AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆರಿಗೆ ಆಗಿ ತಿಂಗಳಾಗುವ ಮೊದಲೇ ಕೆಲಸಕ್ಕೆ ಹಾಜರಾದ ಎಂಪಿ ನುಸ್ರತ್​ ಜಹಾನ್; ಮಗುವಿನ ತಂದೆ ಬಗ್ಗೆ ಮಾತನಾಡಿದ ನಟಿ

ನುಸ್ರತ್​ ಜಹಾನ್​ ವೈಯಕ್ತಿಕ ಬದುಕಿನ ಬಗ್ಗೆ ಸೋಷಿಯಲ್​ ಮೀಡಿಯಾದಲ್ಲಿ ಹಲವರು ವ್ಯಂಗ್ಯ ಮಾಡಿದ್ದರು. ನಟಿಗೆ ಕಾಲೆಳೆದಿದ್ದರು. ಮಗುವಿನ ತಂದೆಯ ಬಗ್ಗೆಯೂ ಪ್ರಶ್ನೆ ಮಾಡಿದ್ದರು.

ಹೆರಿಗೆ ಆಗಿ ತಿಂಗಳಾಗುವ ಮೊದಲೇ ಕೆಲಸಕ್ಕೆ ಹಾಜರಾದ ಎಂಪಿ ನುಸ್ರತ್​ ಜಹಾನ್; ಮಗುವಿನ ತಂದೆ ಬಗ್ಗೆ ಮಾತನಾಡಿದ ನಟಿ
ಮಗು ಹುಟ್ಟಿದ ಬಳಿಕ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ನುಸ್ರತ್ ಜಹಾನ್​
TV9 Web
| Edited By: |

Updated on:Sep 09, 2021 | 9:08 AM

Share

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್​ ಸಂಸದೆ (TMC MP), ನುಸ್ರತ್​ ಜಹಾನ್​ (Nusrat Jahan)ಕಳೆದ ನವೆಂಬರ್​ನಲ್ಲಿ ಪತಿಯಿಂದ ಬೇರೆಯಾಗಿದ್ದಾರೆ. ಹಾಗೇ ಆಗಸ್ಟ್​ 26ರಂದು ಒಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಹುಟ್ಟಿ ಒಂದು ತಿಂಗಳೂ ಕಳೆದಿಲ್ಲ..ಜಹಾನ್​ ಇದೀಗ ತಮ್ಮ ಕೆಲಸ ಶುರು ಮಾಡಿದ್ದಾರೆ. ಮಗು ಜನಿಸಿದ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ನುಸ್ರತ್ ಜಹಾನ್​ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಹಾಗೇ ಮಗುವಿನ ತಂದೆಯ ಬಗ್ಗೆಯೂ ಮಾತನಾಡಿದ್ದಾರೆ.  

ನುಸ್ರತ್​ ಜಹಾನ್​ ವೈಯಕ್ತಿಕ ಬದುಕಿನ ಬಗ್ಗೆ ಸೋಷಿಯಲ್​ ಮೀಡಿಯಾದಲ್ಲಿ ಹಲವರು ವ್ಯಂಗ್ಯ ಮಾಡಿದ್ದರು. ನಟಿಗೆ ಕಾಲೆಳೆದಿದ್ದರು. ಮಗುವಿನ ತಂದೆಯ ಬಗ್ಗೆಯೂ ಪ್ರಶ್ನೆ ಮಾಡಿದ್ದರು. ತಮ್ಮ ಇನ್​ಸ್ಟಾಗ್ರಾಂ ಪೋಸ್ಟ್​ ಮೂಲಕ ಉತ್ತರ ನೀಡಿದ್ದ ನುಸ್ರತ್​ ನಿನ್ನೆ ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಅವರಾಗಿಯೇ ಮಗುವನ ತಂದೆ ಬಗ್ಗೆ ಮಾತು ತೆಗೆದರು. ‘ನಿಮ್ಮ ಮಗುವನ್ನು ಯಾವಾಗ ಸಾರ್ವಜನಿಕವಾಗಿ ತೋರಿಸುತ್ತೀರಿ’ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ನುಸ್ರತ್​ ಜಹಾನ್​, ‘ಈ ಪ್ರಶ್ನೆಯನ್ನು ನನ್ನ ಮಗುವಿನ ತಂದೆಯ ಬಳಿಯೇ ಕೇಳಬೇಕು..ಯಾಕೆಂದರೆ ಈ ಸಮಯದಲ್ಲಂತೂ ಅವರು ಹೊರಗಿನ ಯಾರಿಗೂ ಮಗುವನ್ನು ನೋಡಲು ಬಿಡುತ್ತಿಲ್ಲ’ ಎಂದು ಹೇಳಿದರು.

ತುಂಬು ಗರ್ಭಿಣಿಯಾಗಿದ್ದ ನುಸ್ರತ್ ಜಹಾನ್​ರನ್ನು ಆಗಸ್ಟ್​ 25ರಂದು ಬೆಂಗಾಳಿ ನಟ ಯಶ್​ ದಾಸ್​​ಗುಪ್ತಾ ಕೋಲ್ಕತ್ತದ ನಿಯೋಟಾ ಆಸ್ಪತ್ರೆಗೆ ದಾಖಲಿಸಿದ್ದರು. ಹೆರಿಗೆಯಾದ ಬಳಿಕವೂ ಕೂಡ, ನುಸ್ರತ್​ ಮತ್ತು ಆಕೆಯ ಮಗು ಇಬ್ಬರೂ ಚೆನ್ನಾಗಿದ್ದಾರೆ ಎಂದು ಮಾಹಿತಿ ನೀಡಿದ್ದರು. ನುಸ್ರತ್ ಜಹಾನ್​ 2019ರ ಜೂನ್​ 19ರಲ್ಲಿ ಟರ್ಕಿಯಲ್ಲಿ  ನಿಖಿಲ್​ ಜೈನ್ ಎಂಬುವರನ್ನು ವಿವಾಹವಾಗಿದ್ದರು. ಆದರೆ 2021ರಲ್ಲಿ ತಮ್ಮ ಮದುವೆ ಜೀವನದ ಬಗ್ಗೆ ಮಾತನಾಡಿದ್ದ ಅವರು, ನಾವಿಬ್ಬರೂ ಟರ್ಕಿಯಲ್ಲಿ ವಿವಾಹವಾಗಿದ್ದೇವೆ. ಆದರೆ ಭಾರತದ ಕಾನೂನಿನ ಅನ್ವಯ ಆ ವಿವಾಹ ಮಾನ್ಯವಾಗಿಲ್ಲ. ನಾವು 2020ರ ನವೆಂಬರ್​​ನಿಂದ ಪ್ರತ್ಯೇಕವಾಗಿದ್ದೇವೆ ಎಂದು ತಿಳಿಸಿದ್ದರು.

ಇದನ್ನೂ ಓದಿ:  ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ- 20 ವರ್ಷ ಕಠಿಣ ಜೈಲು; ಮೈಸೂರಿನಲ್ಲಿ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು

ರಜತ್​ ಬೇಡಿ ಕಾರು ಡಿಕ್ಕಿಯಿಂದ ಗಾಯಗೊಂಡಿದ್ದ ವ್ಯಕ್ತಿ ನಿಧನ; ಬಾಲಿವುಡ್​ ನಟನಿಗೆ ಹೆಚ್ಚಿತು ಸಂಕಷ್ಟ

(Nusrat Jahan opens up about her child’s father in Public At West Bengal)

Published On - 8:56 am, Thu, 9 September 21

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ