AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ರತ್ನಗಿರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ, ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ

ಮಹಾರಾಷ್ಟ್ರದಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ಬೆಳಕಿಗೆ ಬಮದಿದೆ. ವಿದ್ಯಾರ್ಥಿನಿ ದೇಹದ ತುಂಬಾ ಗಾಯಗಳಾಗಿದ್ದು, ಆಕೆ ಮೈದಾನದ ಸಮೀಪ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದಳು.

ಮಹಾರಾಷ್ಟ್ರ: ರತ್ನಗಿರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ, ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
ವೈದ್ಯರು
ನಯನಾ ರಾಜೀವ್
|

Updated on: Aug 27, 2024 | 10:20 AM

Share

ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಮಹಾರಾಷ್ಟ್ರದ ರತ್ನಗಿರಿಯಲ್ಲಿ ನಡೆದಿದೆ. ವಿದ್ಯಾರ್ಥಿನಿ ಚಂಪಕ್ ಮೈದಾನದ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಆಕೆ ತೀವ್ರವಾಗಿ ಗಾಯಗೊಂಡಿದ್ದಳು. ಆಕೆಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಕೋಲ್ಕತ್ತಾದ ಆರ್​ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ಕೆಲವು ದಿನಗಳ ಹಿಂದೆ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ, ಕೊಲೆ ಇಡೀ ದೇಶವನ್ನೇ ನಿದ್ದೆಗೆಡುವಂತೆ ಮಾಡಿದೆ., ಆಸ್ಪತ್ರೆಗಳಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂದು ಹೇಳಲಾಗುತ್ತಿದೆ. ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಈ ಹೊತ್ತಲ್ಲೇ ನರ್ಸಿಂಗ್​ ವಿದ್ಯಾರ್ಥಿನಿ ಮೇಲೆ ನಡೆದ ದೌರ್ಜನ್ಯ ಆಕ್ರೋಶಕ್ಕೆ ಕಾರಣವಾಗಿದೆ.

ಆಸ್ಪತ್ರೆಯ ಮೂಲಗಳ ಪ್ರಕಾರ, ವಿದ್ಯಾರ್ಥಿನಿಗೆ ಅನೇಕ ಗಾಯಗಳಾಗಿದ್ದು, ಅತ್ಯಾಚಾರ ನಡೆದಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಈ ಘಟನೆಯು ರತ್ನಗಿರಿಯ ನರ್ಸಿಂಗ್ ಸಮುದಾಯದಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ. ದಾಳಿಯಿಂದ ತೀವ್ರ ಕೋಪಗೊಂಡ ನರ್ಸ್‌ಗಳು ಮತ್ತು ಆಸ್ಪತ್ರೆ ಸಿಬ್ಬಂದಿ, ಅಪರಾಧಕ್ಕೆ ಕಾರಣರಾದವರಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿ ಆಸ್ಪತ್ರೆಯ ಹೊರಗೆ ಪ್ರತಿಭಟನೆ ನಡೆಸಿದರು.

ಮತ್ತಷ್ಟು ಓದಿ: 70 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ, 2 ದಿನಗಳ ಕಾಲ ಶವದ ಜತೆ ಕಳೆದ ವ್ಯಕ್ತಿ

ಪ್ರತಿಭಟನೆಗಳು ಉಲ್ಬಣಗೊಂಡಿದ್ದರಿಂದ ಆಸ್ಪತ್ರೆಯ ಸಿಬ್ಬಂದಿ ಇತರ ಬೆಂಬಲಿಗರೊಂದಿಗೆ ಬೀದಿಗಿಳಿದು ರತ್ನಗಿರಿಯ ಹಲವು ಭಾಗಗಳಲ್ಲಿ ಸಂಚಾರವನ್ನು ನಿರ್ಬಂಧಿಸಿದರು. ಪ್ರತಿಭಟನಾಕಾರರು ಬ್ಯಾನರ್‌ಗಳನ್ನು ಹಿಡಿದು ಘೋಷಣೆಗಳನ್ನು ಕೂಗಿ, ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಈ ಪರಿಸ್ಥಿತಿಯು ನಗರದಲ್ಲಿ ಗಮನಾರ್ಹ ಅಸ್ತವ್ಯಸ್ತತೆಯನ್ನು ಸೃಷ್ಟಿಸಿದೆ, ಅಧಿಕಾರಿಗಳು ತನಿಖೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಭರವಸೆ ನೀಡಿ, ಶಾಂತಿಯಿಂದ ವರ್ತಿಸುವಂತೆ ಮನವಿ ಮಾಡಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ