಬಗ್ಗೆ ಸರ್ಕಾರ ನಿರ್ಧರಿಸಿದೆ. ಇದನ್ನು ಹಿಂಪಡೆಯುವಂತೆ ಒತ್ತಾಯಗಳು, ಆಗ್ರಹಗಳು ಕೇಳಿಬಂದವು. ಇದೀಗ ನರ್ಸ್​ಗಳು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು, ಇಂದಿನಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ (Protest) ನಡೆಸಿ  ನಿರ್ಧಾರವನ್ನು ಹಿಂಪಡೆಯುವಂತೆ ಸರ್ಕಾರವನ್ನು ಒತ್ತಾಯಿಸಲಿದ್ದಾರೆ.

ಸರ್ಕಾರ ಹೊರಗುತ್ತಿಗೆ ನೀಡುವ ನಿರ್ಧಾರವನ್ನ ಬದಲಿಸಬೇಕು. ಏಕೆಂದರೆ, ಹೊರಗುತ್ತಿಗೆಯಿಂದ ನರ್ಸ್​ಗಳು ಶೋಷಣೆಗೆ ಗುರಿಯಾಗುತ್ತಾರೆ, ಹೊರಗುತ್ತಿಗೆಯಿಂದ ನರ್ಸ್​ಗಳಿಗೆ ಸಂಬಳ ಕಡಿಮೆ ಬರುತ್ತದೆ. ಹೀಗಾಗಿ ಹೊರಗುತ್ತಿಗೆ ನಿರ್ಧಾರ ಕೈಬಿಡುವಂತೆ ನರ್ಸ್​ಗಳು ಸರ್ಕಾರವನ್ನು ಒತ್ತಾಯಿಸಲಿದ್ದಾರೆ. ಇಂದಿನಿಂದ ಆರಂಭಗೊಳ್ಳುವ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಮುಂಬೈನಲ್ಲಿರುವ 1500 ನರ್ಸ್​ಗಳು ಸೇರಿದಂತೆ ಸುಮಾರು 15ಸಾವಿರ ನರ್ಸ್​ಗಳು ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ‘ರಾಜಕೀಯದಲ್ಲಿ ಇರುವುದಕ್ಕಿಂತ ಮನೆಗೆ ಹೋಗಿ ಅಡುಗೆ ಮಾಡಿ’: ಸುಪ್ರಿಯಾ ಸುಳೆ ವಿರುದ್ಧ ಮಹಾರಾಷ್ಟ್ರದ ಬಿಜೆಪಿ ಅಧ್ಯಕ್ಷನ ಹೇಳಿಕೆಗೆ ವ್ಯಾಪಕ ಖಂಡನೆ

ಸರ್ಕಾರದ ನಿರ್ಧಾರವನ್ನು ಖಂಡಿಸಿ ಮಹಾರಾಷ್ಟ್ರ ರಾಜ್ಯ ದಾದಿಯರ ಸಂಘ (MSNA) ಮೇ 27-28 ರಂದು ಎರಡು ದಿನಗಳ ಮುಷ್ಕರಕ್ಕೆ ಕರೆ ನೀಡಿತ್ತು. ಈ ಬಗ್ಗೆ ಶುಕ್ರವಾರ ಮಾಹಿತಿ ನೀಡಿದ ಎಂಎಸ್‌ಎನ್‌ಎ ಪ್ರಧಾನ ಕಾರ್ಯದರ್ಶಿ ಸುಮಿತ್ರಾ ತೋಟೆ, “ನಮ್ಮ ಯಾವುದೇ ಬೇಡಿಕೆಗಳನ್ನು ಈಡೇರಿಸಲಾಗಿಲ್ಲ. ಆದ್ದರಿಂದ ನಾವು ಮೇ 28 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದೇವೆ” ಎಂದರು.

”ನರ್ಸ್‌ಗಳ ನೇಮಕಾತಿಯನ್ನು ಹೊರಗುತ್ತಿಗೆ ನೀಡಿದರೆ ಅವರು ಶೋಷಣೆಗೆ ಗುರಿಯಾಗುತ್ತಾರೆ ಮತ್ತು ಕಡಿಮೆ ಸಂಭಾವನೆ ಪಡೆಯುತ್ತಾರೆ. ಮುಂಬೈನಲ್ಲಿ ಸುಮಾರು 1,500 ಸೇರಿದಂತೆ ಸರ್ಕಾರಿ ಆಸ್ಪತ್ರೆಗಳ 15,000 ಕ್ಕೂ ಹೆಚ್ಚು ದಾದಿಯರು ಮುಷ್ಕರ ನಡೆಸಲಿದ್ದಾರೆ. ಮಹಾರಾಷ್ಟ್ರ ರಾಜ್ಯ ದಾದಿಯರ ಸಂಘ ತನ್ನ ಸದಸ್ಯರಿಗೆ ನರ್ಸಿಂಗ್ ಮತ್ತು ಶಿಕ್ಷಣ ಭತ್ಯೆಗಳನ್ನು ಪಾವತಿಸಲು ಕೇಳಿದೆ. ಕೇಂದ್ರ ಮತ್ತು ಕೆಲವು ರಾಜ್ಯಗಳು 7,200 ರೂ. ಶುಶ್ರೂಷಾ ಭತ್ಯೆಯನ್ನು ಪಾವತಿಸುತ್ತವೆ. ಇದರ ಪ್ರಯೋಜನವನ್ನು ಮಹಾರಾಷ್ಟ್ರದ ದಾದಿಯರಿಗೂ ವಿಸ್ತರಿಸಬೇಕು ಎಂದು ಟೋಟೆ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ.ವೇಣುಗೋಪಾಲ್ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ನಿನ್ನೆ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಮಹಾರಾಷ್ಟ್ರ ಶುಶ್ರೂಷಕರ ಸಂಘದ ಕಾರ್ಯದರ್ಶಿ, ”ನೇಮಕಾತಿ ಪ್ರಕ್ರಿಯೆ ಹೊರಗುತ್ತಿಗೆ ನೀಡಿದರೆ ಸಿಬ್ಬಂದಿ ಶೋಷಣೆ ಹೆಚ್ಚಾಗಲಿದೆ” ಎಂದರು. ನರ್ಸ್‌ಗಳು ಕೂಡ ತಮ್ಮ ವೇತನ ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದಾರೆ. ಶುಕ್ರವಾರ ರಾಜ್ಯದಲ್ಲಿ ನರ್ಸ್‌ಗಳ ಮುಷ್ಕರ ಐದನೇ ದಿನವಾಗಿತ್ತು. ಮುಷ್ಕರ ನಿರತ ಸಿಬ್ಬಂದಿ ಪ್ರಕಾರ, ನಿರ್ಧಾರವನ್ನು ಜಾರಿಗೊಳಿಸಿದರೆ ಭತ್ಯೆಯಲ್ಲಿ ಇಳಿಕೆಗೆ ಕಾರಣವಾಗುತ್ತದೆ. ತುರ್ತು ಸೇವೆ ಹೊರತುಪಡಿಸಿ ಬೇರೆ ಯಾವುದೇ ಸೇವೆ ನೀಡುತ್ತಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ.ವೇಣುಗೋಪಾಲ್ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:54 am, Sat, 28 May 22

ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ