Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆರಿಗೆ ಆಗಿ ತಿಂಗಳಾಗುವ ಮೊದಲೇ ಕೆಲಸಕ್ಕೆ ಹಾಜರಾದ ಎಂಪಿ ನುಸ್ರತ್​ ಜಹಾನ್; ಮಗುವಿನ ತಂದೆ ಬಗ್ಗೆ ಮಾತನಾಡಿದ ನಟಿ

ನುಸ್ರತ್​ ಜಹಾನ್​ ವೈಯಕ್ತಿಕ ಬದುಕಿನ ಬಗ್ಗೆ ಸೋಷಿಯಲ್​ ಮೀಡಿಯಾದಲ್ಲಿ ಹಲವರು ವ್ಯಂಗ್ಯ ಮಾಡಿದ್ದರು. ನಟಿಗೆ ಕಾಲೆಳೆದಿದ್ದರು. ಮಗುವಿನ ತಂದೆಯ ಬಗ್ಗೆಯೂ ಪ್ರಶ್ನೆ ಮಾಡಿದ್ದರು.

ಹೆರಿಗೆ ಆಗಿ ತಿಂಗಳಾಗುವ ಮೊದಲೇ ಕೆಲಸಕ್ಕೆ ಹಾಜರಾದ ಎಂಪಿ ನುಸ್ರತ್​ ಜಹಾನ್; ಮಗುವಿನ ತಂದೆ ಬಗ್ಗೆ ಮಾತನಾಡಿದ ನಟಿ
ಮಗು ಹುಟ್ಟಿದ ಬಳಿಕ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ನುಸ್ರತ್ ಜಹಾನ್​
Follow us
TV9 Web
| Updated By: Lakshmi Hegde

Updated on:Sep 09, 2021 | 9:08 AM

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್​ ಸಂಸದೆ (TMC MP), ನುಸ್ರತ್​ ಜಹಾನ್​ (Nusrat Jahan)ಕಳೆದ ನವೆಂಬರ್​ನಲ್ಲಿ ಪತಿಯಿಂದ ಬೇರೆಯಾಗಿದ್ದಾರೆ. ಹಾಗೇ ಆಗಸ್ಟ್​ 26ರಂದು ಒಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಹುಟ್ಟಿ ಒಂದು ತಿಂಗಳೂ ಕಳೆದಿಲ್ಲ..ಜಹಾನ್​ ಇದೀಗ ತಮ್ಮ ಕೆಲಸ ಶುರು ಮಾಡಿದ್ದಾರೆ. ಮಗು ಜನಿಸಿದ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ನುಸ್ರತ್ ಜಹಾನ್​ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಹಾಗೇ ಮಗುವಿನ ತಂದೆಯ ಬಗ್ಗೆಯೂ ಮಾತನಾಡಿದ್ದಾರೆ.  

ನುಸ್ರತ್​ ಜಹಾನ್​ ವೈಯಕ್ತಿಕ ಬದುಕಿನ ಬಗ್ಗೆ ಸೋಷಿಯಲ್​ ಮೀಡಿಯಾದಲ್ಲಿ ಹಲವರು ವ್ಯಂಗ್ಯ ಮಾಡಿದ್ದರು. ನಟಿಗೆ ಕಾಲೆಳೆದಿದ್ದರು. ಮಗುವಿನ ತಂದೆಯ ಬಗ್ಗೆಯೂ ಪ್ರಶ್ನೆ ಮಾಡಿದ್ದರು. ತಮ್ಮ ಇನ್​ಸ್ಟಾಗ್ರಾಂ ಪೋಸ್ಟ್​ ಮೂಲಕ ಉತ್ತರ ನೀಡಿದ್ದ ನುಸ್ರತ್​ ನಿನ್ನೆ ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಅವರಾಗಿಯೇ ಮಗುವನ ತಂದೆ ಬಗ್ಗೆ ಮಾತು ತೆಗೆದರು. ‘ನಿಮ್ಮ ಮಗುವನ್ನು ಯಾವಾಗ ಸಾರ್ವಜನಿಕವಾಗಿ ತೋರಿಸುತ್ತೀರಿ’ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ನುಸ್ರತ್​ ಜಹಾನ್​, ‘ಈ ಪ್ರಶ್ನೆಯನ್ನು ನನ್ನ ಮಗುವಿನ ತಂದೆಯ ಬಳಿಯೇ ಕೇಳಬೇಕು..ಯಾಕೆಂದರೆ ಈ ಸಮಯದಲ್ಲಂತೂ ಅವರು ಹೊರಗಿನ ಯಾರಿಗೂ ಮಗುವನ್ನು ನೋಡಲು ಬಿಡುತ್ತಿಲ್ಲ’ ಎಂದು ಹೇಳಿದರು.

ತುಂಬು ಗರ್ಭಿಣಿಯಾಗಿದ್ದ ನುಸ್ರತ್ ಜಹಾನ್​ರನ್ನು ಆಗಸ್ಟ್​ 25ರಂದು ಬೆಂಗಾಳಿ ನಟ ಯಶ್​ ದಾಸ್​​ಗುಪ್ತಾ ಕೋಲ್ಕತ್ತದ ನಿಯೋಟಾ ಆಸ್ಪತ್ರೆಗೆ ದಾಖಲಿಸಿದ್ದರು. ಹೆರಿಗೆಯಾದ ಬಳಿಕವೂ ಕೂಡ, ನುಸ್ರತ್​ ಮತ್ತು ಆಕೆಯ ಮಗು ಇಬ್ಬರೂ ಚೆನ್ನಾಗಿದ್ದಾರೆ ಎಂದು ಮಾಹಿತಿ ನೀಡಿದ್ದರು. ನುಸ್ರತ್ ಜಹಾನ್​ 2019ರ ಜೂನ್​ 19ರಲ್ಲಿ ಟರ್ಕಿಯಲ್ಲಿ  ನಿಖಿಲ್​ ಜೈನ್ ಎಂಬುವರನ್ನು ವಿವಾಹವಾಗಿದ್ದರು. ಆದರೆ 2021ರಲ್ಲಿ ತಮ್ಮ ಮದುವೆ ಜೀವನದ ಬಗ್ಗೆ ಮಾತನಾಡಿದ್ದ ಅವರು, ನಾವಿಬ್ಬರೂ ಟರ್ಕಿಯಲ್ಲಿ ವಿವಾಹವಾಗಿದ್ದೇವೆ. ಆದರೆ ಭಾರತದ ಕಾನೂನಿನ ಅನ್ವಯ ಆ ವಿವಾಹ ಮಾನ್ಯವಾಗಿಲ್ಲ. ನಾವು 2020ರ ನವೆಂಬರ್​​ನಿಂದ ಪ್ರತ್ಯೇಕವಾಗಿದ್ದೇವೆ ಎಂದು ತಿಳಿಸಿದ್ದರು.

ಇದನ್ನೂ ಓದಿ:  ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ- 20 ವರ್ಷ ಕಠಿಣ ಜೈಲು; ಮೈಸೂರಿನಲ್ಲಿ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು

ರಜತ್​ ಬೇಡಿ ಕಾರು ಡಿಕ್ಕಿಯಿಂದ ಗಾಯಗೊಂಡಿದ್ದ ವ್ಯಕ್ತಿ ನಿಧನ; ಬಾಲಿವುಡ್​ ನಟನಿಗೆ ಹೆಚ್ಚಿತು ಸಂಕಷ್ಟ

(Nusrat Jahan opens up about her child’s father in Public At West Bengal)

Published On - 8:56 am, Thu, 9 September 21

ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?