AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆರಿಗೆ ಆಗಿ ತಿಂಗಳಾಗುವ ಮೊದಲೇ ಕೆಲಸಕ್ಕೆ ಹಾಜರಾದ ಎಂಪಿ ನುಸ್ರತ್​ ಜಹಾನ್; ಮಗುವಿನ ತಂದೆ ಬಗ್ಗೆ ಮಾತನಾಡಿದ ನಟಿ

ನುಸ್ರತ್​ ಜಹಾನ್​ ವೈಯಕ್ತಿಕ ಬದುಕಿನ ಬಗ್ಗೆ ಸೋಷಿಯಲ್​ ಮೀಡಿಯಾದಲ್ಲಿ ಹಲವರು ವ್ಯಂಗ್ಯ ಮಾಡಿದ್ದರು. ನಟಿಗೆ ಕಾಲೆಳೆದಿದ್ದರು. ಮಗುವಿನ ತಂದೆಯ ಬಗ್ಗೆಯೂ ಪ್ರಶ್ನೆ ಮಾಡಿದ್ದರು.

ಹೆರಿಗೆ ಆಗಿ ತಿಂಗಳಾಗುವ ಮೊದಲೇ ಕೆಲಸಕ್ಕೆ ಹಾಜರಾದ ಎಂಪಿ ನುಸ್ರತ್​ ಜಹಾನ್; ಮಗುವಿನ ತಂದೆ ಬಗ್ಗೆ ಮಾತನಾಡಿದ ನಟಿ
ಮಗು ಹುಟ್ಟಿದ ಬಳಿಕ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ನುಸ್ರತ್ ಜಹಾನ್​
TV9 Web
| Edited By: |

Updated on:Sep 09, 2021 | 9:08 AM

Share

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್​ ಸಂಸದೆ (TMC MP), ನುಸ್ರತ್​ ಜಹಾನ್​ (Nusrat Jahan)ಕಳೆದ ನವೆಂಬರ್​ನಲ್ಲಿ ಪತಿಯಿಂದ ಬೇರೆಯಾಗಿದ್ದಾರೆ. ಹಾಗೇ ಆಗಸ್ಟ್​ 26ರಂದು ಒಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಹುಟ್ಟಿ ಒಂದು ತಿಂಗಳೂ ಕಳೆದಿಲ್ಲ..ಜಹಾನ್​ ಇದೀಗ ತಮ್ಮ ಕೆಲಸ ಶುರು ಮಾಡಿದ್ದಾರೆ. ಮಗು ಜನಿಸಿದ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ನುಸ್ರತ್ ಜಹಾನ್​ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಹಾಗೇ ಮಗುವಿನ ತಂದೆಯ ಬಗ್ಗೆಯೂ ಮಾತನಾಡಿದ್ದಾರೆ.  

ನುಸ್ರತ್​ ಜಹಾನ್​ ವೈಯಕ್ತಿಕ ಬದುಕಿನ ಬಗ್ಗೆ ಸೋಷಿಯಲ್​ ಮೀಡಿಯಾದಲ್ಲಿ ಹಲವರು ವ್ಯಂಗ್ಯ ಮಾಡಿದ್ದರು. ನಟಿಗೆ ಕಾಲೆಳೆದಿದ್ದರು. ಮಗುವಿನ ತಂದೆಯ ಬಗ್ಗೆಯೂ ಪ್ರಶ್ನೆ ಮಾಡಿದ್ದರು. ತಮ್ಮ ಇನ್​ಸ್ಟಾಗ್ರಾಂ ಪೋಸ್ಟ್​ ಮೂಲಕ ಉತ್ತರ ನೀಡಿದ್ದ ನುಸ್ರತ್​ ನಿನ್ನೆ ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಅವರಾಗಿಯೇ ಮಗುವನ ತಂದೆ ಬಗ್ಗೆ ಮಾತು ತೆಗೆದರು. ‘ನಿಮ್ಮ ಮಗುವನ್ನು ಯಾವಾಗ ಸಾರ್ವಜನಿಕವಾಗಿ ತೋರಿಸುತ್ತೀರಿ’ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ನುಸ್ರತ್​ ಜಹಾನ್​, ‘ಈ ಪ್ರಶ್ನೆಯನ್ನು ನನ್ನ ಮಗುವಿನ ತಂದೆಯ ಬಳಿಯೇ ಕೇಳಬೇಕು..ಯಾಕೆಂದರೆ ಈ ಸಮಯದಲ್ಲಂತೂ ಅವರು ಹೊರಗಿನ ಯಾರಿಗೂ ಮಗುವನ್ನು ನೋಡಲು ಬಿಡುತ್ತಿಲ್ಲ’ ಎಂದು ಹೇಳಿದರು.

ತುಂಬು ಗರ್ಭಿಣಿಯಾಗಿದ್ದ ನುಸ್ರತ್ ಜಹಾನ್​ರನ್ನು ಆಗಸ್ಟ್​ 25ರಂದು ಬೆಂಗಾಳಿ ನಟ ಯಶ್​ ದಾಸ್​​ಗುಪ್ತಾ ಕೋಲ್ಕತ್ತದ ನಿಯೋಟಾ ಆಸ್ಪತ್ರೆಗೆ ದಾಖಲಿಸಿದ್ದರು. ಹೆರಿಗೆಯಾದ ಬಳಿಕವೂ ಕೂಡ, ನುಸ್ರತ್​ ಮತ್ತು ಆಕೆಯ ಮಗು ಇಬ್ಬರೂ ಚೆನ್ನಾಗಿದ್ದಾರೆ ಎಂದು ಮಾಹಿತಿ ನೀಡಿದ್ದರು. ನುಸ್ರತ್ ಜಹಾನ್​ 2019ರ ಜೂನ್​ 19ರಲ್ಲಿ ಟರ್ಕಿಯಲ್ಲಿ  ನಿಖಿಲ್​ ಜೈನ್ ಎಂಬುವರನ್ನು ವಿವಾಹವಾಗಿದ್ದರು. ಆದರೆ 2021ರಲ್ಲಿ ತಮ್ಮ ಮದುವೆ ಜೀವನದ ಬಗ್ಗೆ ಮಾತನಾಡಿದ್ದ ಅವರು, ನಾವಿಬ್ಬರೂ ಟರ್ಕಿಯಲ್ಲಿ ವಿವಾಹವಾಗಿದ್ದೇವೆ. ಆದರೆ ಭಾರತದ ಕಾನೂನಿನ ಅನ್ವಯ ಆ ವಿವಾಹ ಮಾನ್ಯವಾಗಿಲ್ಲ. ನಾವು 2020ರ ನವೆಂಬರ್​​ನಿಂದ ಪ್ರತ್ಯೇಕವಾಗಿದ್ದೇವೆ ಎಂದು ತಿಳಿಸಿದ್ದರು.

ಇದನ್ನೂ ಓದಿ:  ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ- 20 ವರ್ಷ ಕಠಿಣ ಜೈಲು; ಮೈಸೂರಿನಲ್ಲಿ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು

ರಜತ್​ ಬೇಡಿ ಕಾರು ಡಿಕ್ಕಿಯಿಂದ ಗಾಯಗೊಂಡಿದ್ದ ವ್ಯಕ್ತಿ ನಿಧನ; ಬಾಲಿವುಡ್​ ನಟನಿಗೆ ಹೆಚ್ಚಿತು ಸಂಕಷ್ಟ

(Nusrat Jahan opens up about her child’s father in Public At West Bengal)

Published On - 8:56 am, Thu, 9 September 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ